![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮರೆಯಾಗುತ್ತಿದೆ ನಾಟಕ ಸಂಸ್ಕೃತಿ: ರಜೀಯಾ ಬಳಬಟ್ಟಿ
Team Udayavani, Mar 6, 2021, 5:51 PM IST
![ಮರೆಯಾಗುತ್ತಿದೆ ನಾಟಕ ಸಂಸ್ಕೃತಿ: ರಜೀಯಾ ಬಳಬಟ್ಟಿ](https://www.udayavani.com/wp-content/uploads/2021/03/Untitled-1-185-620x372.jpg)
ಬೀದರ: ಸಿನಿಮಾ, ಧಾರವಾಹಿಗಳ ಭರಾಟೆ ನಡುವೆಯೂ ನಾಟಕ ಸಂಸ್ಕೃತಿ ಜೀವಂತಿಕೆಗೆ ಕಲೆ ಮತ್ತು ಕಲಾವಿದರ ಪ್ರೋತ್ಸಾಹ ಅಗತ್ಯ ಎಂದು ಹಿರಿಯ ಸಾಹಿತಿ ರಜೀಯಾ ಬಳಬಟ್ಟಿ ಹೇಳಿದರು.
ಜನಪದ ಕಲಾವಿದರ ಬಳಗ, ಅಖೀಲ ಕರ್ನಾಟಕಕಲಾವಿದರ ಒಕ್ಕೂಟ ಹಾಗೂ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಗರದ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ನಾಲ್ಕು ದಿನಗಳ ರಾಜ್ಯ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ನಿತ್ಯ ಪ್ರಸಾರವಾಗುವ ಧಾರವಾಹಿಗಳು ಮಹಿಳೆಯರ ಮನಸ್ಸು ಹಿಡಿದಿಟ್ಟಿವೆ. ಹೀಗಾಗಿ ಮಹಿಳೆಯರು ನಾಟಕ ಸೇರಿದಂತೆ ಚಟುವಟಿಕೆಗಳಲ್ಲಿ ಭಾಗವಹಿಸಲು ಮನಸ್ಸು ಮಾಡಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಆಸಕ್ತಿ ರೂಢಿಸಿಕೊಳ್ಳಬೇಕಿದೆ ಎಂದರು.
ಜ್ಞಾನ ಗಂಗಾ ವಿದ್ಯಾಪೀಠ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಹೇಡೆ ಮಾತನಾಡಿ, ಜನಪದ ಸಾಹಿತ್ಯದ ಸೊಗಡು ಮರೆಯಾಗುತ್ತಿರುವುದು ಬೇಸರದ ಸಂಗತಿ. ನಶಿಸಿ ಹೋಗುತ್ತಿರುವ ಜನಪದ ಸಂಸ್ಕೃತಿ ಉಳಿಸಿ-ಬೆಳೆಸಲು ಜನಪದ ಕಲಾವಿದರ ಬಳಗ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಹಿರಿಯ ರಂಗ ಕಲಾವಿದ ಚಂದ್ರಗುಪ್ತ ಚಾಂದಕವಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಳೇಬೇರುಗಳ ಜತೆ ಹೊಸ ಚಿಗರು ಬೆರೆತುಕೊಂಡುಜನಪದ ಸಾಹಿತ್ಯ, ಸಂಸ್ಕೃತಿ ಬೆಳೆಸಬೇಕಿದೆ ಎಂದು ಸಲಹೆ ನೀಡಿದರು.
ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಜನಪದಕಲಾವಿದರನ್ನು ಗುರುತಿಸಿ- ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಕರುನಾಡು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ಅತಿವಾಳೆ,ಸಾಹಿತಿ ರೂಪಾ ಪಾಟೀಲ, ಜಾನಪದ ಕಲಾವಿದ ಶಂಭುಲಿಂಗ ವಾಲ್ಖೋಡ್ಡಿ, ಸಾಣೇಹಳ್ಳಿಯ ಶಿವ ಸಂಚಾರ ತಂಡದ ಜೀವನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಇದ್ದರು. ಭಕ್ತಕುಂಬಾರ ನಿರೂಪಿಸಿದರು.
ನಾಟಕ ಪ್ರದರ್ಶನ ಇಂದು: ಫೆ.6ರಂದು ಸಂಜೆ 5 ಗಂಟೆಗೆ ಬಳ್ಳಾರಿ ಜಿಲ್ಲೆಯ ಪುರುಷೋತ್ತಮ ಹಂದ್ಯಾಳ ಮತ್ತು ತಂಡದಿಂದ “ದನ ಕಾಯುವವರ ದೊಡ್ಡಾಟ’ ನಾಟಕ ಪ್ರದರ್ಶನವಾಗಲಿದೆ. ಕೆವಿಕೆ ಮುಖ್ಯಸ್ಥಸುನೀಲಕುಮಾರ ಎನ್.ಎಂ. ಉದ್ಘಾಟಿಸುವರು.ಹಿರಿಯ ರಂಗ ಕಲಾವಿದ ಸಂಗಮೇಶ ನಾಶೀಗಾರ ಅಧ್ಯಕ್ಷತೆ ವಹಿಸುವರು. ಕನ್ನಡಾಂಬೆ ಗೆಳೆಯರಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ, ಎನ್ಎಸ್ ಎಸ್ಕೆ ನಿರ್ದೇಶಕ ವೀರಶೆಟ್ಟಿ ಪಟ್ನೆ, ಕರುಣಾಮಯ ಯುವಕ ಸಂಘದ ಅಧ್ಯಕ್ಷ ರಾಜಕುಮಾರ ಹೆಬ್ಟಾಳೆ,ಸಾಹಿತಿ ಭಾರತಿ ವಸ್ತ್ರದ, ಜಾನಪದ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಮ್ಮಾ ಸಂತಾಜಿ, ಜೈ ಕರವೇ ಜಿಲ್ಲಾಧ್ಯಕ್ಷ ಶ್ರೀಮಂತ ಸಪಾಟೆ, ಉದ್ಯಮಿ ದಯಾನಂದ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.