ಕರ್ತವ್ಯ ಪಾಲನೆ ಎಲ್ಲರ ಜವಾಬ್ದಾರಿ


Team Udayavani, Nov 27, 2018, 12:12 PM IST

bid-3.jpg

ಬೀದರ: ಈ ದೇಶದ ಪ್ರತಿಯೊಬ್ಬ ಪ್ರಜೆ ಸಂವಿಧಾನಿಕ ಹಕ್ಕುಗಳು ಅನುಭವಿಸಲು ಮುಂದಾಗುತ್ತಾರೆ. ಆದರೆ, ಸಂವಿಧಾನಿಕ ಕರ್ತವ್ಯಗಳನ್ನು ಪಾಲಿಸದೇ ಇರುವುದು ವಿಪರ್ಯಾಸ. ಆದ್ದರಿಂದ ಪ್ರತಿಯೊಬ್ಬರು ಸಂವಿಧಾನವನ್ನು ಚೆನ್ನಾಗಿ ಅರಿತು ಅದರ ಆಶೆಯಗಳಡಿ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಮನಗೊಳಿ ಪ್ರೇಮಾವತಿ ಹೇಳಿದರು.

ನಗರದ ನೌಬಾದ್‌ನ ದಲಿತ ಮಹಾಸಭಾ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಮಾನವ ಬಂಧುತ್ವ ವೇದಿಕೆ ಹಾಗೂ ದಲಿತ ಮಹಾಸಭಾಗಳ ಸಹಯೋಗದಲ್ಲಿ ಭಾರತ ಸಂವಿಧಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹೊಂದಿದ್ದರೂ ಈ ದೇಶದ ಪ್ರತಿಯೊಬ್ಬ ಪ್ರಜೆ ಸಂವಿಧಾನವನ್ನು ತಾಯಿ ರೂಪದಲ್ಲಿ ಸ್ವೀಕರಿಸಿ ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ಕೋಮುವಾದ ತಡೆಗಟ್ಟಲು ಮುಂದೆ ಬರುವಂತೆ ಕರೆ ನೀಡಿದರು. 

ರಾಷ್ಟ್ರದ ಐಕ್ಯತೆ, ರಾಷ್ಟ್ರ ಲಾಂಛನ, ರಾಷ್ಟ್ರಗೀತೆ, ರಾಷ್ಟ್ರಧ್ವಜ ಇದೆಲ್ಲದರ ಬಗ್ಗೆ ಪ್ರತಿಯೊಬ್ಬರಿಗೆ ಗೌರವ ಇರಬೇಕು. ವಿಭಿನ್ನ ಭಾಷೆ ಹಾಗೂ ಸಂಸ್ಕೃತಿಯಿಂದ ಬದುಕುತ್ತಿರುವ ನಾವೆಲ್ಲರು ಈ ದೇಶದ ಸಂವಿಧಾನವನ್ನು ದೈವ ರೂಪವಾಗಿ ಪೂಜಿಸಬೇಕು. ಮತದಾನವೆಂಬ ವ್ಯವಸ್ಥೆ ಮೂಲಕ ಉತ್ತಮರನ್ನು ಚುನಾಯಿಸಿ ಅವರಿಂದ ಮೂಲಭೂತ ಸೌಕರ್ಯಗಳನ್ನು ಮಾಡಿಸಬೇಕು. ಆಗ ಮಾತ್ರ ನಾವು ಪ್ರಜಾಪ್ರಭುತ್ವದ ಪ್ರಭುಗಳಾಗಲು ಸಾಧ್ಯ ಎಂದರು.

ಭಾರತ ಸಂವಿಧಾನ ಬಹು ವಿಸ್ತಾರ ಹಾಗೂ ಶ್ರೇಷ್ಠ ಸಂವಿಧಾನವಾಗಿದೆ. ಇಲ್ಲಿ ಪ್ರತಿಯೊಬ್ಬರಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಹಕ್ಕುಗಳನ್ನು ನೀಡುವ ಮೂಲಕ ತನಗಿಷ್ಟವಾದುದನ್ನು ಸ್ವೀಕರಿಸುವ ಹಾಗೂ ತಿರಸ್ಕರಿಸುವ ಮುಕ್ತ ಅವಕಾಶ ಕಲ್ಪಿಸಿದ ಜಗತ್ತಿನ ಮೊದಲ ಸಂವಿಧಾನ ಎನಿಸಿಕೊಂಡಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌. ರಾಘವೇಂದ್ರ ಅವರು ಸಂವಾದಕರ ಪ್ರಶ್ನೆಗಳಿಗೆ ಉತ್ತರಿಸಿ, ಸಂವಿಧಾನವನ್ನು ಅಷ್ಟು ಸರಳವಾಗಿ ಬದಲಿಸಲು ಸಾಧ್ಯವಿಲ್ಲ. ಸಂವಿಧಾನ ತಿದ್ದುಪಡಿ ಅಗತ್ಯವಿದ್ದಾಗ ಅದು ಜನರ ಬಳಿ ಅಭಿಪ್ರಾಯ ಸ್ವೀಕರಿಸಿ, ಲೋಕಸಭೆ ಹಾಗೂ ರಾಜ್ಯಸಭೆ ಜೊತೆಗೆ ದೇಶದ ಅರ್ಧದಷ್ಟು ರಾಜ್ಯಗಳ ಶಾಸನ ಸಭೆಗಳಲ್ಲಿ 2/3 ಮೆಜಾರಿಟಿಯಲ್ಲಿ ಪಾಸಾಗಿ ರಾಷ್ಟ್ರಪತಿಗಳ ಅಂಕಿತ ಪಡೆಯಬೇಕಾಗುತ್ತದೆ. ನಮ್ಮ ವ್ಯತಿರಿಕ್ತ ವ್ಯವಸ್ಥೆ ಬಗ್ಗೆ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಂಡಲ್ಲಿ ನೈಜ ಪ್ರಜಾಪ್ರಭುತ್ವ ವಾದಿಗಳಾಗಲು ಸಾಧ್ಯ ಎಂದರು. 

ಅಧ್ಯಕ್ಷತೆ ವಹಿಸಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಾಸಿ ಚಂದ್ರಶೇಖರ ಮಾತನಾಡಿದರು. ಸರ್ಕಾರಿ ಬಾಲಕಿಯರ
ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಠಲದಾಸ ಪ್ಯಾಗೆ ವಿಶೇಷ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲೊಡ್ಡಿ, ದಲಿತ ಮಹಾಸಭಾ ಅಧ್ಯಕ್ಷ ಪ್ರದೀಪ ಜಂಜಿರೆ, ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ಮಹೇಶ ಗೋರನಾಳಕರ್‌, ವಸತಿ ನಿಲಯದ ಮೇಲ್ವಿಚಾರಕ ಬಕ್ಕಪ್ಪ, ಜೋಸೆಫ್‌, ವಿಲಾಸ ಮದನಕರ್‌, ರಮೇಶ, ಅರುಣ ಪಟೇಲ, ಮಧುಶ್ರೀ, ಲಕ್ಕಿ ಪ್ರಥ್ವಿರಾಜ ಸೇರಿದಂತೆ ಅನೇಕರು ಇದ್ದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.