ನರ್ಸರಿ ಮಾಲೀಕರಿಂದ ಮೋಸ: ಕ್ರಮಕ್ಕೆ ಮನವಿ
Team Udayavani, Dec 18, 2021, 4:59 PM IST
ದೇವದುರ್ಗ: ರೈತರಿಗೆ ಮೋಸ ಮಾಡಿದ ನರ್ಸರಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಸಮಿತಿ ಪದಾಧಿಕಾರಿಗಳು ಶುಕ್ರವಾರ ಲಿಂಗಸುಗೂರು ಡಿವೈಎಸ್ಪಿ ಎಸ್.ಎಸ್ ಹುಲ್ಲೂರು ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಪರವಾನಗಿ ಇಲ್ಲದೇ ನರ್ಸರಿಗಳು ಹಾಕಿಕೊಂಡು ರೈತರಿಗೆ ಮೋಸ ಮಾಡುತ್ತಿರುವ ಮಾಲೀಕರ ವಿರುದ್ಧ ಕ್ರಮಕ್ಕೆ ಈಗಾಗಲೇ ಸಂಬಂಧಪಟ್ಟ ತೋಟಗಾರಿಕೆ ಇಲಾಖೆ ಅಧಿಕಾರಿಗೆ ಮನವಿ ಮಾಡಲಾಗಿದೆ. ಇಲ್ಲಿವರೆಗೆ ಒಬ್ಬರ ವಿರುದ್ಧ ಕ್ರಮಕೈಗೊಂಡಿಲ್ಲ. ಪರವಾನಗಿ ಇಲ್ಲದಂತಹ ನರ್ಸ್ರಿ ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು. ಕಳಪೆ ಬೀಜಗಳು ಪೂರೈಸುವ ನರ್ಸರಿಗಳ ಮೇಲೆ ಸೂಕ್ತ ಕ್ರಮವಹಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮರಿಲಿಂಗ ಪಾಟೀಲ್, ಜಹಿರುದ್ಧೀನ್ ನಾಗುಂಡಿ, ರಂಗಪ್ಪ ನಾಯಕ ಸೇರಿದಂತೆ ಇತರರು ಇದ್ದರು.