ಕೋವಿಡ್‌ ಕಾರಣ ಹೇಳಬೇಡಿ, ಕಾರ್ಯಪ್ರವೃತ್ತರಾಗಿ

ಜಿಲ್ಲೆಯಲ್ಲಿ 634 ಗ್ರಾಮಗಳ ಪೈಕಿ 590 ಗ್ರಾಮಗಳಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇದೆ.

Team Udayavani, Jan 29, 2021, 5:37 PM IST

ಕೋವಿಡ್‌ ಕಾರಣ ಹೇಳಬೇಡಿ, ಕಾರ್ಯಪ್ರವೃತ್ತರಾಗಿ

ಬೀದರ: ಕಡತಗಳ ವಿಲೇವಾರಿ ವಿಳಂಬ ಸೇರಿದಂತೆ ಯಾವುದೇ ಕಾರ್ಯಕ್ಕೆ ಇನ್ಮುಂದೆ ಕೋವಿಡ್‌-19 ಕಾರಣ ಹೇಳಲೇಬಾರದು. ನಮ್ಮ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಡಿಸಿ ರಾಮಚಂದ್ರನ್‌ ಆರ್‌. ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಕಂದಾಯ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳ ಜತೆ ಸಭೆ ನಡೆಸಿ ಅವರು ಮಾತನಾಡಿದರು.

ಕೋವಿಡ್‌ ನಮ್ಮ ನಿತ್ಯದ ಕೆಲಸ ಕಾರ್ಯಗಳ ಮೇಲೆ ಕೆಟ್ಟ ರೀತಿಯ ಪರಿಣಾಮ ಬೀರಿತು. ಇದರಿಂದಾಗಿ ಯಾವುದೇ ಕಾರ್ಯಗಳ ವಿಳಂಬಕ್ಕೆ ಇದುವರೆಗೆ
ಎಲ್ಲರೂ ಕೋವಿಡ್‌-19 ಕಾರಣ ಹೇಳಿದ್ದೇವೆ. ಆದರೆ, ಈಗ ಹಾಗೆ ಹೇಳುವಂತಿಲ್ಲ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಿದರು.

ತಮ್ಮ ಕೆಲಸ ಕಾರ್ಯಗಳಿಗೆ ತಾವೇ ಮುಖ್ಯಸ್ಥರಿದ್ದಂತೆ ಎಂದು ಆಯಾ ವಿಷಯಗಳಿಗೆ ಇರುವ ವಿಷಯ ನಿರ್ವಾಹಕರ ಕಾರ್ಯವೈಖರಿ ಮಹತ್ವ ಮನವರಿಕೆ ಮಾಡಿದ ಡಿಸಿ, ಕಡತಗಳ ನಿರ್ವಹಣೆ ಎಲ್ಲಿಯೂ ನಿಲ್ಲದಂತೆ ನಿರಂತರತೆಗೆ ಒತ್ತು ಕೊಡಬೇಕು. ತಾವುಗಳು ತಮ್ಮ ಕೆಳಗಿನವರಿಗೆ ಸರಿಯಾದ ಮಾರ್ಗದರ್ಶನ ಮಾಡಿ ಅವರಿಂದ ಕೆಲಸ ತೆಗೆದುಕೊಳ್ಳಬೇಕು ಎಂದು ವಿಷಯ ನಿರ್ವಾಹಕರಿಗೆ ಕಿವಿಮಾತು ಹೇಳಿದರು.

ತಹಶೀಲ್ದಾರ್‌ಗೆ ಸೂಚನೆ: ಪರಿಹಾರ ಪೋರ್ಟಲ್‌ನಲ್ಲಿ ಪ್ರಗತಿ ಮಾಹಿತಿ ಅಳವಡಿಕೆ, 2020ನೇ ಸಾಲಿನ ನೆರೆ ಸಂತ್ರಸ್ತರ ಪುನರ್ವಸತಿ ಯೋಜನೆ ಅನುಷ್ಠಾನದ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ 634 ಗ್ರಾಮಗಳ ಪೈಕಿ 590 ಗ್ರಾಮಗಳಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇದೆ. ಇನ್ನು 44 ಗ್ರಾಮಗಳಲ್ಲಿ ಇರುವುದಿಲ್ಲ ಎನ್ನುವ ಮಾಹಿತಿ ಇದೆ. ಆದ್ದರಿಂದ ಆಯಾ ಗ್ರಾಮಗಳಿಗೆ ತಾವುಗಳು ಖುದ್ದು ಭೇಟಿ ನೀಡಿ, ಜಮೀನು
ಗುರುತಿಸಿ ಪ್ರಸ್ತಾವನೆ ಸಲ್ಲಿಸುವ ಕಾರ್ಯ ತ್ವರಿತಗತಿಯಲ್ಲಿ ನಡೆಸಬೇಕು ಎಂದು ತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ಸೂಚಿಸಿದರು.

ಜಿಪಂ ಸಿಇಒ ಸೂಚನೆ: ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ
ಸಂಬಂಧಿಸಿದಂತೆ ಜಿಲ್ಲೆಯ ಯಾವ ಪಂಚಾಯಿತಿ  ಗಳಲ್ಲಿ ಜಮೀನು ಲಭ್ಯವಿರುವುದಿಲ್ಲವೋ ಅಂತಹ ಕಡೆಗಳಲ್ಲಿ ಜಮೀನು ಗುರುತಿಸಿ ಆ ಬಗ್ಗೆ ಕೂಡಲೇ
ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಬೇಕು. ಈಗಾಗಲೇ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಗುರುತಿಸಿದ ಜಮೀನಿನ ಹದ್ದು ಬಸ್ತು ಮಾಡುವ ಬಾಕಿ ಕಾರ್ಯ ಶೀಘ್ರ ನಡೆಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಡಿಸಿ ರುದ್ರೇಶ ಗಾಳಿ, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ್‌, ಭುವನೇಶ ಪಟೇಲ್‌, ತಹಶೀಲ್ದಾರರಾದ ಗಂಗಾದೇವಿ ಸಿ.ಎಚ್‌.,
ಚಂದ್ರಶೇಖರ, ಸಾವಿತ್ರಿ ಸಲಗರ, ಅಣ್ಣರಾವ್‌ ಪಾಟೀಲ, ನಾಗಯ್ಯ ಹಿರೇಮಠ ಹಾಗೂ ವಿವಿಧ ತಾಲೂಕುಗಳ ಕಂದಾಯ ನಿರೀಕ್ಷಕರು ಇದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.