ಎಲ್ಲ ತಾಲೂಕುಗಳಲ್ಲಿ ದೂರು ಪೆಟ್ಟಿಗೆ ಸ್ಥಾಪನೆ
Team Udayavani, Oct 22, 2019, 3:10 PM IST
ಬೀದರ: ಸಾರ್ವಜನಿಕರ ಅಹವಾಲಿಗೆ ತುರ್ತಾಗಿ ಸ್ಪಂದಿಸಲು ಪಶು ಸಂಗೋಪನೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ದೂರುಪೆಟ್ಟಿಗೆ ಸ್ಥಾಪನೆಯ ಹೊಸ ಪ್ರಯೋಗಕ್ಕೆ ಸೋಮವಾರ ಖುದ್ದು ತಾವೇ ಚಾಲನೆ ನೀಡಿದರು.
ಬೆಳಗ್ಗೆಯಿಂದ ಸಂಜೆ ವರೆಗೆ ಸಮರೋಪಾದಿಯಲ್ಲಿ ಬೀದರ ಜಿಲ್ಲಾ ಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿ ದೂರುಪೆಟ್ಟಿಗೆ ಅಳವಡಿಸಿದರು. ಸಾರ್ವಜನಿಕರ ದೂರು ಪೆಟ್ಟಿಗೆ ನಿರ್ವಹಣೆ ಸರಿಯಾಗಿ ಆಗಬೇಕು. ಪ್ರತಿ ವಾರ ಪೆಟ್ಟಿಗೆಯನ್ನು ತೆರೆಯಬೇಕು. ಸಲ್ಲಿಕೆಯಾಗುವ ಅರ್ಜಿಗಳ ಬಗ್ಗೆ ದಾಖಲಾತಿ ಪುಸ್ತಕದಲ್ಲಿ ನಮೂದಿಸಬೇಕು. ತಹಶೀಲ್ದಾರ್ ಹಂತದಲ್ಲಿ, ಜಿಲ್ಲಾಧಿಕಾರಿಯವರ ಹಂತದಲ್ಲಿ, ಸಚಿವರ ಹಂತದಲ್ಲಿ ಎಂಬುದಾಗಿ ಅವುಗಳನ್ನು ವಿಂಗಡಿಸಿ ವಿಲೇವಾರಿಗೆ ಕ್ರಮ ವಹಿಸಬೇಕು. ಇದರ ನಿರ್ವಹಣೆಯನ್ನು ಸಂಪೂರ್ಣವಾಗಿ ತಹಶೀಲ್ದಾರರೇ ನೋಡಿಕೊಳ್ಳಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸಚಿವರು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ