ಜ್ಞಾನ ಸಂಪಾದಿಸಿ ಭವಿಷ್ಯ ರೂಪಿಸಿಕೊಳ್ಳಿ


Team Udayavani, Jan 15, 2019, 9:33 AM IST

bell-5.jpg

ಬೀದರ: ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯವನ್ನು ಸರಿಯಾಗಿ ರೂಪಿಸಿಕೊಳ್ಳಲು ದುಶ್ಚಟಗಳಿಂದ ದೂರವಿರಬೇಕು ಮತ್ತು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ಹೇಳಿದರು.

ನಗರದಲ್ಲಿ ನಡೆದ ಗುರುನಾನಕ ಪಬ್ಲಿಕ್‌ ಶಾಲೆಯ ವಾರ್ಷಿಕೋತ್ಸವ ಸಮಾರಂದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಹೆಚ್ಚಾಗಿ ಒತ್ತು ಕೊಡಬೇಕು. ಅಲ್ಲದೆ ಆಧುನಿಕ ವಿಶ್ವದಲ್ಲಿ ಸಾಧನೆ ಮಾಡಬೇಕಾದರೆ ವಿದ್ಯಾರ್ಥಿಗಳು ಪುಸ್ತಕ ಹಾಗೂ ಆಧುನಿಕ ಎಲೆಕ್ಟ್ರಾನಿಕ್ಸ್‌ ಯಂತ್ರಗಳಿಗೂ ಮಹತ್ವ ನೀಡಬೇಕು. ಕಾಲಕ್ಕೆ ತಕ್ಕಂತೆ ಜ್ಞಾನ ಪಡೆದುಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಮಕ್ಕಳ ಓದಿಗೆ ಪಾಲಕರು ಕೂಡ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಕಾರ್ಯ ಮಾಡಬೇಕು ಎಂದರು.

ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದಿ ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು. ಭವಿಷ್ಯದಲ್ಲಿ ಎಲ್ಲರೂ ಕೈ ಬಿಟ್ಟರೂ ವಿದ್ಯೆಯು ನಿಮ್ಮನ್ನು ಎಂದೂ ಕೈ ಬಿಡುವುದಿಲ್ಲ ಎಂಬುವುದನ್ನು ಮನವರಿಕೆ ಮಾಡಿಕೊಳ್ಳಬೇಕು. ಕಲಿತಿರುವ ವಿದ್ಯೆ ಸದಾ ನಿಮ್ಮನ್ನು ಕಾಪಾಡುತ್ತದೆ. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಆಯಾ ಸಂದರ್ಭ ಅನುಸಾರವಾಗಿ ಸಮಾಲೋಚನೆಗಳನ್ನು ಏರ್ಪಡಿಸಲಾಗುತ್ತಿದ್ದು, ಹೆಚ್ಚು ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ಹಿಂದಿನ ದಿನಗಳಲ್ಲಿ ನಮಗೆಲ್ಲ ಇಂತಹ ಸದಾವಕಾಶಗಳು ದೊರಕುತ್ತಿರಲಿಲ್ಲ. ಆದರೆ, ಇಂದಿನ ಯುವಕರಿಗೆ ಎಲ್ಲ ತರಹದ ಅವಕಾಶಗಳು ದೊರೆಯುತ್ತಿದ್ದು, ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಪಶು ವಿಶ್ವವಿದ್ಯಾಲಯದ ಡೀನ್‌ ಎನ್‌.ಎ. ಪಾಟೀಲ ಮಾತನಾಡಿ, ವಿಶ್ವದಲ್ಲಿ ಭಾರತ ದೇಶದ ಜನ ಸಂಖ್ಯೆ 139 ಕೋಟಿಗಳಷ್ಟಿದ್ದರೂ ಸಹ ಇತ್ತೀಚೆಗೆ ವಿಶ್ವಮಟ್ಟದ ವಿಜ್ಞಾನಿಗಳ ಸಮ್ಮೇಳನದಲ್ಲಿ ಭಾಗವಹಿಸಿದ 4000 ವಿಜ್ಞಾನಿಗಳ ಪೈಕಿ ನಮ್ಮ ದೇಶದ ವಿಜ್ಞಾನಿಗಳ ಸಂಖ್ಯೆ ಕೇವಲ 04 ಆಗಿತ್ತು. ಇದು ದುಖಃಕರ ಸಂಗತಿಯಾಗಿದೆ. ಕಾರಣ ನಮ್ಮ ದೇಶದಲ್ಲಿ ವಿಜ್ಞಾನ ಕ್ಷೇತ್ರದ ಕಡೆಗೆ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸಬೇಕಾಗಿದೆ. ಅಲ್ಲಿ ಅನೇಕ ಅವಕಾಶಗಳು ಕೂಡ ಇವೆ ಎಂದು ವಿವರಿಸಿದರು.

ಬೀದರ ವಿಭಾಗದ ಸಹಾಯುಕ್ತ ಶಿವಕುಮಾರ ಶೀಲವಂತ ಮಾತನಾಡಿ, ಗುರು ನಾನಕ ಪಬ್ಲಿಕ್‌ ಶಾಲೆ ಒಳ್ಳೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳಲ್ಲಿ ಒಳೊಳ್ಳೆ ಸಾಧನೆಗಳನ್ನು ಮಾಡತೊಡಗಿದ್ದಾರೆ. ಇಂತಹ ಗುಣಮಟ್ಟದ ಶಿಕ್ಷಣ ನಿರಂತರವಾಗಿ ಮುಂದುವರಿಯಲಿ ಎಂದರು.

ಇದೇ ವೇಳೆ ತೆಲಂಗಾಣದ ಡಿಐಜಿ ಸುಭಾಷ ಧಮಾಲೆ ಅವರು ಶಿಕ್ಷಣ ಸಂಸ್ಥೆಯ ಸಾಧನೆ ಹಾಗೂ ಗುಣಮಟ್ಟದ ಶಿಕ್ಷಣದ ಕುರಿತು ಮಾತನಾಡಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಡಾ| ಸರದಾರ ಬಲಬೀರ್‌ ಸಿಂಗ್‌ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷೆ ರೇಷ್ಮಾ ಕೌರ, ಪ್ರಾಚಾರ್ಯ ಪವನಾ ಪ್ರಿಯಾ, ಮುಖ್ಯಗುರು ಆರಿಫ್‌ ಹಾದಿ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.