72 ಗ್ರಾಪಂಗಳಿಗೆ ಚುನಾವಣೆ


Team Udayavani, Dec 24, 2020, 3:57 PM IST

BIDARA-TDY-1

ಬೀದರ: ಬೀದರ, ಔರಾದ ಮತ್ತು ಕಮಲನಗರ ತಾಲೂಕುಗಳಲ್ಲಿ ಡಿ. 27ರಂದು 2ನೇ ಹಂತದ ಮತದಾನ ನಡೆಯಲಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಬೀದರ 33, ಔರಾದ 21 ಮತ್ತು ಕಮಲನಗರ 18 ಸೇರಿ ಒಟ್ಟು 72 ಗ್ರಾಮ ಪಂಚಾಯಿತಿಗಳಿಗೆಮತದಾನ ನಡೆಯಲಿದೆ. ಈ ಮೂರು ತಾಲೂಕುಗಳು ಪುರುಷ 2,07,886 ಮತ್ತುಮಹಿಳೆಯರು 1,94,286, ಇತರೇ 7 ಸೇರಿಒಟ್ಟು 4,02,179 ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಲಿದ್ದಾರೆ. ಬೀದರನಲ್ಲಿ 204 ಕ್ಷೇತ್ರದಲ್ಲಿ 615 ಸದಸ್ಯ ಸ್ಥಾನಗಳಿಗೆ, ಔರಾದನಲ್ಲಿ133 ಕ್ಷೇತ್ರದಲ್ಲಿ 389 ಸದಸ್ಯ ಸ್ಥಾನಗಳಿಗೆ ಮತ್ತು ಕಮಲನಗರದಲ್ಲಿ 100 ಕ್ಷೇತ್ರಗಳಲ್ಲಿ 281 ಸದಸ್ಯ ಸ್ಥಾನಗಳಿಗೆ ಡಿ. 27ರಂದು ಚುನಾವಣೆ ನಡೆಯಲಿದೆ.

ಬೀದರ ತಾಲೂಕಿನಲ್ಲಿ ಒಟ್ಟು 43 ಸೂಕ್ಷ್ಮ, 32 ಅತೀಸೂಕ್ಷ್ಮ ಮತ್ತು 166 ಸಾಮಾನ್ಯ ಮತಗಟ್ಟಕೇಂದ್ರಗಳೆಂದು, ಔರಾದ ತಾಲೂಕಿನಲ್ಲಿ 30 ಸೂಕ್ಷ್ಮ, 39 ಅತೀ ಸೂಕ್ಷ್ಮ ಮತ್ತು 84 ಸಾಮಾನ್ಯಮತಗಟ್ಟೆಗಳೆಂದು, ಅದೇ ರೀತಿ ಕಮಲನಗರದಲ್ಲಿ23 ಸೂಕ್ಷ್ಮ, 11 ಅತೀ ಸೂಕ್ಷ್ಮ ಮತ್ತು 81 ಸಾಮಾನ್ಯ ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ. ಒಟ್ಟು 72 ಗ್ರಾಪಂಗಳ 1285 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸದೇ4 ಸ್ಥಾನ ಖಾಲಿ ಉಳಿದಿದ್ದು, 109 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿದ್ದು, 1172 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ಎಸ್‌ಸಿ 1007, ಎಸ್‌ಟಿ437, ಹಿಂದುಳಿದ ಅ ವರ್ಗದ 210, ಹಿಂದುಳಿದಬ ವರ್ಗ 20, ಸಾಮಾನ್ಯ 1715 ಸೇರಿ ಒಟ್ಟು 3389 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿಇರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂದೋಬಸ್ತ್ ಗೆ ವ್ಯವಸ್ಥೆ: ಎರಡನೇ ಹಂತದ ಮತದಾನದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು 37 ಪಿಎಸ್‌ಐಗಳು, 5 ಸಿಪಿಐಗಳು ಮತ್ತು 3 ಡಿಎಸ್ಪಿಅವರನ್ನು ನಿಯೋಜಿಸಲಾಗಿದೆ ಎಂದು ಎಸ್‌ಪಿ ನಾಗೇಶ ಡಿ.ಎಲ್‌. ಅವರು ತಿಳಿಸಿದ್ದಾರೆ.

ಚುನಾವಣಾ ಸಿಬ್ಬಂದಿಗೆ ತರಬೇತಿ :  ಜಿಲ್ಲೆಯಲ್ಲಿ ಎರಡನೇ ಹಂತದ ಮತದಾನ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ನಗರದ ರಂಗಮಂದಿರ ಮತ್ತು ಗುರುನಾನಕ್‌ ಶಾಲೆಯಲ್ಲಿ ನಡೆದ ಮತಯಂತ್ರಗಳ ತರಬೇತಿಯಲ್ಲಿ 278 ಮತಗಟ್ಟೆ ಅಧಿಕಾರಿಗಳು ಹಾಗೂ 278 ಸಹಾಯಕ ಮತಗಟ್ಟೆ ಅಧಿಕಾರಿಗಳು ಭಾಗವಹಿಸಿದ್ದರು. ಡಿಸಿ ರಾಮಚಂದ್ರನ್‌ ಆರ್‌. ಅವರು ತರಬೇತಿಸ್ಥಳಕ್ಕೆ ಭೇಟಿ ನೀಡಿ ತರಬೇತಿಯ ಬಗ್ಗೆ ಮಾಹಿತಿ ಪಡೆದರು. ಮತದಾನವು ಯಾವುದೇ ರೀತಿಯಲ್ಲಿ ಲೋಪವಾಗದಂತೆ ನಡೆಯಬೇಕು. ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಗೊಂದಲ ಏನೇ ಇದ್ದರೂ ಇಲ್ಲಿಯೇ ಕೇಳತಿಳಿದುಕೊಂಡು ಮತದಾನ ಅಚ್ಚುಕಟ್ಟಾಗಿ  ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.