ಕಾರ್ಖಾನೆಯಲ್ಲಿ ಬೆಂಕಿ ಅವಘಡ

•ಬೆಂಕಿ ನಂದಿಸಲು 5 ವಾಹನ ಬಳಕೆ-ತಪ್ಪಿದ ಭಾರೀ ಅನಾಹುತ

Team Udayavani, Jul 16, 2019, 11:54 AM IST

BIDAR-TDY-2..

ಹುಮನಾಬಾದ: ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಓಂ ಎಂಟರ್‌ ಪ್ರೈಜಸ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ದೃಶ್ಯ.

ಹುಮನಾಬಾದ: ಪಟ್ಟಣ ಹೊರ ವಲಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತದ ಸಂಭವಿಸಿದೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಅಗ್ನಿ ಅವಘಡ ಸಂಭವಿಸಿದ ಓಂ ಎಂಟರ್‌ ಪ್ರೈಜಸ್‌ ಕಾರ್ಖಾನೆ ತೆಲಂಗಾಣದ ಹೈದರಾಬಾದ‌ ಮೂಲದ ಎಂ.ಡಿ.ಅಸೀಫ್‌ ಅವರಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರ್ಖಾನೆಯಲ್ಲಿ ಪೇಂಟಿಂಗ್‌ನಲ್ಲಿ ಮಿಶ್ರಣ ಮಾಡುವ ಕಿನ್ನಲ್ ಎಂಬ ಬಿಳಿ ರಾಸಾಯನಿಕ ದ್ರವ ಉತ್ಪಾದಿಸಲಾಗುತ್ತಿತ್ತು. ಬೆಳಗ್ಗೆ 6:45ರ ಸುಮಾರಿಗೆ ಕಾರ್ಖಾನೆಯಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಒಳಗೆ ಇದ್ದ ನಾಲ್ಕೈದು ಜನ ಕಾರ್ಮಿಕರು ಪ್ರಾಣ ಭೀತಿಯಿಂದ ಓಡಿ ಹೋಗಿದ್ದಾರೆ. ಅಲ್ಪ ಪ್ರಮಾಣದಲ್ಲಿದ್ದ ಬೆಂಕಿ ಕೆಲ ಹೊತ್ತಿನಲ್ಲೇ ಕೆನ್ನಾಲಿಗೆ ಚಾಚಿ ಧಗಧಗನೆ ಉರಿಯಿತು. ಹುಮನಾಬಾದ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ನಂದಿಸಲು ಯತ್ನಿಸಿದರು. ಆದರೂ ಪ್ರಯೋಜನವಾಗದ ಕಾರಣ ಬೀದರ್‌ ಮತ್ತು ಚಿಟಗುಪ್ಪದಿಂದ ಮತ್ತೆ 3 ವಾಹ‌ನ ತರಿಸಿದ ಸತತ 5ಗಂಟೆ ಪ್ರಯತ್ನಿಸಿದ ಬಳಿಕ ಬೆಂಕಿ ನಂದಿಸಲು ಸಾಧ್ಯವಾಯಿತು.

ಪೊಲೀಸರ ಹರಸಾಹಸ: ಕಾರ್ಖಾನೆಯಲ್ಲಿ ಬೆಂಕಿ ಕೆನ್ನಾಲಿಗೆ ಚಾಚುತ್ತಿದ್ದಾಗ, ಸಮೀಪಕ್ಕೆ ಹೋದರೆ ಗ್ಯಾಸ್‌ ತುಂಬಿದ ಭಾರೀ ಪ್ರಮಾಣದ ಬೈಲರ್‌ ನ್ಪೋಟಗೊಳ್ಳುವ ಭೀತಿಯಿಂದ ಪೊಲೀಸರು ಕಾರ್ಖಾನೆ ಆಸುಪಾಸು 300 ಅಡಿ ಅಂತರದಲ್ಲಿ ರಸ್ತೆಯಲ್ಲಿ ಯಾತರೂ ಸಂಚರಿಸದಂತೆ ಪೊಲೀಸರು ಮನವಿ ಮಾಡಿದರೂ, ಜನರು ರಸ್ತೆ ಮೇಲೆ ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಸಂಚಾರ ಮಾರ್ಗ ಬದಲು: ಈ ವೇಳೆ ಕಲಬುರಗಿ ಮತ್ತು ಹುಮನಾಬಾದ್‌ ಕಡೆಗೆ ಹೋಗಬೇಕಾದ ಸಾರಿಗೆ ಸಂಸ್ಥೆ ಬಸ್‌ ಸೇರಿದಂತೆ ವಿವಿಧ ವಾಹನಗಳಿಗೆ ಸತ್ಯದೀಪ್‌ ರಾಸಾಯನಿಕ ಕಾರ್ಖಾನೆ ಪಕ್ಕದ ರಸ್ತೆ ಮೂಲಕ ತೆರಳಲು ಸಿಪಿಐ ಜೆ.ಎಸ್‌.ನ್ಯಾಮಗೌಡರ್‌ ಅವರ ಆದೇಶದ ಮೇರೆಗೆ ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಬಸವರಾಜ ಅನುವು ಮಾಡಿಕೊಟ್ಟರು.

ಪರವಾನಗಿ ಬೇರೆ, ಉತ್ಪಾದನೆ ಬೇರೆ: ಕೆಲವು ವರ್ಷಗಳ ಹಿಂದೆ ವ್ಯಕ್ತಿಯೊಬ್ಬರು ರೈಸ್‌ಮಿಲ್ ಹೆಸರಲ್ಲಿ ಪಡೆದ ಪರವಾನಗಿಯನ್ನೇ ಇಟ್ಟುಕೊಂಡು ತೆಲಂಗಾಣದ ಹೈದರಾಬಾದ್‌ ಮೂಲದ ಎಂ.ಡಿ.ಆಸೀಫ್‌ ಪೇಂಟಿಂಗ್‌ನಲ್ಲಿ ಮಿಶ್ರಣ ಮಾಡುವ ಕಿನ್ನಲ್ ಉತ್ಪಾದಿಸುತ್ತಿದ್ದರು. ಉತ್ಪಾದನೆ ವಿಷ‌ಯ ಹಾಗಿರಲಿ, ಕಾರ್ಖಾನೆ ಪರವಾನಗಿ ಅವಧಿ 2019 ಜನವರಿ 1ಕ್ಕೆ ಪೂರ್ಣಗೊಂಡಿದ್ದರೂ ನವೀಕರಣ ಮಾಡಿಸಿಕೊಳ್ಳದಿರುವ ವಿಷಯ ದಾಖಲೆ ಪರಿಶೀಲನೆ ವೇಳೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸುರಕ್ಷತೆ ಕೊರತೆ ಪ್ರಕರಣ ದಾಖಲು: ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಅಪಾಯದಿಂದ ತಪ್ಪಿಸಿಕೊಳ್ಳಲು ಯಾವುದೇ ಸೌಲಭ್ಯ ಇಲ್ಲದಿರುವುದೇ ಈ ಅವಘಡಕ್ಕೆ ಕಾರಣ ಎಂದು ಆರೋಪಿಸಿ ಪ್ರತ್ಯಕ್ಷದರ್ಶಿಯೊಬ್ಬರು ನೀಡಿದ ದೂರು ಆಧರಿಸಿ, ಕಾರ್ಖಾನೆ ಮಾಲೀಕ ಎಂ.ಡಿ.ಆಸೀಫ್‌ ಮತ್ತು ಎಂ.ಡಿ.ಯುಸೂಫ್‌ ಅವರ ವಿರುದ್ಧ ಹುಮನಾಬಾದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಪಿಐ ಜೆ.ಎಸ್‌.ನ್ಯಾಮಗೌಡರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.