ಆಧುನೀಕರಣದಲ್ಲಿ ನಲಗುತ್ತಿದೆ ಜಾನಪದ: ಸ್ವಾಮಿ

ನಮ್ಮ ಪೂರ್ವಜರ ಬದುಕನ್ನು ಇಂದಿನ ಯುವ ಪೀಳಿಗೆ ಅನುಕರಿಸಬೇಕಿದೆ ಎಂದರು.

Team Udayavani, Feb 9, 2021, 4:49 PM IST

ಆಧುನೀಕರಣದಲ್ಲಿ ನಲಗುತ್ತಿದೆ ಜಾನಪದ: ಸ್ವಾಮಿ

ಬೀದರ: ಜಾನಪದ ಸಾಹಿತ್ಯದಲ್ಲಿ ವಿಜ್ಞಾನ, ಅಧ್ಯಾತ್ಮ ಹಾಗೂ ನೈತಿಕ ಮೌಲ್ಯ ಪ್ರತಿಪಾದನೆ ಇದೆ. ತಲೆಮಾರುಗಳಿಂದ ಕೊಡುಗೆಯಾಗಿ ಬಂದಿರುವ ಶ್ರೀಮಂತ ಜಾನಪದ ಸಂಸ್ಕೃತಿ ಇಂದು ಆಧುನೀಕರಣ ಭರಾಟೆಯಲ್ಲಿ ನಲಗುತ್ತಿದೆ. ಜಾನಪದ ಸಾಹಿತ್ಯ ಉಳಿದರೆ ನಾವು ಉಳಿದವು, ಜಾನಪದ ನಾಶವೇ ನಮ್ಮ ನಾಶ. ಸಂಘ-ಸಂಸ್ಥೆಗಳು, ಸಾಹಿತಿಗಳು ಉತ್ಕೃಷ್ಟ ಸಾಹಿತ್ಯ ಉಳಿಸುವ ಕಾರ್ಯ ಮಾಡಬೇಕಿದೆ ಎಂದು ಯುವ ಸಾಹಿತಿ ನಾಗಯ್ಯ ಸ್ವಾಮಿ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸೋಮವಾರ ಜಿಲ್ಲಾ ಜಾನಪದ ಪರಿಷತ್‌ ಹಮ್ಮಿಕೊಂಡಿರುವ ಜಿಲ್ಲಾ ದ್ವಿತೀಯ ಜಾನಪದ ಸಮ್ಮೇಳನದ ಜಾನಪದ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಯಿಂದ ವಿಶ್ವ ಜಾನಪದ ಸಾಹಿತ್ಯವಾಗಿ ಬೆಳೆದಿದೆ. ಮಕ್ಕಳಿಗೆ ಬಾಲ್ಯದಿಂದಲೇ ಜನಪದ ಸಂಸ್ಕೃತಿ ತಿಳಿಸಿಕೊಡುವ ಪ್ರಯತ್ನ ಪಾಲಕರು ಮಾಡಬೇಕು ಎಂದು ಸಲಹೆ ನೀಡಿದರು.

ಬ್ರಿಮ್ಸ್‌ ಪ್ರಾಧ್ಯಾಪಕಿ ಡಾ| ಶ್ರೇಯಾ ಮಹೇಂದ್ರಕರ್‌ ಮಾತನಾಡಿ, ಜನಪದ ಬಾಯಿಂದ ಬಾಯಿಗೆ ಪಾರಂಪರಿಕವಾಗಿ ಬಂದ ಪದಗಳಾಗಿವೆ. ಜನಪದದಲ್ಲಿ ಪುರಾಣ, ಗಾದೆ, ಒಗಟುಗಳು, ದೇವರ ಒಡಪುಗಳು ಕಲೆ ಇನ್ನಿತರ ಆಚರಣೆಗಳು ಬರುತ್ತವೆ. ಇದರ ಸೃಷ್ಟಿಕರ್ತ ಯಾರು ಎಂಬುದು ಗೊತ್ತಿಲ್ಲ. ಜನಪದದಲ್ಲಿ ಹೆಣ್ಣಿನ ಅಳಲು, ಭಾವನೆ, ಮಾನಸಿಕ ತಲ್ಲಣಗಳು, ಹಬ್ಬ ಹರಿದಿನಗಳ ಸಂಭ್ರಮ, ರೈತರ ಸುಗ್ಗಿ, ತವರು ಮನೆ, ಗೆಳತಿಯ ನೆನಪು, ಅಣ್ಣ-ತಮ್ಮ ಸಂಬಂಧ, ಹಳ್ಳಿಯ ಸೊಗಡು, ಬರುತ್ತವೆ. ಜಾನಪದ ಹಾಡುಗಳು ಸರಳ ರೀತಿಯಲ್ಲಿವೆ. ಕೇಳಲು ಮಧುರ, ಪ್ರಾಸಬದ್ಧವಾಗಿವೆ. ಎಲ್ಲಾ ಸಾಹಿತ್ಯದ ತಾಯಿಬೇರು ಜಾನಪದ ಸಾಹಿತ್ಯವಾಗಿದೆ ಎಂದರು.

ಸಾಹಿತಿ ಬಸವರಾಜ ಮೂಲಗೆ, ಶ್ರೀಕಾಂತ ಬಿರಾದಾರ, ಮಹಿಳಾ ಸಾಹಿತಿ ಶೈಲಜಾ ಹುಡಗೆ, ಸ್ವರೂಪಾ ಪಾಟೀಲ ಮಾತನಾಡಿದರು. ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಮೀರಾ ಖೇಣಿ ನಿರೂಪಿಸಿದರು. ಗಂಗಮ್ಮ ಫುಲೆ ವಂದಿಸಿದರು. ಈ ಸಂದರ್ಭದಲ್ಲಿ ರಮೇಶ ಸಲಗರ, ಲಕ್ಷ್ಮಣರಾವ ಕಾಂಚೆ, ಶಿವರಾಜ ಮೇತ್ರೆ, ಸಂಗಮೇಶ್ವರ ಮುರ್ಕೆ, ನಾಗಮ್ಮ ಭಂಗರಗಿ, ಓಂಕಾರ ಪಾಟೀಲ, ಅರವಿಂದ ಕುಲಕರ್ಣಿ, ರವಿದಾಸ ಕಾಂಬಳೆ, ಪ್ರಾರ್ಥನಾ ಇನ್ನಿತರರು ಸ್ವರಚಿತ ಕವನ ವಾಚನ ಮಾಡಿದರು.

ಜಾನಪದ ಶ್ರೀಮಂತಿಕೆಗೆ ಸ್ತ್ರೀಯರ ಕೊಡುಗೆ ಅನನ್ಯ 

ಜಾನಪದ ಕಲೆ ಮತ್ತು ಸಂಸ್ಕೃತಿ ಶ್ರೀಮಂತಿಕೆಗೆ ಮಹಿಳೆಯರ ಕೊಡುಗೆ ಅಪಾರವಾಗಿದೆ ಎಂದು ಯುವ ಸಾಹಿತಿ ಡಾ| ಮಹೇಶ್ವರಿ ಹೇಡೆ ಅಭಿಪ್ರಾಯಪಟ್ಟರು.  ನಗರದ ಕರ್ನಾಟಕ ಸಾಹಿತ್ಯದ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾ ಘಟಕ ಹಮ್ಮಿಕೊಂಡಿರುವ ಜಿಲ್ಲಾ ದ್ವಿತೀಯ ಜಾನಪದ ಸಾಹಿತ್ಯ ಸಮ್ಮೇಳನದ ಪ್ರಥಮ ಗೋಷ್ಠಿಯಲ್ಲಿ “ಜನಪದ ಸಂಸ್ಕೃತಿ ಹಾಗೂ ಮಹಿಳೆ’ ಕುರಿತು ಮಾತನಾಡಿದ ಅವರು, ಮಹಿಳೆಯರು ಜನಪದ ಹಾಡುಗಳ ಮೂಲಕ ಮನೆ ನಿರ್ವಹಣೆ ಜತೆಗೆ ಹೊಲ ಗದ್ದೆಗಳಲ್ಲಿ ದುಡಿಯುತ್ತಿದ್ದರು. ಗ್ರಾಮೀಣ ಸಂಸ್ಕೃತಿಯನ್ನು ನಿಜವಾದ ಜಾನಪದ ಸಂಸ್ಕೃತಿಯನ್ನಾಗಿಸಿದ ನಮ್ಮ ಪೂರ್ವಜರ ಬದುಕನ್ನು ಇಂದಿನ ಯುವ ಪೀಳಿಗೆ ಅನುಕರಿಸಬೇಕಿದೆ ಎಂದರು.

ಸಾಹಿತಿ ಪಾರ್ವತಿ ಸೊನಾರೆ ಮಾತನಾಡಿದರು. ಹಿರಿಯ ಸಾಹಿತಿ ವಿ.ಎಂ. ಡಾಕುಳಗಿ ಅಧ್ಯಕ್ಷತೆ ವಹಿಸಿದ್ದರು. ಬಸವ ದಳದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಸಂಸ್ಕೃತಿ ಚಿಂತಕ ಸಂಜೀವರೆಡ್ಡಿ, ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಚನ್ನಪ್ಪ ಸಂಗೊಳಗಿ, ಮದರ್‌ ತೇರೆಸಾ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷ ಸಂಜೀವಕುಮಾರ ಸ್ವಾಮಿ ಕಾರ್ಯಕ್ರಮದಲ್ಲಿದ್ದರು. ಉಪನ್ಯಾಸಕಿ ಡಾ| ಮಹಾನಂದಾ ಮಡಕಿ ಸ್ವಾಗತಿಸಿದರು. ಡಾ| ಸುನಿತಾ ಕೂಡ್ಲಿಕರ್‌ ನಿರೂಪಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.