ಶಾಸಕ ರಾಜಶೇಖರ ಮನೆ ಎದುರು ನೌಕರರ ಪ್ರತಿಭಟನೆ
ನಮ್ಮ ಘಟಕದ ಕೆಲವರನ್ನು ದೂರದ ಊರುಗಳಿಗೆ ವರ್ಗಾವಣೆ ಮಾಡಲಾಗಿದೆ.
Team Udayavani, Apr 17, 2021, 6:32 PM IST
ಹುಮನಾಬಾದ: ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ 10ನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಾಸಕ ರಾಜಶೇಖರ ಪಾಟೀಲ ಮನೆ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ನೌಕರರ ಸಂಘದ ಪದಾಧಿಕಾರಿಗಳು, ರಾಜ್ಯ ಸರ್ಕಾರ ಹೋರಾಟ ಹತ್ತಿಕ್ಕಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಹೋರಾಟಗಾರರನ್ನು ಬೆದರಿಸುತ್ತಿದೆ. ನಮ್ಮ ಘಟಕದ ಕೆಲವರನ್ನು ದೂರದ ಊರುಗಳಿಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಯುತ್ತದೆ. ಕೆಲ ಸಿಬ್ಬಂದಿಗಳು ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹೊಗುತ್ತಿದ್ದಾರೆ.
ಅವರುಗಳೂ ಚಿಂತನೆ ಮಾಡಬೇಕಿದೆ. ಯಾರಿಗಾಗಿ ಮುಷ್ಕರ ನಡೆದಿದೆ. ಯಾರ ಭವಿಷ್ಯಕ್ಕಾಗಿ ಅನೇಕರು ಸರ್ಕಾರದ ಶಿಕ್ಷೆಗೆ ಗುರಿಯಾಗುತ್ತಿದ್ದಾರೆ? ಎಂಬುವುದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ನಂತರ ರಸ್ತೆಗೆ ಬಂದ ಮುಷ್ಕರ ನಿರತ ಸಿಬ್ಬಂದಿ ಸಂಚರಿಸುತ್ತಿದ ಬಸ್ ತಡೆದು ಚಾಲಕ ಹಾಗೂ ನಿರ್ವಾಹಕರಿಗೆ ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗಳ ಭವಿಷ್ಯಕ್ಕಾಗಿ ಹೋರಾಟ ನಡೆಯುವ ಸಂದರ್ಭದಲ್ಲಿ ಹೇಡಿಗಳಂತೆ ಕೆಲಸಕ್ಕೆ ಹಾಜರಾಗಿದ್ದೀರಿ. ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ. ಆ ಎಲ್ಲ ಸೌಲಭ್ಯಗಳು ನಿಮಗೆ ಬೇಡವೆ?, ಸಾರಿಗೆ ನೌಕರರ ಸಂಘ ಬೇಡವೆ? ಎಂದು ಪ್ರಶ್ನಿಸಿ ಮನಃ ಪರಿವರ್ತನೆಗೆ ಪ್ರಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ