ಚೌತಿಗೆ ಬರುವನು ಪರಿಸರ ಸ್ನೇಹಿ ಗಣೇಶ


Team Udayavani, Aug 22, 2017, 11:51 AM IST

bid 2.jpg

ಬೀದರ: ಚಿತ್ರಕಲಾ ಪಠ್ಯ ಚಟುವಟಿಕೆಗಳ ಜತೆಗೆ ಇಲ್ಲಿನ ಚಿತ್ರಕಲಾ ಮಹಾವಿದ್ಯಾಲಯವೊಂದು ಮೂರು ದಶಕಗಳಿಂದ ಮಣ್ಣಿನ ಗಣೇಶ ವಿಗ್ರಹ ತಯಾರಿಸುವ ಮೂಲಕ ಸದ್ದಿಲ್ಲದೇ ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆಗೆ ಅರಿವು ಮತ್ತು
ಜಾಗೃತಿ ಮೂಡಿಸುತ್ತಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಭರಾಟೆ ನಡುವೆ ಅಲ್ಲಲ್ಲಿ ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ವರ್ಣಂಜಿತ ಗಣಪತಿಯ ಬಗ್ಗೆ ಆಸಕ್ತಿಯಿಂದಾಗಿ ಮಣ್ಣಿನ ಮೂರ್ತಿಗಳತ್ತ ಜನರ ನಿರಾಸಕ್ತಿ ಹೆಚ್ಚುತ್ತಿದೆ. ಚತುರ್ಥಿ ಹತ್ತಿರವಾಗುತ್ತಿದ್ದಂತೆ ಎಲ್ಲೆಡೆ ವರ್ಣರಂಜಿತ ವಿನಾಯಕನ ಮೂರ್ತಿಗಳು ರಾರಾಜಿಸುತ್ತವೆ. ಇದರಿಂದ ಪರಿಸರ ಸ್ನೇಹಿ ಮೂರ್ತಿಗಳು ಕಾಣಿಸಿಗುವುದೇ ಅಪರೂಪ. ಈ ಮಧ್ಯದಲ್ಲೂ ನಗರದ ಯೋಗೀಶ ಚಿತ್ರಕಲಾ ಕಾಲೇಜಿನ 13 ಜನ ವಿದ್ಯಾರ್ಥಿಗಳ ತಂಡ ಪ್ರತಿ ವರ್ಷ ಪರಿಸರ ಸ್ನೇಹಿ ಗಣಪನನ್ನು ತಯಾರಿಸುವ ಮೂಲಕ ಸೈ ಎನಿಸಿಕೊಳ್ಳುತ್ತಿದ್ದಾರೆ. ಆ ಮೂಲಕ ಜಲಚರಗಳ ಸಾವಿಗೆ ಕಾರಣವಾಗುವ ಬಣ್ಣದ ವಿಗ್ರಹಗಳ ಬಳಕೆ ಬೇಡ ಎನ್ನುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಗಣೇಶ ಅಪ್ಪಟ ಪರಿಸರದ ಪ್ರತೀಕನಾಗಿರುವ ಹಿನ್ನೆಲೆಯಲ್ಲಿ ಮಣ್ಣಿನಿಂದ ಕೂಡಿದ ವಿಗ್ರಹಗಳನ್ನಿಟ್ಟು ಪೂಜಿಸುವುದೇ ನಿಜವಾದ ಸಂಪ್ರದಾಯ. ಆದರೆ, ಬಣ್ಣಗಳ ಅಲಂಕಾರಿಕ ಗಣೇಶ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಂತೆ ಪರಿಸರ ಸ್ನೇಹಿ ಗಣಪ ಸೊರಗುತ್ತಿದ್ದಾನೆ. ಈ ಮಧ್ಯದಲ್ಲೂ ಕಾಲೇಜು ಪಾಠದೊಂದಿಗೆ ವಿದ್ಯಾರ್ಥಿಗಳು ಜೇಡಿ ಮಣ್ಣಿನಿಂದ ಮೂರ್ತಿಗಳನ್ನು ತಯಾರಿಸಿ ಪರಿಸರ ಕಾಳಜಿ ತೋರುತ್ತಿದ್ದಾರೆ. ಚತುರ್ಥಿ ಬರುತ್ತಿದ್ದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಸ್ನೇಹಿ ಗಣೇಶ ಹಬ್ಬ
ಆಚರಿಸುವಂತೆ ಕೇವಲ ಪತ್ರಿಕೆ ಜಾಹೀರಾತು ನೀಡಿ ಕೈ ತೊಳೆದುಕೊಳ್ಳುತ್ತಿದೆ. ಮಂಡಳಿ ಮಾಲಿನ್ಯದ ಪ್ರಮಾಣ ಪರೀಕ್ಷಿಸುತ್ತಿದೆ ಹೊರತು ಬಣ್ಣದ ಮೂರ್ತಿಗಳಿಂದ ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ಮಾರಾಟಗಾರರಲ್ಲಿ
ತಿಳಿವಳಿಕೆ ಮೂಡಿಸುವುದಾಗಲಿ, ಜನರಲ್ಲಿ ಜಾಗೃತಿಯನ್ನುಂಟು ಮಾಡುವಲ್ಲಿ ನಿರಾಸಕ್ತಿ ತೋರುತ್ತಿದೆ. ಈ ನಡುವೆಯೂ ಇಲ್ಲಿನ ಯೋಗೀಶ ಚಿತ್ರಕಲಾ ಕಾಲೇಜಿನಲ್ಲಿ ಮೂರು ದಶಕಗಳಿಂದ ವಿದ್ಯಾರ್ಥಿಗಳೇ ಮಣ್ಣಿನಿಂದ ಬೃಹತ್‌
ಗಣಪನನ್ನು ತಯಾರಿಸಿ ಪ್ರತಿಷ್ಠಾಪಿಸುತ್ತ ಬರುತ್ತಿದ್ದಾರೆ. ನಾಲ್ಕೈದು ವರ್ಷಗಳಿಂದ ಪರಿಸರ ಪ್ರೇಮಿಗಳಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಈ ಬಾರಿ 150 ವಿಗ್ರಹಗಳನ್ನು ತಯಾರಿಸುವ ಗುರಿ ಹೊಂದಿದ್ದಾರೆ. ಬೆಂಗಳೂರಿನಿಂದ ವಿಶೇಷವಾಗಿ ತಂದಿರುವ “ಬಾಂಬೆ ಕ್ಲೇ’ದಿಂದ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಮಣ್ಣಿನಲ್ಲಿ ಅಪರೂಪದ ಮೂರ್ತಿಗಳನ್ನು ತಯಾರಿಸುವುದು ಸುಲಭದ ಮಾತಲ್ಲ. ಕಲಾ ನೈಪುಣ್ಯತೆ ಹೊಂದಿದವರಿಂದ ಮಾತ್ರ ಇದು ಸಾಧ್ಯ. ಇಲ್ಲಿ 1ರಿಂದ 7 ಅಡಿ ಎತ್ತರದ ವಿಗ್ರಹಗಳನ್ನು ಸಿದ್ದಪಡಿಸಲಾಗಿದೆ. ಚೀನಾ ವಸ್ತುಗಳ ಮಾರಾಟ ನಿಷೇಧ ಕುರಿತು, ಸಂಗೀತ ನುಡಿಸುವ ರೂಪದ ವಿಗ್ರಹಗಳು, ಆಮೆ ಮೇಲೆ, ಇಲಿ ಮತ್ತು ಸರ್ಪದ ಮೇಲೆ ಆಸಿನನಾದ ಗಣಪನ ಮೂರ್ತಿಗಳು ಸಿದ್ಧಗೊಳ್ಳುದ್ದು, ಅಂತಿಮ ರೂಪ ಕೊಡಲಾಗುತ್ತಿದೆ. ರಂಗು ರಂಗಿನ ವಿಗ್ರಹಗಳ ಮಾರಾಟದ ಮಧ್ಯದಲ್ಲಿ ಮರೆಯಾಗುತ್ತಿರುವ ಪರಿಸರ ಸ್ನೇಹಿ ಗಣಪನನ್ನು ಖರೀದಿಸುವ ಮೂಲಕ ಮಣ್ಣಿನ ವಿಗ್ರಹಗಳಿಗೆ ಜೀವ ತುಂಬುತ್ತಿರುವ ಕಲಾ ವಿದ್ಯಾರ್ಥಿಗಳ ಬೆನ್ನು ತಟ್ಟಬೇಕಾಗಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.