ಬೀದರ್ : ದಕ್ಷಿಣ ಭಾರತದ ಮೊದಲ ಬಿಎಸ್ಪಿ ಶಾಸಕ ಜುಲ್ಫೇಕರ್ ಹಾಶ್ಮಿ ನಿಧನ
Team Udayavani, Apr 20, 2021, 12:22 PM IST
ಬೀದರ್ : ಬೀದರ್ ಕ್ಷೇತ್ರದ ಮಾಜಿ ಶಾಸಕ ಜುಲ್ಫೇಕರ್ ಹಾಸ್ಮಿ (57) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ತೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕಳೆದ ನಾಲ್ಕು ತಿಂಗಳಿಂದ ಡಯಾಲಿಸಿಸ್ ಗೆ ಒಳಗಾಗಿದ್ದು, ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್ನ ಆಸರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜುಲ್ಫೇಕರ್ ಹಾಸ್ಮಿ ಅವರ ಅಂತ್ಯಕ್ರಿಯೆ ತಾಲೂಕಿನ ಅಷ್ಟೂರಿನ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್
1994ರಲ್ಲಿ ಬಹುಜನ ಸಮಾಜ ಪಕ್ಷದಿಂದ ಬೀದರ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ದಕ್ಷಿಣ ಕ್ಷೇತ್ರದ ಮೊದಲ ಬಿಎಸ್.ಪಿ ಶಾಸಕರೆಂಬ ಹೆಗ್ಗಳಿಕೆ ಪಡೆದಿದ್ದರು. ನಂತರದ ಚುನಾವಣೆಗಳಲ್ಲಿ ಸೋಲುಂಡಿದ್ದರು.
ಕಳೆದ 30 ವರ್ಷದಿಂದ ರಾಜಕೀಯದಲ್ಲಿ ಸಕ್ರೀಯವಾಗಿದ್ದ ಹಾಶ್ಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲೂ ಗುರುತಿಸಿಕೊಂಡಿದ್ದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ, ವಿವಾದಾತ್ಮಕ ಹೇಳಿಕೆಯಿಂದ ಹೆಚ್ಚು ಗಮನ ಸೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್