ಬೀದರ್‌ನಲ್ಲಿ ಸಿಪೆಟ್‌ ಸ್ಥಾಪನೆ ಸಾಕಾರ; ಬಲ್ಲೂರ್ ಬಳಿ 10 ಎಕರೆಯಲ್ಲಿ ನಿರ್ಮಾಣಕ್ಕೆ ಸಿದ್ಧತೆ

3600 ಚದರ ಅಡಿಯಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಸತಿ ಗೃಹ ನಿರ್ಮಿಸುವ ಯೋಜನೆ ರೂಪಿಸಲಾಗಿದೆ.

Team Udayavani, Oct 17, 2022, 3:14 PM IST

ಬೀದರ್‌ನಲ್ಲಿ ಸಿಪೆಟ್‌ ಸ್ಥಾಪನೆ ಸಾಕಾರ; ಬಲ್ಲೂರ್ ಬಳಿ 10 ಎಕರೆಯಲ್ಲಿ ನಿರ್ಮಾಣಕ್ಕೆ ಸಿದ್ಧತೆ

ಬೀದರ: ಜಿಲ್ಲೆಯ ಜನರ ಬಹು ನಿರೀಕ್ಷಿತ ಕೇಂದ್ರೀಯ ಪೆಟ್ರೋಕೆಮಿಕಲ್‌ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರ(ಸಿಪೆಟ್‌) ಸ್ಥಾಪನೆ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಅ.18ರಂದು ಔರಾದ ತಾಲೂಕಿನ ಬಲ್ಲೂರ್‌ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಗಡಿ ನಾಡಿನಲ್ಲಿ ಶೈಕ್ಷಣಿಕ, ಔದ್ಯೋಗಿಕ ಬೆಳವಣಿಗೆಗೆ ಪೂರಕವಾಗಬಲ್ಲ ಯೋಜನೆ ಜಾರಿಗೆ ವೇಗ ಸಿಕ್ಕಂತಾಗಿದೆ.

ಜನ ಸಂಕಲ್ಪ ಯಾತ್ರೆ ಹಿನ್ನೆಲೆ ಅ.18ರಂದು ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಅವರು ಮಹತ್ವಕಾಂಕ್ಷಿ ಸಿಪೆಟ್‌ ಯೋಜನೆಗೆ ಭೂಮಿಪೂಜೆ ನೆರವೇರಿಸಲಿದ್ದು, ಡಿಸಿ ಗೋವಿಂದರೆಡ್ಡಿ ಮತ್ತು ಎಸ್‌ಪಿ ಕಿಶೋರ ಬಾಬು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗೆ ಸಜ್ಜಾಗಿದ್ದಾರೆ.

ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ ಬೀದರಗೆ ಘೋಷಿಸಿದ್ದ ಐಐಟಿ ಮಾದರಿ ಸಿಪೆಟ್‌ ಕೇಂದ್ರ ಹುಬ್ಬಳ್ಳಿಗೆ ಸ್ಥಳಾಂತರ ಯತ್ನ ನಡೆದಿದ್ದವು. ಆದರೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಭಗವಂತ ಖೂಬಾ ನೇಮಕವಾಗುತ್ತಿದ್ದಂತೆ ಪ್ರತಿಷ್ಠಿತ ಸಿಪೆಟ್‌ ಕೇಂದ್ರವನ್ನು ತವರು ಜಿಲ್ಲೆಯಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಕಾರ್ಯಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಸಾಥ್‌ ನೀಡಿದ್ದರು.

ಪ್ಲಾಸ್ಟಿಕ್‌-ಪಾಲಿಮರ್‌ ಉದ್ಯಮಕ್ಕೆ ಅವಶ್ಯವಾದ ವೃತ್ತಿ ಕೌಶಲ ತರಬೇತಿ ಒದಗಿಸುವುದು ಸಿಪೆಟ್‌ ಸಂಸ್ಥೆಯ ಉದ್ದೇಶ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇ.50 (90 ಕೋಟಿ ರೂ.) ಅಂದಾಜು ವೆಚ್ಚದಲ್ಲಿ ಸ್ಥಾಪನೆಯಾಗುವ ಸಿಪೆಟ್‌ ಕೇಂದ್ರಕ್ಕೆ ಒಟ್ಟು 10 ಎಕರೆ ಜಮೀನು ಅಗತ್ಯವಿದ್ದು, ಈ ಕೇಂದ್ರದಲ್ಲಿ ಸುಮಾರು 8300 ಚದರ ಅಡಿಯಲ್ಲಿ ಕಾಲೇಜು ಕಟ್ಟಡ, ಲ್ಯಾಬೋರೊಟರಿಸ್‌, ಸಿಬ್ಬಂದಿಗಳ ವಸತಿ ಗೃಹ, 3600 ಚದರ ಅಡಿಯಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಸತಿ ಗೃಹ ನಿರ್ಮಿಸುವ ಯೋಜನೆ ರೂಪಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ಸಿಪೆಟ್‌ನ ಮಹಾನಿರ್ದೇಶಕ ಶಿಶಿರ್‌ ಸಿನ್ಹಾ ನೇತೃತ್ವದ ಅಧಿಕಾರಿಗಳ ತಂಡ ಸಿಪೆಟ್‌ ಕೇಂದ್ರಕ್ಕಾಗಿ ಬೀದರ- ಔರಾದ ರಾಷ್ಟ್ರೀಯ ಹೆದ್ದಾರಿಯ ಬಲ್ಲೂರ ಗ್ರಾಮದ ಬಳಿ ಗುರುತಿಸಿದ್ದ 10 ಎಕರೆ ಜಮೀನು ಪರಿಶೀಲಿಸಿ ಒಪ್ಪಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಕೇಂದ್ರಕ್ಕಾಗಿ ಭೂಮಿ ಮಂಜೂರು ಮಾಡಿ ಆದೇಶಿಸಿದ್ದರು. ಜತೆಗೆ ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರದ ಸಹಯೋಗದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ “ಸಿಪೆಟ್‌’ ಆರಂಭಿಸುವ ಕುರಿತು ಸಿಎಂ ಘೋಷಿಸಿದ್ದರು.

ಇನ್ನು ಸಿಪೆಟ್‌ ಕೇಂದ್ರವನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಸಚಿವಾಲಯ ಚಿಂತನೆ ನಡೆಸಿದ್ದು, ಸದ್ಯ ಭಾಲ್ಕಿ ತಾಲೂಕಿನ ಹಾಲಹಳ್ಳಿಯ ಗುಲ್ಬರ್ಗಾ ವಿವಿಯ ಸ್ನಾತಕೋತ್ತರ ಕೇಂದ್ರದ ಕಟ್ಟಡದಲ್ಲಿ ಚಟುವಟಿಕೆ ನಡೆಸಲು ತೀರ್ಮಾನಿಸಿದೆ. ಸಿಪೆಟ್‌ ಸಂಸ್ಥೆಯ ಹಿರಿಯ ಅಧಿಕಾರಿಗಳ ತಂಡ ಈ ಸ್ಥಳವನ್ನು ಸಹ ಈಗಾಗಲೇ ಪರಿಶೀಲನೆ ನಡೆಸಿದೆ.

ರಾಜ್ಯದ 2ನೇ ಸಿಪೆಟ್‌ ಕೇಂದ್ರ
ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸಿಪೆಟ್‌ ಮೂಲಕ ಪ್ಲಾಸ್ಟಿಕ್‌ ಆಧಾರಿತ ಕೋರ್ಸ್‌ಗಳನ್ನು ನೀಡಿ ಯುವಕರಲ್ಲಿ ವೃತ್ತಿ ಕೌಶಲ ಹೆಚ್ಚಿಸುವುದರ ಜತೆಗೆ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತದೆ. ಪರಿಸರ ಸ್ನೇಹಿ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಿಸುವ ಮತ್ತು ಮರು ಬಳಸುವ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಉದ್ಯಮ ಸ್ಥಾಪಿಸಿ, ಹೇಗೆ ಉದ್ಯೋಗ ಸೃಷ್ಟಿ ಮಾಡಬೇಕೆಂಬುದನ್ನು ಕಲಿಸಿ ಕೊಡಲಿದೆ ಸಿಪೆಟ್‌. ಈ ಕೇಂದ್ರದಿಂದ ಪ್ರತಿವರ್ಷ ಸುಮಾರು 2000 ಯುವಕರಿಗೆ ಉದ್ಯೋಗ ಆಧಾರಿತ ತರಬೇತಿ ನೀಡಲಾಗುತ್ತದೆ. ರಾಜ್ಯದ ಮೈಸೂರು ಸೇರಿ ದೇಶದಲ್ಲಿ 40 ಸಂಸ್ಥೆಗಳಿದ್ದು, ಬೀದರ ರಾಜ್ಯದ ಎರಡನೇ ಸಂಸ್ಥೆಯಾಗಲಿದೆ.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.