3 ತಿಂಗಳು ದುಡಿಯೋಣ ಬಾ ಅಭಿಯಾನ
ಮಾ.15ರಿಂದ ಮೂರು ತಿಂಗಳು ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ
Team Udayavani, Mar 16, 2021, 7:00 PM IST
ಬಸವಕಲ್ಯಾಣ : ಗ್ರಾಮೀಣ ಭಾಗದ ಅನೇಕ ಕುಟುಂಬಗಳು ಜೀವನ ನಿರ್ವಹಣೆಗಾಗಿ ವಲಸೆ ಹೋಗುವುದು ಮತ್ತು ನರೇಗಾ ಯೋಜನೆಯಿಂದ ಹೊರಗುಳಿದ ಕುಟುಂಬಗಳು ಸಕ್ರಿಯವಾಗಿ ಭಾಗವಹಿಸಬೇಕೆಂಬ ನಿಟ್ಟಿನಲ್ಲಿ ಮಾ.15ರಿಂದ ಮೂರು ತಿಂಗಳು ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಬೀರೇಂದ್ರಸಿಂಗ್ ಠಾಕೂರ್ ಹೇಳಿದರು.
ಭೋಸಗಾ ಗ್ರಾಮದಲ್ಲಿ ದುಡಿಯೋಣ ಬಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರ ಕೆಲಸ ಒದಗಿಸುವುದೇ ಅಭಿಯಾನದ ಮೂಲ ಉದ್ದೇಶ. ಅಭಿಯಾನದಿಂದ ಪ್ರತಿ ಕುಟುಂಬ ವರ್ಷದಲ್ಲಿ 100 ದಿನ ಕೆಲಸ ಮಾಡಲು ಅವಕಾಶ ಇರುತ್ತದೆ ಎಂದರು.
ಬೇಸಿಗೆ ಅವ ಧಿಯಲ್ಲಿ 60 ದಿನ ಕೆಲಸ ಮಾಡಿದ್ದಲ್ಲಿ 16500 ರೂ. ಗಳಿಸಬಹುದು. ಇದರಿಂದ ಅಗತ್ಯ ಬೀಜ, ರಸಗೊಬ್ಬರ, ಮಕ್ಕಳ ಶಾಲೆ-ಕಾಲೇಜು ಶುಲ್ಕ ಭರಿಸಲು ಅನುಕೂಲವಾಗುತ್ತದೆ ಎಂಬ ಮಾಹಿತಿಯನ್ನು ಗ್ರಾಪಂ ಸಿಬ್ಬಂದಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ತಾಪಂ ಸಹಾಯಕ ಕಾರ್ಯದರ್ಶಿ ಸಂತೋಷ ಚವ್ಹಾಣ ಮಾತನಾಡಿ, ಅಭಿಯಾನದಡಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಟ 50 ರೈತರ ಜಮೀನುಗಳಲ್ಲಿ ಬದು, ಕೃಷಿ, ತೆರೆದಬಾವಿ ನಿರ್ಮಾಣ, ಸೋಕ್ ಪಿಟ್, ಸಮಗ್ರ ಕೆರೆ ಅಭಿವೃದ್ಧಿ, ಬೋರ್ವೆಲ್ ರಿಚಾರ್ಜ್ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿ ಮಾಡಬಹುದು ಎಂದರು.
ಈ ವೇಳೆ ಟಿಸಿ ಶಿವರಾಜ ಪಾಟೀಲ, ತಾಲೂಕು ಐಇಸಿ ಸಂಯೋಜಕ ವೀರಾರೆಡ್ಡಿ. ಆರ್.ಎಸ್, ಗ್ರಾಪಂ ಕಾರ್ಯದರ್ಶಿ ಮಾರುತಿ ಜಮಾದಾರ್, ಅಶೋಕ, ಸುರೇಶ ರಾಠೊಡ, ಡಿಇಒ ಅಮಿತಾ ವಾಡೇಕರ್, ಬಿಎಫ್ಟಿ ರಾಮ ಸೇರಿದಂತೆ ಗ್ರಾಪಂ ಸದಸ್ಯರು, ಕೂಲಿ ಕಾರ್ಮಿಕರು ಇದ್ದರು. ನಂತರ ತಾಪಂ ಇಒ ಬೀರೇಂದ್ರಸಿಂಗ್ ಠಾಕೂರ್ ಕೂಲಿಕಾರ್ಮಿಕರ ಜತೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ