ಕೌಟುಂಬಿಕ ಕಲಹ: ಅಬಕಾರಿ ಇಲಾಖೆ ಪಿಎಸ್ಐ ಆತ್ಮಹತ್ಯೆ
Team Udayavani, Feb 23, 2020, 3:55 PM IST
ಬೀದರ್: ಕೌಟುಂಬಿಕ ಕಲಹದಿಂದ ಬೇಸತ್ತು ಬಸವಕಲ್ಯಾಣ ಅಬಕಾರಿ ಇಲಾಖೆಯ ಪ್ರೊಬೇಷನರಿ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ರೇಖಾ ಕರಣಕುಮಾರ ಕೋರಿ (29) ಆತ್ಮಹತ್ಯೆಗೆ ಶರಣಾದ ಅಬಕಾರಿ ಇಲಾಖೆಯ ಪಿಎಸ್ಐ.
ಕಡಗಂಚಿ ಮೂಲದವರಾಗಿರುವ ರೇಖಾ ಅವರು ಬಸವಕಲ್ಯಾಣದ ಶಿವಪೂರ ರಸ್ತೆಯಲ್ಲಿ ಇರುವ ಸಂಜುಕುಮಾರ ನಾಗರಾಳೆ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರವಿವಾರ ಮಧ್ಯಾಹ್ನ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಮೃಪಟ್ಟಿದ್ದಾರೆ.
ಮೃತ ರೇಖಾ ಅವರಿಗೆ ಕೌಶಿಕ್ (7) ಮತ್ತು ಕರಿಧಾಂತ (1 ವರ್ಷ 5 ತಿಂಗಳು) ಇಬ್ಬರು ಗಂಡು ಮಕ್ಕಳಿದ್ದಾರೆ. ರೇಖಾ ಅವರು 7-8 ತಿಂಗಳಿನಿಂದ ಬಸವಕಲ್ಯಾಣ ಅಬಕಾರಿ ಇಲಾಖೆಯಲ್ಲಿ ಪಿ.ಎಸ್.ಐ ಅಂತ ಕತ೯ವ್ಯ ನಿವ೯ಹಿಸುತ್ತಿದ್ದರು. ಸದ್ಯ ಮೃತದೇಹವು ಬಸವಕಲ್ಯಾಣ ನಗರದ ಪಾಟೀಲ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿದ್ದು ತನಿಖೆ ಆರಂಭಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್