ಅಶಾಂತಿಗೆ ಅವಕಾಶ ಬೇಡ: ಎಸ್ಪಿ
Team Udayavani, Aug 22, 2017, 12:53 PM IST
ಬಸವಕಲ್ಯಾಣ: ಪರಸ್ಪರ ಸೌಹಾರ್ದ-ಶಾಂತಿಯುತವಾಗಿ ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಸೂಸೂತ್ರವಾದ ಆಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ ಹೇಳಿದರು. ಗಣೇಶೋತ್ಸವ ಹಾಗೂ ಬಕ್ರೀದ ಹಬ್ಬದ ನಿಮಿತ್ತ ನಗರ ಪೊಲೀಸ್ ಠಾಣೆಯಿಂದ ಸಿಪಿಐ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಈ ನೆಲದಲ್ಲಿ ಅಶಾಂತಿಗೆ ಅವಕಾಶ ನೀಡಬಾರದು ಎಂದರು. ಗಣೇಶ ಮೆರವಣಿಗೆ ಸಂದರ್ಭದಲ್ಲಿ ಸಮಯ ಮತ್ತು ನಿಯಮಗಳನ್ನು ಎಲ್ಲರೂ ಪಾಲೀಸಬೇಕು. ಮೆರವಣಿಗೆ ವೇಳೆ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿತರಿಗೆ ಸೂಚಿಸಿದರು. ಮದ್ಯ ಸೇವಿಸಿ ಸಮಸ್ಯೆ ಸೃಷ್ಟಿಸಲು ಯತ್ನಿಸಿದರೆ ಮಂಡಳಿಯವರು ಪೊಲೀಸರ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುವದು ಎಂದ ಅವರು, ಮೆರವಣಿಗೆಯಲ್ಲಿ ಡಿಜೆ ಬಳಸುವ ಸಂಬಂಧ ನಾಳೆ ಬೀದರನಲ್ಲಿ ನಡೆಯಲಿರುವ ಸಭೆಯಲ್ಲಿ ತಿಮಗೊಳಿಸಲಾಗುವುದು
ಎಂದರು. ಸಹಾಯಕ ಆಯುಕ್ತ ಶರಣಬಸಪ್ಪ ಕೊಟಪ್ಪಗೋಳ ಮಾತನಾಡಿ, ಗಣೇಶೋತ್ಸವಕ್ಕೆ ತನ್ನದೇ ಆದ ಇತಿಹಾಸ ಮತ್ತು ಹಿನ್ನೆಲೆ ಇದ್ದು, ಶ್ರದ್ಧೆ, ಭಕ್ತಿ, ನಿಷ್ಠೆಯಿಂದ ಉತ್ಸವ ಆಚರಿಸಬೇಕು. ಗಣೇಶೋತ್ಸವ ಒಂದು ಜಾತಿ ಧರ್ಮಕ್ಕೆ ಸೀಮಿತವಲ್ಲ. ಬೆರೆಯವರಿಗೆ ತೊಂದರೆ ಆಗದಂತೆ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.
ನಗರಸಭೆ ಅಧ್ಯಕ್ಷ ಮೀರ ಅಜರಲಿ ನವರಂಗ ಮಾತನಾಡಿ, ಗಣೇಶ ಉತ್ಸವದ ವೇಳೆ ಯಾವುದೇ ಸಮಸ್ಯೆಯಾಗದಂತೆ ನಗರ ಸಭೆಯಿಂದ ಅಗತ್ಯ ಸಹಾಯ, ಸಹಕಾರ ನೀಡಲಾಗುವುದು. ನಗರದ ರಸ್ತೆ ಗುಂಡಿಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು. ಮಂಠಾಳ ಸಿಪಿಐ ಶಿವನಗೌಡ ಪವಾಡಶೆಟ್ಟಿ ಮಾತನಾಡಿದರು. ತಹಶೀಲ್ದಾರ ಕೀರ್ತಿ, ನಗರಸಭೆ ಪೌರಾಯುಕ್ತ ಮಹ್ಮದ ಯುಸೂಫ್, ಜೆಸ್ಕಾಂ ಇಂಜಿನಿಯರ್ ಜಾಫರ್ ಉಪಸ್ಥಿತರಿದ್ದರು. ಎಸ್ಐ ಗುರು ಪಾಟೀಲ ಸ್ವಾಗತಿಸಿದರು. ಸಿಪಿಐ ಅಲಿಸಾಬ ಪ್ರಾಸ್ತಾವಿಕ ಮಾತನಾಡಿ, ನಿರೂಪಿಸಿದರು. ಜನಪ್ರತಿನಿ ಗಳು, ಮುಖಂಡರು, ಸಂಘ-ಸಂಸ್ಥೆ ಪದಾದಿಕಾರಿಗಳು, ಗಣ್ಯರು, ಗಣೇಶ ಮಂಡಳಗಳ ಪದಾದಿಕಾರಿಗಳು, ಶಾಂತಿ ಸಭೆ ಸದಸ್ಯರು, ಸಾರ್ವಜನಿಕರು ಭಾಗವಹಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ