ಡಾ| ಶಿವಕುಮಾರ ಶ್ರೀಗಳಿಗೆ ಶ್ರದ್ಧಾಂಜಲಿ
Team Udayavani, Jan 22, 2019, 10:49 AM IST
ಔರಾದ: ತ್ರಿವಿಧ ದಾಸೋಹಿ, ಶತಾಯುಷಿ ಡಾ| ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ತಾಲೂಕಿನ ಸಾಹಿತಿಗಳ ಬಳಗ ಹಾಗೂ ವಿವಿಧ ಸಂಘಟನೆಗಳ ಮುಖಂಡರಿಂದ ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಶ್ರದ್ಧಾಂಜಲಿ ಸಭೆ ನಡೆಯಿತು.
ಚಂದ್ರಕಾಂತ ನಿರ್ಮಳೆ ಮಾತನಾಡಿ, ಸಿದ್ಧಗಂಗಾ ಶ್ರೀಗಳು ಆಧುನಿಕ ಯುಗದ ಬಸವಣ್ಣರಾಗಿದ್ದರು. ಸರಳ ವ್ಯಕ್ತಿತ್ವದ ಮೂಲಕ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ ಮಹಾನ್ ಜೀವಿಯಾಗಿದ್ದರು. ಶ್ರೀಗಳು ಇಲ್ಲದ ಕರುನಾಡು ಬಡವಾಗಿದೆ ಎಂದರು.
ಹಿರಿಯ ಸಾಹಿತಿ ಮಾಣಿಕ ನೆಳಗೆ ಮಾತನಾಡಿ, ಸ್ವಾರ್ಥವೇ ತುಂಬಿ ತುಳುಕುತ್ತಿರುವ ಸಮಾಜದಲ್ಲಿ ಶ್ರೀಗಳ ನಿಸ್ವಾರ್ಥ ಕೊಡುಗೆ ಅನನ್ಯವಾಗಿದದ್ದು. ಅದರ ದೇಹ ನಮ್ಮಿಂದ ದೂರವಾದರೂ ಅವರು ಮಾಡಿರುವ ಒಳ್ಳೆಯ ಕಾರ್ಯಗಳು, ಬೋಧಿಸಿ ಧರ್ಮ ಮಾರ್ಗ, ಮಾನವೀಯ ಮೌಲ್ಯಗಳು ಅಜರಾಮರವಾಗಿವೆ ಎಂದರು.
ಅನೀಲಕುಮಾರ ಜಿರೋಬೆ ಮಾತನಾಡಿ, ಮಗುವಿನಂತಹ ಮನಸ್ಸು ಇರುವ ಶ್ರೀಗಳ ದೇಹ ಮಾತ್ರ ನಮ್ಮಿಂದ ದೂರವಾಗಿದೆ. ಅವರು ಮಾಡಿರುವ ಉತ್ತಮ ಕಾರ್ಯಗಳು ಭೂಮಂಡಲ ಇರುವ ತನಕ ಶಾಶ್ವತವಾಗಿ ಉಳಿಯುತ್ತವೆ ಎಂದರು.
ಪ್ರಕಾಶ ಘೂಳೆ, ನಾಗನಾಥ ಚಿಟಗೀರೆ, ಕೀರಣ ಉಪ್ಪೆ, ಚಂದ್ರಕಾಂತ ನಿರ್ಮಳೆ, ಸಿದ್ದು ಚಟ್ನಾಳ, ಶಿವರಾಜ ಅಲ್ಮಾಜೆ ಹಾಗೂ ಇನ್ನಿತರ ಸಂಘ ಸಂಸ್ಥೆಯ ಮುಖಂಡರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ