ರಕ್ಷಣಾ ಕರ್ತವ್ಯ ನಿಷ್ಠೆಯಿಂದ ಮಾಡಿ
Team Udayavani, Dec 11, 2017, 12:19 PM IST
ಬೀದರ: ಪ್ರತಿಯೊಬ್ಬರು ಕಾನೂನು ನಿಯಮಗಳನ್ನು ಪಾಲಿಸಬೇಕು. ರಕ್ಷಣೆಯ ಕರ್ತವ್ಯವನ್ನು ನಿಷ್ಠೆ, ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿ ಬಾಬು ಕರೆ ನೀಡಿದರು.
ನಗರದ ಜಿಲ್ಲಾ ಗೃಹರಕ್ಷದ ದಳ ಕಚೇರಿ ಆವರಣದಲ್ಲಿ ಗೃಹ ರಕ್ಷಕ ದಳ ದಿನಾಚರಣೆ ನಿಮಿತ್ತ ನಡೆದ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸರೊಂದಿಗೆ ಗೃಹ ರಕ್ಷಕ ಸಿಬ್ಬಂದಿ ಕೈ ಜೋಡಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಮನೋಜಕುಮಾರ ಪಾಟೀಲ ಮಾತನಾಡಿ, ಪ್ರತಿಯೊಬ್ಬರ ರಕ್ಷಣೆ, ಕಾನೂನು ಪರಿಪಾಲನೆ ಮಾಡುವುದು, ರಸ್ತೆ ಸುರಕ್ಷತೆ ನಿಯಮ ಪಾಲಿಸುವಂತೆ ಅರಿವು ಮೂಡಿಸುವುದು, ಅಪಘಾತ ತಡೆಗಟ್ಟಲು ಸೂಕ್ತ ಮಾಹಿತಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಗೃಹ ರಕ್ಷಕ ದಳ ಕಚೇರಿಯಿಂದ ಶುರುವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಃ ಕಚೇರಿಗೆ ತಲುಪಿ ಮುಕ್ತಾಯಗೊಂಡಿತು. 250 ಗೃಹ ರಕ್ಷಕರು, ಪೊಲೀಸರು ಮತ್ತು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೊಗಲಪ್ಪ ಅವರನ್ನು ಸನ್ಮಾನಿಸಲಾಯಿತು. ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ಶ್ರೀಕಾಂತ ಅಲ್ಲಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್