ವಿಧವೆ-ನಿರ್ಗತಿಕರಿಗೆ ‘ಜಮಾತೆ’ ಆರ್ಥಿಕ ನೆರವು
Team Udayavani, Jan 15, 2022, 1:04 PM IST
ಬೀದರ: ಧಾರ್ಮಿಕ ಸಂಘಟನೆಯಾಗಿರುವ ಜಮಾಅತೆ ಇಸ್ಲಾಮೀ ಹಿಂದ್ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರದ ಜತೆಗೆ ನಿರ್ಗತಿಕರಿಗೆ ಆರ್ಥಿಕ ನೆರವು ನೀಡುವಂಥ ಕೆಲಸ ಮಾಡುತ್ತಿದೆ ಎಂದು ಸಂಘಟನೆ ರಾಜ್ಯ ಸಲಹಾ ಮಂಡಳಿ ಸದಸ್ಯ ಮುಹಮ್ಮದ ಆಸಿಫುದ್ದೀನ್ ಹೇಳಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಸ್ನೇಹ ಕೂಟದಲ್ಲಿ ಮಾತನಾಡಿದ ಅವರು, ಸ್ಥಾನೀಯ ಮಟ್ಟದಲ್ಲಿ 105 ವಿಧವೆಯರಿಗೆ ತಲಾ 500 ರೂ.ಗಳಂತೆ ಮಾಸಾಶನ, ಬಡ ರೋಗಿಗಳ ಅನುಕೂಲಕ್ಕಾಗಿ ಉಚಿತ ಆಂಬ್ಯುಲೆನ್ಸ್ ವ್ಯವಸ್ಥೆ, ಔಷಧ ವಿತರಣೆ ಮತ್ತು ಎಚ್ಆರ್ಎಸ್ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ನಿತ್ಯ ಬಡವರಿಗೆ ಊಟ ವಿತರಣೆ ಹೀಗೆ ಹತ್ತು ಹಲವು ಸೇವೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ರಾಷ್ಟ್ರದ ಸಮಸ್ಯೆಗಳಿಗೆ ಪರಿಹಾರಿ ಕಂಡುಕೊಳ್ಳುವುದು, ದೇಶದಲ್ಲಿ ಶಾಂತಿ ಮತ್ತು ಪ್ರಗತಿ ಸಾಧಿಸಲು ಪ್ರಯತ್ನ ಸಂಘಟನೆ ಮುಖ್ಯ ಉದ್ದೇಶ. ಸರ್ವಧರ್ಮಗಳ ಗುರುಗಳನ್ನು ಒಳಗೊಂಡ ಒಂದು ಸದ್ಭಾವನಾ ಮಂಚವನ್ನು ರಚಿಸಲಾಗಿದೆ. ಇದರ ಸಂಚಾಲಕರಾಗಿ ಗುರುನಾಥ ಗಡ್ಡೆ ಕೆಲಸ ನಿರ್ವಹಿಸುತಿದ್ದಾರೆ. ನ್ಯಾಯ ವಂಚಿತರಿಗೆ ನ್ಯಾಯ ಒದಗಿಸಲು ಎಪಿಸಿಆರ್ ಹಾಗೂ ಶಿಕ್ಷಣ ರಂಗದಲ್ಲಿ ಕೆಲಸ ನಿರ್ವಹಿಸಲು ಐಟಾ ಸಂಘಟನೆ ಕೆಲಸ ನಿರ್ವಹಿಸುತ್ತಿದೆ ಎಂದರು.
ಮುಹಮ್ಮದ ನಿಜಾಮುದ್ದಿನ್ ಮತ್ತು ಅಧ್ಯಕ್ಷ ಸೈಯ್ಯದ್ ಅಬ್ದುಲ್ ಸತ್ತಾರ ಮಾತನಾಡಿದರು. ಕೂಟದಲ್ಲಿ ಮುಹಮ್ಮದ ಆರಿಫುದ್ದೀನ್, ಮುಜ್ತಬಾ ಖಾನ್, ಮುಹಮ್ಮದ ನಜೀಬುದ್ದೀನ್, ನಸೀಮುನ್ನಿಸಾ, ತೌಹಿದಾ ಶಿಂಧೆ, ಮುಹಮ್ಮದ ಮುಜೀಬುದ್ದಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ