ಹಳ್ಳಿಗಳಲ್ಲಿ ಸಂಚರಿಸಿದ ರೈತ ಜಾಗೃತಿ ಜಾಥಾ


Team Udayavani, Oct 26, 2021, 12:14 PM IST

10jatha

ಹಟ್ಟಿಚಿನ್ನದಗಣಿ: ನಂದವಾಡಗಿ, ನಾರಾಯಣಪುರ, ರಾಂಪುರ 9ಎ ನಾಲೆಗಳ ನಿರ್ಮಾಣ, ದುರಸ್ತಿ ಹೆಸರಿನಲ್ಲಿ ಮಾಜಿ ಶಾಸಕ ಮಾನಪ್ಪ ಡಿ.ವಜ್ಜಲ್ ಹಾಗೂ ಬಿಜೆಪಿ ಸರ್ಕಾರ 4,500 ಕೋಟಿ ರೂ.ಗಳ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಲಿಂಗಸುಗೂರಿನ ಸಮಗ್ರ ನೀರಾವರಿ ಹಕ್ಕು ರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ 8ನೇ ದಿನದ ರೈತ ಜಾಗೃತಿ ಜಾಥಾವು ಸಮೀಪದ ಗೆಜ್ಜಲಗಟ್ಟಾ ಗ್ರಾಪಂ ಹಾಗೂ ಆನ್ವರಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಿತು.

ಕಳೆದ 8 ದಿನಗಳಿಂದ ನಡೆಯುತ್ತಿರುವ ಜಾಗೃತಿ ಜಾಥಾ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಪ್ರಚಾರದ ಅಂಗವಾಗಿ ಏರ್ಪಡಿಸಲಾದ ಬಹಿರಂಗ ಸಭೆಗಳಲ್ಲಿ ಆಯಾ ಗ್ರಾಮದ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಜಾಥಾವನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿದರು.

ಆನ್ವರಿ ಗ್ರಾಪಂ ಹಾಗೂ ಗೆಜ್ಜಲಗಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳನ್ನು ನಂದವಾಡಗಿ ಯೋಜನೆಯಿಂದ ಕೈಬಿಟ್ಟಿದ್ದು, ಕೂಡಲೇ ಯೋಜನೆಗೆ ಸೇರ್ಪಡೆಗೊಳಿಸಲು ಪತ್ರ ಬರೆದಿರುವ ವಿಚಾರವನ್ನು ರೈತ ಮುಖಂಡರು ಜಾಗೃತ ಸಭೆಯಲ್ಲಿ ನೆರೆದ ರೈತರ ಮುಂದಿಟ್ಟರು. ಆನ್ವರಿ ಹಾಗೂ ಗೆಜ್ಜಲಗಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳನ್ನು ನೀರಾವರಿಯಿಂದ ವಂಚಿಸಿ, ಮೋಸ ಮಾಡಿದ ರಾಜ್ಯ ಬಿಜೆಪಿ ಸರಕಾರ, ಮಾನಪ್ಪ ವಜ್ಜಲ್‌ ಮತ್ತು ಶಾಸಕ ಡಿ.ಎಸ್‌. ಹೂಲಿಗೇರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆಂದು ರೈತರು ಆಕ್ರೋಶಭರಿತರಾಗಿ ನುಡಿದರು.

ನವೆಂಬರ್‌ 8ರಂದು ಲಿಂಗಸುಗೂರಿನಲ್ಲಿ ನಡೆಯುವ ರೈತರ ಸಮಾವೇಶಕ್ಕೆ ಸುತ್ತಲಿನ ಗ್ರಾಮಗಳ ರೈತರೆಲ್ಲ ಒಗ್ಗಟ್ಟಿನಿಂದ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸುವುದಾಗಿ ರೈತ ಮುಖಂಡರಿಗೆ ತಿಳಿಸಿದರು.

ರೈತ ಮುಖಂಡ ಹಾಗೂ ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ, ಚಿನ್ನಪ್ಪ ಕೊಟ್ರಿಕಿ, ತಿಪ್ಪರಾಜ, ಶಾಂತಕುಮಾರ ಚಿಕ್ಕನಗನೂರು, ಆದೇಶ ನಗನೂರು, ತಿಪ್ಪಣ್ಣ ಚಿಕ್ಕಹೆಸರೂರು, ಬಸವರಾಜ ನಾಯಕ, ರಮೇಶ ತಳವಾರ, ಶರಣಬಸವ, ಶಿವನಗೌಡ ಹಿರೇಹೆಸರೂರು, ಅಮರೇಗೌಡ ಗುಂತಗೋಳ, ರಾಮಚಂದ್ರ ನಿಲೋಗಲ್‌, ನಾಗಪ್ಪ ತಳವಾರ, ಹೂವ್ವಪ್ಪಸ್ವಾಮಿ, ದುರುಗಪ್ಪ, ಚಂದಾಸಾಬ, ಮೌಲಪ್ಪ ಪಾಮನಕಲ್ಲೂರು, ಕೆ.ಆದಪ್ಪ, ಡಿ.ಜಿ.ಶಿವು ಗೆಜ್ಜಲಗಟ್ಟಾ, ಭೋಜಪ್ಪ ಗೆಜ್ಜಲಗಟ್ಟಾ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.