ಸಿದ್ಧಿವಿನಾಯಕನ ದರ್ಶನಕ್ಕೆ ಪಾದಯಾತ್ರೆ

ಪಾದಯಾತ್ರೆಯಲ್ಲಿ ಹೊರಟ ಜನರನ್ನು ನೋಡುವುದೇ  ಒಂದು ಖುಷಿ. ಕೋವಿಡ್‌ ನಡುವೆಯೂ ಭಕ್ತರು ಭಕ್ತಿ-ಭಾವದಿಂದ ಯಾತ್ರೆ ನಡೆಸಿದರು.

Team Udayavani, Mar 3, 2021, 6:38 PM IST

ಸಿದ್ಧಿವಿನಾಯಕನ ದರ್ಶನಕ್ಕೆ ಪಾದಯಾತ್ರೆ

ಬೀದರ: ಅಂಗಾರಿಕಾ ಸಂಕಷ್ಟ ಚತುರ್ಥಿ ಬಂದರೆ ಸಾಕು ಭಕ್ತರ ದಂಡು ಸಿದ್ಧಿವಿನಾಯಕನ ದರ್ಶನಕ್ಕಾಗಿ ಪಾದಯಾತ್ರೆಗೆ ಹೊರಟು ನಿಲ್ಲುತ್ತದೆ. ವರ್ಷದಿಂದ ವರ್ಷಕ್ಕೆ ರಾಜ್ಯದ ಗಡಿ ಗ್ರಾಮದ ರೇಜಂತಲ್‌ನ ಸಿದ್ಧಿವಿನಾಯಕ (ಉದ್ಭವ ಗಣೇಶ) ಮಂದಿರಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್‌ ನಡುವೆಯೂ ಮಂಗಳವಾರ ಹೈದ್ರಾಬಾದ ರಸ್ತೆಯಲ್ಲಿ ಕಣ್ಣು ಹಾಯಿಸಿದಷ್ಟು ದೂರ ರೇಜಂತಲ್‌ಗೆ ಹೊರಟ ಪಾದಯಾತ್ರಿಗಳ ದಂಡು ಕಂಡುಬಂತು.

ಸಂಕಷ್ಟ ಚತುರ್ಥಿ ಮಂಗಳವಾರ ಬಂದರೆ ಅದಕ್ಕೆ “ಅಂಗಾರಿಕಾ’ ಎಂಬ ವಿಶೇಷ ಮಹತ್ವ ಇದೆ. ಭೂಲೋಕಕ್ಕೆ ಗಣೇಶ ಅಧಿದೇವತೆಯಾಗಿರುವಂತೆಯೇ ಮಂಗಳಕ್ಕೂ ಕೂಡ. ಈ ದಿನವನ್ನು ಶುಭ ದಿನವೆಂದು ಭಾವಿಸಲಾಗುತ್ತದೆ. ಗಣೇಶನಿಗೆ ಮಂಗಳವಾರ ಬಹುಪ್ರೀಯ ದಿನ. ಪಾದಯಾತ್ರೆ ಮೂಲಕ ಸಿದ್ಧಿವಿನಾಯಕನ ಸನ್ನಿದ್ಧಿಗೆ ತೆರಳಿದರೆ ಬೇಡಿಕೊಂಡ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ಪ್ರತೀತಿ ಇದ್ದು, ಕಳೆದ 20 ವರ್ಷಗಳಿಂದ ಭಕ್ತರು ಸುಮಾರು 22 ಕಿ.ಮೀ ದೂರ ಕಾಲ್ನಡಿಗೆ ಮೂಲಕ ಬರುತ್ತಾರೆ. ಬೀದರ ನಗರ ಮಾತ್ರವಲ್ಲ ವಿವಿಧ ತಾಲೂಕುಗಳಿಂದಲೂ ಪಾದಯಾತ್ರೆ ನಡೆಸಿದರು. ಮಕ್ಕಳು, ಮಹಿಳೆಯರು ಎನ್ನದೇ ಎಲ್ಲ ವಯೋಮಾನದವರು ಬರಿಗಾಲಲ್ಲಿಯೇ ಗಣೇಶನನ್ನು ಸ್ಮರಿಸುತ್ತ ಹೆಜ್ಜೆ ಹಾಕಿದರು.

ರೇಜಂತಲ್‌ದಲ್ಲಿ ಉದ್ಭವ ಗಣೇಶ ದೇವಸ್ಥಾನ ಇದ್ದು, ಪ್ರತಿ ವರ್ಷವೂ ಮೂರ್ತಿ ಬೆಳೆಯುತ್ತಲೇ ಇದೆ ಎಂಬ ನಂಬಿಕೆ ಇದೆ. ರೇಜಂತಲ್‌ ಸಮೀಪದ ಗುಡ್ಡಗಾಡು ಪ್ರದೇಶದಲ್ಲಿ ಸಣ್ಣದೊಂದು ಗಣೇಶ ಮಂದಿರ ಇತ್ತು. ಚಂದ್ರಯ್ಯ ರೇಜಂತಲ್‌ ಎಂಬುವರು ನಿತ್ಯ ಪೂಜೆ ಸಲ್ಲಿಸಿ ದೀಪ ಬೆಳಗಿಸುತ್ತಿದ್ದರು. ಗಣೇಶ ಮೂರ್ತಿ ಬೆಳೆಯಲಾರಂಭಿಸಿದ್ದರಿಂದ ಇದರ ಮಹಿಮೆ ಅರಿತ ಸುತ್ತಲಿನ ಜನತೆ ಗಣೇಶ ದರ್ಶನಕ್ಕೆ ಬರಲಾರಂಭಿಸಿದರು.

ನಂತರ ವಿಶಾಲವಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟ್‌ ಮೂಲಕ ಮಂದಿರ ಅಭಿವೃದ್ಧಿಪಡಿಸಲಾಗಿದೆ. ಸಂಕಷ್ಟ ಚತುರ್ಥಿ, ಹುಣ್ಣಿಮೆ ಸೇರಿದಂತೆ ಹಬ್ಬದ ದಿನಗಳಂದು ವಿಶೇಷ ಧಾರ್ಮಿಕ ಕೈಂಕರ್ಯ ನಡೆಸಿಕೊಂಡು ಬರಲಾಗುತ್ತಿದೆ. ಸಂಕಷ್ಟ ಚತುರ್ಥಿ ಮಂಗಳವಾರ
ಬಂದರೆ, ಕಾಲ್ನಡಿಗೆ ಮೂಲಕ ರೇಜಂತಲ್‌ ದೇವಸ್ಥಾನಕ್ಕೆ ಸಹಸ್ರಾರು ಭಕ್ತರ ದಂಡು ಹರಿದು ಬರುತ್ತಿದೆ.

ದೇವರ ದರ್ಶನ ಪಡೆಯಲು ಸೋಮವಾರ ರಾತ್ರಿಯಿಂದಲೇ ಜನರು ಹೈದ್ರಾಬಾದ ಹೆದ್ದಾರಿಗೆ ಇಳಿದಿದ್ದರು. ಸಾವಿರಾರು ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿದ್ದು, ಅದರಲ್ಲಿ ಬಹುತೇಕ ಬೀದರ ಜಿಲ್ಲೆಯವರೇ ಸೇರಿದ್ದರು. ತಂಡೋಪ ತಂಡವಾಗಿ ಪಾದಯಾತ್ರೆಯೊಂದಿಗೆ ಆಗಮಿಸಿದ್ದ ಭಕ್ತರು ಎರಡ್ಮೂರು ಗಂಟೆ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಚರ್ತುರ್ಥಿ ನಿಮಿತ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮ ನೆರವೇರಿದವರು. ದರ್ಶನಕ್ಕೆ ಬಂದ ಭಕ್ತರಿಗೆ ಮಾರ್ಗ ಮಧ್ಯ ಅಲ್ಲಲ್ಲಿ ಪ್ರಸಾದ, ಬಾಳೆ ಹಣ್ಣು, ನೀರು, ಚಹಾ ಮತ್ತು ಹಾಲಿನ ವ್ಯವಸ್ಥೆ ಮಾಡಲಾಗಿತ್ತು.

ರೇಜಂತಲ್‌ ಸಿದ್ಧವಿನಾಯಕನ ಬಳಿ ಒಳ್ಳೆಯ ಮನಸ್ಸಿನಿಂದ ಬೇಡಿಕೊಂಡದ್ದು ಸಿದ್ಧಿಸುತ್ತದೆ. ಕಾಲ್ನಡಿಗೆ ಮೂಲಕ ಸತತವಾಗಿ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಭಕ್ತರು ತಂಡೋಪ ತಂಡವಾಗಿ ಭಕ್ತಿ-ಭಾವದಿಂದ ಹೆಜ್ಜೆ ಹಾಕುತ್ತಾರೆ. ಪಾದಯಾತ್ರೆಯಲ್ಲಿ ಹೊರಟ ಜನರನ್ನು ನೋಡುವುದೇ  ಒಂದು ಖುಷಿ. ಕೋವಿಡ್‌ ನಡುವೆಯೂ ಭಕ್ತರು ಭಕ್ತಿ-ಭಾವದಿಂದ ಯಾತ್ರೆ ನಡೆಸಿದರು.
ರೇಣುಕಾ ಸಂಗಮೇಶ,
ಬೀದರ, ಪಾದಯಾತ್ರಿ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.