ಶಿಕ್ಷಣ ವ್ಯಾಪಾರೀಕರಣ ಸಲ್ಲದು: ಬೆಲ್ದಾಳ ಶ್ರೀ
Team Udayavani, Mar 22, 2019, 10:42 AM IST
ಬಸವಕಲ್ಯಾಣ: ಶಿಕ್ಷಣದ ವ್ಯಾಪಾರೀಕರಣದಿಂದ ಗ್ರಾಮೀಣ ಭಾಗದ ಶಿಕ್ಷಣದ ಮೇಲೆ ಪರಿಣಾಮ ಬೀಳುತ್ತಿದೆ ಎಂದು ಬಸವ ಮಹಾಮನೆ ಸಂಸ್ಥೆ ಅಧ್ಯಕ್ಷ ಸಿದ್ಧರಾಮ ಶರಣರು ಬೆಲ್ದಾಳ ಹೇಳಿದರು.
ಮುಡಬಿ ಗ್ರಾಮದ ವೆಂಕಟೇಶ್ವರ ಪ್ರಾಥಮಿಕ ಶಾಲೆಯ 9ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಬಡಜನರ ಪರವಾಗಿ ರೈತರ ಪರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಂಸ್ಥೆಯವರು ಮುಂದಾಗಿರುವುದು ಉತ್ತಮ ಕಾರ್ಯ ಎಂದರು.
ಹುಲಸೂರಿನ ಡಾ| ಶಿವಾನಂದ ಸ್ವಾಮೀಜಿ ಮಾತನಾಡಿ, ಇಂದು ಮಹಿಳೆಯರು ಏನು ಬೇಕಾದರು ಮಾಡಬಹುದು. ಅವರಲ್ಲಿ ದೊಡ್ಡ ಶಕ್ತಿಯಿದೆ. ಬುದ್ಧ, ಬಸವ, ಅಂಬೇಡ್ಕರ್ ಹೇಳಿದ ಹಾಗೆ ಮಕ್ಕಳಿಗೆ ಕಷ್ಟ ಪಟ್ಟು ಗುಣಮಟ್ಟದ ಶಿಕ್ಷಣ ಕಲಿಸಬೇಕು ಎಂದು ಹೇಳಿದರು. ಮುಡಬಿ ಪೊಲೀಸ್ ಠಾಣೆ ಪಿಎಸ್ಐ ವಸೀಮ್ ಪಟೇಲ್ ಮಾತನಾಡಿ, ಗುರಿ ಸಾಧಿ ಸಲು ಮನುಷ್ಯನಲ್ಲಿ ಛಲವಿರಬೇಕು. ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.
ಸಂಸ್ಥೆ ಅಧ್ಯಕ್ಷೆ ಮಂಜುಳಾ ಪ್ರಾಸ್ತಾವಿಕ ಮಾತನಾಡಿದರು. ಭಾಲ್ಕಿ ಸೂರ್ಯೋದಯ ಪಬ್ಲಿಕ್ ಶಾಲೆ ಸಂಸ್ಥಾಪಕಿ ಉಷಾ ಖಂಡ್ರೆ, ಮುಡಬಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ, ನ್ಯಾಯವಾದಿ ಶ್ರೀನಿವಾಸರಾವ್, ಮುಡಬಿ ಸಿಆರ್ಪಿ ಹಣಮಂತ ಆರ್.ಬಿ, ವಸಾಪ ತಾಲೂಕು ಅಧ್ಯಕ್ಷ ಕಲ್ಯಾಣರಾವ್ ಮದರಗಾಂವಕರ್, ವೀರೇಶ ಪಂಚಾಳ, ಸಿವಿಲ್ ಇಂಜಿನಿಯರ ಸಯ್ಯದ್ ಅಲ್ತಾಫ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ