ಜಾನಪದ ಭಾರತದ ಶ್ರೀಮಂತ ಸಂಸ್ಕೃತಿ


Team Udayavani, Aug 25, 2018, 10:57 AM IST

bid-2.jpg

ಬೀದರ: ಜಾನಪದ ಸಾಹಿತ್ಯ ಭಾರತದ ಒಂದು ಶ್ರೀಮಂತ ಸಂಸ್ಕೃತಿಯಾಗಿದೆ. ನಮ್ಮ ಹಿರಿಯರು ಬಹಳ ಕಷ್ಟಪಟ್ಟು ಈ ಸಂಸ್ಕೃತಿ ಉಳಿಸಿಕೊಂಡು ಬಂದಿದ್ದಾರೆ. ಯುವಕರು ಜಾನಪದ ಸಂಸ್ಕೃತಿ ಉಳಿಸಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌. ಸೆಲ್ವಮಣಿ ಹೇಳಿದರು.

ನಗರದ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತು ನವದೆಹಲಿ, ಕರ್ನಾಟಕ
ಬರಹಗಾರರ ಮತ್ತು ಕಲಾವಿದರ ಸಂಘ ಬೀದರ ಹಾಗೂ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವ ಪೀಳಿಗೆ ಆಧುನಿಕತೆಗೆ ಭರಾಟೆಗೆ ಒಳಗಾಗಿ ಜಾನಪದ ಸಂಸ್ಕೃತಿ ಮರೆಯುತ್ತಿದೆ. ಜಾನಪದ ಹಾಡು, ನೃತ್ಯ, ಆಚರಣೆ ಎಲ್ಲವನ್ನು ಮರೆಯಾಗುತ್ತಿದ್ದು, ಜಾನಪದ ಸಂಸ್ಕೃತಿ ಉಳಿಸಲು ಯುವಕ-ಯುವತಿಯರು ಮುಂದಾಗಬೇಕು. ಪರಂಪರೆಗಳನ್ನು ಯಾವತ್ತೂ ಮರೆಯಾಗಬಾರದು ಎಂಬುದನ್ನು ಯುವ ಜನರಿಗೆ ತಿಳಿಸುವ ಕಾರ್ಯ ಕೂಡ ನಡೆಯಬೇಕು ಎಂದರು.

ಯುವಜನತೆ ಆಧುನಿಕ ಹುಚ್ಚು ಆಚರಣೆ ಬಿಟ್ಟು ಸ್ವಂತ ಜಾನಪದ ಕವಿತೆಗಳನ್ನು ರಚಿಸಿ ಹಾಡುವ ಪ್ರಯತ್ನ ಮಾಡಬೇಕು. ಆಧುನಿಕ ಸಿನಿಮಾ ಹಾಡುಗಳು ಕೇವಲ ಮನರಂಜನೆಗಾಗಿ ಇದ್ದರೆ, ಜಾನಪದ ಹಾಡುಗಳು ಹೃದಯ ತಟ್ಟುತ್ತವೆ. ಜಾನಪದ ಸಂಸ್ಕೃತಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುತ್ತದೆ ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಜಾನಪದ ಅಂದರೆ ಅದೊಂದು ಮಾನವೀಯ ಮೌಲ್ಯ. ಕಾಯಕದಿಂದ ಕೈಲಾಸ ಪಡೆಯುವ ವಿಧಾನ, ಚಾರಿತ್ರಿಕ ಅಂಶ. ಜನಪದ ಎಂದರೆ ತಾಯಿಯ ಹೃದಯ. ತಾಯಿ ಹೃದಯದಿಂದ ಬರುವ ನುಡಿಗಳೇ ಜಾನಪದವಾಗಿದೆ. ವಿದ್ಯಾರ್ಥಿನಿಯರು ಗ್ರಾಮೀಣ ಭಾಗದ ಜಾನಪದ ಸಂಸ್ಕೃತಿ ತಿಳಿದುಕೊಂಡು, ಮಕ್ಕಳಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು. ಮಗು ಜನ್ಮ ತಾಳಿದ ನಂತರದಿಂದ ಮನುಷ್ಯನ ಅತ್ಯದ ವರೆಗೆ ಜಾನಪದ ಸಂಸ್ಕೃತಿ ವಿವಿಧ ಹಂತಗಳಲ್ಲಿ ನೋಡಲು ಸಿಗುತ್ತದೆ. ಇಂದಿನ ದಿನಗಳಲ್ಲಿ ಶುಭ ಕಾರ್ಯಗಳಲ್ಲಿ ಜಾನಪದ ಹಾಡುಗಾರರ ಬೇಡಿಕೆ ಹೆಚ್ಚುತ್ತಿದೆ. ನಾವು ಆ ಸಂಸ್ಕೃತಿಯಿಂದ ದೂರ ಉಳಿದಿರುವುದೇ ಇದಕ್ಕೆ ಕಾರಣ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ ಮಾತನಾಡಿ, ಜಾನಪದದಲ್ಲಿ ಕುಟ್ಟುವ, ಬೀಸುವ, ಬುಲಾಯಿ, ಸೋಬಾನೆ, ಒಡಪು, ನೃತ್ಯ, ಊಟೋಪಚಾರ, ಜಾತ್ರೆಗಳು ಮತ್ತು ಉತ್ಸವಗಳು ಹೀಗೆ ಅನೇಕ ರೀತಿಯ ಹಾಡುಗಳು ಇದರಲ್ಲಿವೆ. ಇವುಗಳನ್ನು ಮತ್ತೆ ಸಮಾಜದಲ್ಲಿ ಬೆಳೆಸಲು ಸರ್ವರೂ ದುಡಿಯಬೇಕು ಎಂದರು. 

ಪ್ರಾಚಾರ್ಯ ಪ್ರೊ| ಮಧುಕರರಾವ್‌ ದೇಶಪಾಂಡೆ,  ಹಾರುದ್ರ ಡಾಕುಳಗಿ, ಲಕ್ಷ್ಮಣರಾವ್‌ ಕಾಂಚೆ, ಎಸ್‌.ಬಿ. ಕುಚಬಾಳ, ಪ್ರಕಾಶ ಕನ್ನಾಳೆ, ಪ್ರೊ| ಸುಂದರರಾಜ್‌, ಡಾ| ವಿದ್ಯಾ ಪಾಟೀಲ, ಡಾ| ಮಹಾನಂದ ಮಡಕಿ, ಲುಂಬಿಣಿ ಗೌತಮ್‌, ಮಲ್ಲಿಕಾರ್ಜುನ ಬಾವಗಿ, ಶಿವಶರಣಪ್ಪ ಗಣೇಶಪೂರ, ಕಾಶಿನಾಥ ಬಡಿಗೇರ್‌, ಮೋಹನ ಪಾಟೀಲ, ಸವಿತಾ, ಪೂಜಾ, ದೀಪಿಕಾ, ಅನುರಾಧಾ, ಸುಮಿತ್ರಾ, ಪ್ರಿಯಂಕಾ, ನಂದಿನಿ ಸೇರಿದಂತೆ ಅನೇಕರು ಇದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಬೀದರನಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪಿಸಲು 20 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಕೆಲವು ಕಾರಣಗಳಿಂದ ವಿಶ್ವವಿದ್ಯಾಲಯ ಹಾವೇರಿ ಜಿಲ್ಲೆ ಶಿಗ್ಗಾವಿಗೆ ವರ್ಗಗೊಂಡು ಅಲ್ಲಿಯೇ ಸ್ಥಾಪನೆಯಾಯಿತು. ಆದ್ದರಿಂದ ನಮ್ಮ ಭಾಗದ ಎಲ್ಲ ಜಾನಪದ ಕಲಾವಿದರ ಆಶಯದಂತೆ ಜಿಲ್ಲಾ ಪಂಚಾಯತ್‌ ವತಿಯಿಂದ 10 ಎಕರೆ ಸ್ಥಳ ನೀಡಿದರೆ ಕೂಡಲೇ ಜಾನಪದ ವಿಶ್ವವಿದ್ಯಾಲಯ ಕಟ್ಟಡ ಕಾರ್ಯ ಆರಂಭಿಸುತ್ತೇವೆ.  ಡಾ| ಜಗನ್ನಾಥ ಹೆಬ್ಟಾಳೆ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.