ಕಿಡಿಗೇಡಿಗಳ ಬಂಧಿಸಲು ಒತ್ತಾಯ
Team Udayavani, Mar 4, 2018, 12:44 PM IST
ಭಾಲ್ಕಿ: ನೆಲವಾಡ ಗ್ರಾಮದಲ್ಲಿಯ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಭಗ್ನಗೊಳಿಸಿರುವುದನ್ನು ಖಂಡಿಸಿ, ಶನಿವಾರ ಮರಾಠಾ ಸಮಾಜದ ಪ್ರಮುಖ ಜನಾರ್ಧನ ಬಿರಾದಾರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರಗೆ
ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜನಾರ್ಧನ ಬಿರಾದಾರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಭಾಲ್ಕಿ ತಾಲೂಕಿನಾದ್ಯಂತ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿ, ರಾಜ್ಯಭಾರ ಮಾಡಿದ, ಮರಾಠಾ ಸಮಾಜದ ಕೀರ್ತಿ ಪುರುಷ ಶಿವಾಜಿ ಮಹಾರಾಜರ ಪುತ್ಥಳಿಗೆ ಅವಮಾನ ಮಾಡಿರುವುದು ಸಮಸ್ಥ ಮರಾಠಾ ಸಮುದಾಯಕ್ಕೆ ಅವಮಾನ ಮಾಡಿದಂತೆ.
ಕಾರಣ ಕಿಡಿಗೇಡಿಗಳನ್ನು ಅತಿ ಶೀಘ್ರದಲ್ಲಿಯೇ ಬಂಧಿಸಬೇಕೆಂದು ಆಗ್ರಹಿಸಿದರು.
ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಮುಂಬರುವ ದಿನಗಳಲ್ಲಿ ಮರಾಠಾ ಸಮಾಜದಿಂದ ಭಾಲ್ಕಿ ಬಂದ್ ಮಾಡುವುದು ಸೇರಿದಂತೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಮರಾಠಾ ಸಮಾಜದ ಮುಖಂಡರಾದ ವೈಜಿನಾಥ ತಗಾರೆ, ಭರತ ತುಕದೆ, ಪ್ರದೀಪ ಬಿರಾದಾರ, ಪ್ರತಾಪ ತೀಲ, ಶರದ ದಾಪಕೆ, ಅಂಕುಶ ಡಿ., ಖಂಡೇರಾವ್ ಬಿರಾದಾರ, ದಿಲೀಪ ಬಿರಾದಾರ, ಪ್ರವೀಣಕುಮಾರ ಬಿರಾದಾರ, ಉಮಾಕಾಂತ ಪಾಟೀಲ, ಗುಣುವಂತ
ಮಾನಕೋಜಿ, ಅಮರ ಅವಧೂತ, ಜೋತಿಬಾ ಭೋಸಲೆ, ಪ್ರಶಾಂತ ಪವಾರ, ಭರತ ಬಿರಾದಾರ, ಕಿರಣ ಡುಕರೆ, ಸುರೇಶ ವಾಗಲೆ, ಬಾಲಾಜಿ ಮಾಲಿಪಾಟೀಲ, ರಾಜಕುಮಾರ ಹುಲಸೂರೆ, ಗೋಪಾಲ ಹುಣಸನಾಳೆ ಹಾಗೂ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ