ರೈತರಿಗೆ ಪಶುಗಳ ಸಾಕಾಣಿಕೆ ತರಬೇತಿ ಅಗತ್ಯ: ನಾಡಗೌಡ


Team Udayavani, Sep 25, 2018, 1:02 PM IST

bid-2.jpg

ಬೀದರ: ಪಶುಗಳ ಸಾಕಾಣಿಕೆ ಕುರಿತು ರೈತರಿಗೆ ಸೂಕ್ತ ಮಾಹಿತಿ ಹಾಗೂ ತರಬೇತಿ ನೀಡಬೇಕು. ತರಬೇತಿದಾರರು ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ರೈತರು ತಮ್ಮ ಜಾನುವಾರುಗಳನ್ನು ಕಳೆದುಕೊಂಡು ಕಂಗಾಲಾಗುತ್ತಿದ್ದಾರೆ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆ ವಿವಿಧೆಡೆ ಕುರಿಗಳು ಮೃತಪಟ್ಟಿವೆ. ಯಾವ ಕಾರಣಕ್ಕೆ ಅವು ಮೃತಪಟ್ಟಿವೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಒಂದೇ ಶೆಡ್ಡಿನಲ್ಲಿ ಅವುಗಳನ್ನು ಇರಿಸಿದ್ದೇ ಅವುಗಳ ಸಾವಿಗೆ ಕಾರಣ ಎಂದು ತಿಳಿಸಿದರು.

ನಂತರ ಸಚಿವರು, ಕುರಿ ಸಾಕಾಣಿಕೆ ಮಾಡುವ ರೈತರಿಗೆ ಸೂಕ್ತ ತರಬೇತಿ ನೀಡಿಲ್ಲವೆ ಎಂದು ಪ್ರಶ್ನಿಸಿದರು. ತರಬೇತಿದಾರರು ಸೂಕ್ತ ತರಬೇತಿ ನೀಡದ ಕಾರಣ ಅವು ಮೃತಪಟ್ಟಿವೆ. ಒಂದೇ ಶೆಡ್ಡಿನಲ್ಲಿ ಜಾನುವಾರುಗಳನ್ನು ಇರಿಸಿದರೆ ಅವುಗಳಿಗೆ ರೋಗ ಬರುತ್ತದೆ. ಪ್ರತಿದಿನ ಹೊರಗಿನ ವಾತಾಣದಲ್ಲಿ ಅಲೆದಾಡಬೇಕು ಎಂಬುದು ಗೊತ್ತಿಲ್ಲವೆ ಎಂದು ಕಿಡಿಕಾರಿದ ಸಚಿವರು, ತರಬೇತಿ ನೀಡುವ ಅಧಿಕಾರಿಗೆ ತರಬೇತಿ ನೀಡಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದರ ಜಿಲ್ಲೆಯ ಒಂದು ಲಕ್ಷ ಪಶುಗಳಿಗೆ ಪಶು ಇಲಾಖೆಯಿಂದ ಚಿಪ್‌ ಅಳವಡಿಸುವ ಗುರಿ ಇದ್ದು, ಸದ್ಯ ಈವರೆಗೆ 50 ಸಾವಿರ ಜಾನುವಾರುಗಳಿಗೆ ಚಿಪ್‌ ಅಳವಡಿಸುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಕುರಿತು ಸಚಿವರು, ಚಿಪ್‌ ಅಳವಡಿಸುವ ಕಾರ್ಯಕ್ಕೆ ಅಧಿಕಾರಿಗಳು ಹೆಚ್ಚು ಮಹತ್ವ ನೀಡಬೇಕು ಎಂದು ಸೂಚಿಸಿದರು. ಅಲ್ಲದೆ, ಜಿಲ್ಲೆಯ ವಿವಿಧೆಡೆ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಟ್ಟಡ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಅವರು, ಯಾವ ಕಾರಣಕ್ಕೆ ಕಟ್ಟಡ
ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿವೆ. 

ಯಾರು ಗುತ್ತೆಗೆ ಪಡೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಬಹುತೇಕ ಕಟ್ಟಡ ಕಾಮಗಾರಿಗಳು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದ್ದು, ಅಧಿಕಾರಿಗಳು ಸೂಕ್ತ ಸಮಯಕ್ಕೆ ಕೆಲಸ ನಿರ್ವಹಿಸುತ್ತಿಲ್ಲ ಎಂದು ಮಾಹಿತಿ ನೀಡಿದರು. ಸೂಕ್ತ ಸಮಯಕ್ಕೆ ಕೆಲಸ ನಿರ್ವಹಿಸದ ಸಂಸ್ಥೆಗೆ ಯಾಕೆ ಗುತ್ತಿಗೆ ನೀಡುತ್ತಾರೊ ಗೊತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಗತ್ಯವಿದ್ದರೆ ಗೋಶಾಲೆಗಳನ್ನು ತೆರೆಯಲು ಕ್ರಮ ವಹಿಸಬೇಕು. ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕಾಲು ಮತ್ತು ಬಾಯಿ ರೋಗ ನಿವಾರಣೆ ಲಸಿಕಾ ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಜಿಲ್ಲೆಯ ಎಲ್ಲ ಹಸುಗಳಿಗೆ ಕಡ್ಡಾಯ ಲಸಿಕೆ ಹಾಕಿಸಲು ಕ್ರಮ ವಹಿಸಬೇಕು. ಯಾವೊಂದು ಹಸು ಕೂಡ ಲಸಿಕೆಯಿಂದ ವಂಚಿತವಾಗಬಾರದು ಎಂದು ತಿಳಿಸಿದರು.

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ರವೀಂದ್ರ ಭೂರೆ, ಡಾ| ಗೌತಮ ಅರಳಿ, ಸಿದ್ದಪ್ಪ ಪಾಟೀಲ, ಚಂದ್ರಶೇಖರ ಪಾಟೀಲ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಡಾ| ಶೇಷಪ್ಪ ಹಾಗೂ ಇತರರು ಇದ್ದರು. 

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.