ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ
ಕೆಎಂಫ್ ಮತ್ತು ಮಾದರಿಡೈರಿ ಫಾರ್ಮ್ ಕ್ಷೇತ್ರ ಭೇಟಿ ನೀಡಿ ಮಾಹಿತಿ ನೀಡಲಾಯಿತು.
Team Udayavani, Jan 18, 2021, 6:09 PM IST
ಬೀದರ: ಜನವಾಡಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕ ಪದ್ಧತಿಯಲ್ಲಿ ಹೈನುಗಾರಿಕೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಯಿತು. ತರಬೇತಿಯಲ್ಲಿ ಹೆಚ್ಚು ಹಾಲು ಕೊಡುವ ಸಾಮರ್ಥ್ಯವುಳ್ಳ ವಿವಿಧ ಆಕಳು ಮತ್ತು ಎಮ್ಮೆ ತಳಿಗಳು, ಗರ್ಭ ಧರಿಸಿದ ಹೈನು ರಾಸುಗಳ ಮತ್ತು ಕರುಗಳ ಪಾಲನೆ, ಜಾನುವಾರುಗಳ ಆರೋಗ್ಯ ನಿರ್ವಹಣೆಯಲ್ಲಿ ಸಮತೋಲನ ಪಶು ಆಹಾರದ ಮಹತ್ವ, ಜಾನುವಾರುಗಳಲ್ಲಿ ಬರುವ ರೋಗಗಳು ಹಾಗೂ ಹತೋಟಿ ಕ್ರಮಗಳು, ವೈಜ್ಞಾನಿಕ ಕೊಟ್ಟಿಗೆ ನಿರ್ಮಾಣ, ಸುಧಾರಿತ ಮೇವಿನ ಬೆಳಗಳ ಉತ್ಪಾದನೆ, ದನಗಳ ವಿಮೆ, ಶುದ್ಧ ಹಾಲು ಉತ್ಪಾದನೆ ಮಹತ್ವ, ಹಾಲಿನಲ್ಲಿರುವ ಘಟಕಗಳು ಮತ್ತು ಹಾಲಿನ ಮೌಲ್ಯವರ್ಧನೆ ಮತ್ತು ಹಾಲಿನಿಂದ ಬರುವ ವಿವಿಧ ಉತ್ಪನ್ನಗಳು ಮತ್ತು ಅವುಗಳ ಮಹತ್ವ ಮುಂತಾದ ವಿಷಯಗಳ ಕುರಿತು ತಜ್ಞ ವಿಜ್ಞಾನಿ ಹಾಗೂ ಅನುಭವಿ ರೈತರಿಂದ ತರಬೇತಿ ನೀಡಲಾಯಿತು. ಕೆಎಂಫ್ ಮತ್ತು ಮಾದರಿಡೈರಿ ಫಾರ್ಮ್ ಕ್ಷೇತ್ರ ಭೇಟಿ ನೀಡಿ ಮಾಹಿತಿ
ನೀಡಲಾಯಿತು.
ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ| ಡಿ. ದಿಲೀಪಕುಮಾರ ಕಾರ್ಯಕ್ರಮ ಉದ್ಘಾಟಿಸಿ, ಕೃಷಿಯೊಂದಿಗೆ ರೈತರು ಹೈನುಗಾರಿಕೆ
ಅಳವಡಿಸಿಕೊಂಡಲ್ಲಿ ಆರ್ಥಿಕ ಬೆಳವಣಿಗೆ ಸಾಧ್ಯ. ಇಂಥ ತರಬೇತಿಗಳಿಂದ ರೈತರಿಗೆ ಅಗತ್ಯ ಮಹತ್ವದ ವಿಷಯ ತಿಳಿಸಲು ಸಾಧ್ಯವಾಗುತ್ತದೆ ಎಂದರು.
ಶಿಬಿರಾರ್ಥಿ ಜಗದೀಶ ಬುಟ್ಟೆ ಮಾತನಾಡಿ,ವೈಜ್ಞಾನಿಕವಾಗಿ ಹೈನುಗಾರಿಕೆ ಮಾಡಿದ್ದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂದರು. ಹಬೀಬ್ ಮಿಯ್ನಾ ಮಾತನಾಡಿ, ಎಂಬಿಎ ಪದವಿ ಪಡೆದಿರುವ ತಾವು ಲಾಕ್ಡೌನ್ನಿಂದ ಕೆಲಸ ಕಳೆದುಕೊಂಡಿದ್ದೆ. ತರಬೇತಿಯಿಂದ ನನಗೂ ಹೈನುಗಾರಿಕೆ ಘಟಕ ಪ್ರಾರಂಭಿಸಲು ಆಸಕ್ತಿ ಬೆಳೆದಿದೆ ಎಂದರು. ಶರಣಬಸಪ್ಪಾ ಅನುಭವ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ