ಔರಾದ ರೈತರ ಶೋಷಣೆಗೆ ಮುಕ್ತಿ: ಭರವಸೆ

•ತರಕಾರಿ ವ್ಯಾಪಾರಿಗಳ ಸಭೆ ಆಯೋಜನೆ •ಶೋಷಣೆ ತಪ್ಪಿಸುವುದಾಗಿ ಶಾಸಕರ ಅಭಯ

Team Udayavani, Aug 4, 2019, 1:21 PM IST

bidar-tdy-1

ಔರಾದ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ.

ಔರಾದ: ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿನ ಸಮಸ್ಯೆ ಬಗೆಹರಿಸಿ, ಅಲ್ಲಿ ನಡೆಯುತ್ತಿರುವ ರೈತರ ಶೋಷಣೆಗೆ ಮುಕ್ತಿ ನೀಡುವುದಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು, ರೈತ ಸಂಘದ ಸದಸ್ಯರು ಹಾಗೂ ಜನ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ.

ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ದಶಕಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಮತ್ತು ನಗದು ಹಣ ನೀಡುವುದು ಸೇರಿದಂತೆ ಇನ್ನಿತರ ಸಮಸ್ಯೆ ನಿವಾರಣೆ ಮಾಡಬೇಕೆಂದು ಒತ್ತಾಯಿಸಿ ಅಧಿಕಾರಿಗೆ ಲಿಖೀತ ಪತ್ರ ನೀಡುವುದಾಗಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಮಂತ ಬಿರಾದರ ತಿಳಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆಯ ಅಧಿಕಾರಿಗಳು ಮಾರುಕಟ್ಟೆಯಲ್ಲಿ ತಾಲೂಕಿನ ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ವಾರದಲ್ಲಿ ತಾಲೂಕಿಗೆ ಬಂದು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಮ್ಮ ರೈತರಿಗೆ ಸಮಸ್ಯೆಯಾದಗದಂತೆ ಹಾಗೂ ನಕಲಿ ಬಿಲ್ಗೆ ಮುಕ್ತಿ ನೀಡಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುವಂತೆ ಮಾಡುವುದಾಗಿ ಶಾಸಕ ಪ್ರಭು ಚವ್ಹಾಣ ಭರವಸೆ ನೀಡಿದ್ದಾರೆ.

ತಾಲೂಕು ಸೇರಿದಂತೆ ರಾಜ್ಯದ ರೈತರು ಭೀಕರ ಬರದಿಂದ ಕಂಗೆಟ್ಟು ಸಾಲದ ಸುಳಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರು ಅನ್ನದಾತರಾಗಿದ್ದು, ಅವರಿಗೆ ದ್ರೋಹ ಮಾಡುವುದು ಸರಿಯಲ್ಲ. ಅವರ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ಮುಂದಾಗುತ್ತೇನೆ ಎಂದು ತಿಳಿಸಿದ್ದಾರೆ.

ವ್ಯಾಪಾರಿಗಳ ಸಭೆ ನಿಗದಿ: ಉದಯವಾಣಿಯಲ್ಲಿ ಪ್ರಕಟವಾದ ‘ತರಕಾರಿ ಬೆಳೆದ ರೈತನಿಗಿಲ್ಲ ಮಾರುಕಟ್ಟೆ ಮೌಲ್ಯ’ ಎನ್ನುವ ವಿಶೇಷ ವರದಿಯಿಂದ ಜಾಗೃತರಾದ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿ ಅಮಜತಖಾನ್‌ ಸೋಮವಾರ ಪಟ್ಟಣದ ತರಕಾರಿ ವ್ಯಾಪಾರಿಗಳ ಸಭೆ ಹಮ್ಮಿಕೊಂಡಿದ್ದಾರೆ. ಪ್ರತಿಯೊಂದು ಅಂಗಡಿಯ ಮಾಲೀಕರು ಹಾಗೂ ದಲ್ಲಾಳಿಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದ ಅವರು ತಿಳಿಸಿದ್ದಾರೆ. ತಾಲೂಕಿನ ತರಕಾರಿ ಬೆಳೆದ ರೈತರಿಗೆ ಶೋಷಣೆ ಮಾಡುವ ಹಾಗೂ ವಾರಗಟ್ಟಲೆ ಮಳಿಗೆಗೆ ಬರುವಂತೆ ಮಾಡುತ್ತಿರುವ ವ್ಯಾಪಾರಿಗಳಿಗೆ ನೋಟಿಸ್‌ ನೀಡಿ, ಅವರ ಪರವಾನಗಿ ರದ್ದುಗೊಳಿಸಲಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.

ಕಾಟಾಚಾರದ ಸಭೆ ಬೇಡ: ಪಟ್ಟಣದ ತರಕಾರಿ ಮಾರುಕಟ್ಟೆಗೆ ನಿತ್ಯ ತರಕಾರಿ ತರುವ ತಾಲೂಕಿನ ಯನಗುಂದಾ, ತೇಗಂಪೂರ, ಮರಪಳ್ಳಿ, ಸುಂಧಾಳ, ಖಾಂಶೆಪೂರ ಗ್ರಾಮದ ರೈತರು, ಅಧಿಕಾರಿಗಳು ಸೋಮವಾರ ಸಭೆ ಹಮ್ಮಿಕೊಂಡಿರುವುದು ಸಂತೋಷದ ವಿಷಯ. ಆದರೆ ಸಭೆ ಹಾಗೂ ಅಧಿಕಾರಿಗಳು ನೀಡುವ ಭರವಸೆಗಳು ಕೇವಲ ಒಂದು ದಿನಕ್ಕೆ ಸಿಮೀತವಾಗದೆ ನಿರಂತರವಾಗಿ ಅವು ಕಾರ್ಯರೂಪಕ್ಕೆ ಬರಬೇಕು. ನಾವು ಬೆಳೆಸಿ ಮಾರುಕಟ್ಟೆಗೆ ತಂದ ತರಕಾರಿಗೆ ಅಂದೇ ನಮ್ಮ ಹಣ ನೀಡುವಂತೆ ಮಾಡಿ ನಮ್ಮ ಆರ್ಥಿಕ ಸಂಕಟ ದೂರ ಮಾಡಬೇಕು. ಇಲ್ಲವಾದಲ್ಲಿ ನಮ್ಮ ರೈತರು, ವ್ಯಾಪಾರಿಗಳು ಹೇಳಿದಂತೆ ಕೇಳಿಕೊಂಡು ವಾರಪೂರ್ತಿ ಅವರ ಅಂಗಡಿಗೆ ಅಲೆಯಬೇಕಾಗುತ್ತದೆ ಎನ್ನುವುದು ರೈತರ ಮಾತು.

ನಾವು ಬೆಳೆದ ತರಕಾರಿಗೆ ನಮ್ಮ ತಾಲೂಕಿನಲ್ಲೇ ಉತ್ತಮ ಬೆಲೆ ಸಿಗುತ್ತಿಲ್ಲ. ನೆರೆ ರಾಜ್ಯದಲ್ಲಿ ಉತ್ತಮ ಬೆಲೆ ಸಿಗುತ್ತಿದೆ. ಆದರೆ ಹೋಗಿ ಬರುವುದರಲ್ಲಿ ಸಾಕಾಗುತ್ತಿದೆ. ಇನ್ನೂ ಸಣ್ಣ ರೈತರು ತಮ್ಮಲ್ಲಿರುವ ತರಕಾರಿಗಳನ್ನು ತೆಗೆದುಕೊಂಡು ನೆರೆ ರಾಜ್ಯಕ್ಕೆ ಹೋದರೂ ಹಾನಿಯಾಗುತ್ತಿದೆ. ವರ್ಷಪೂರ್ತಿ ಹೊಲದಲ್ಲಿ ಕಷ್ಟಪಟ್ಟು ಬೆಳೆಸಿದ ತರಕಾರಿಯನ್ನು ಮಾರುಕಟ್ಟೆಗೆ ತಂದು ದಲ್ಲಾಳಿಗಳು ಹೇಳಿದ ಬೆಲೆಗೆ ನೀಡಿ ವಾರಪೂರ್ತಿ ಅಲೆದು, ನಕಲಿ ಬಿಲ್ ಪಡೆದುಕೊಂಡು ಹೋಗುವ ಸ್ಥಿತಿ ಗಡಿ ನಮ್ಮದಾಗಿದೆ ಎಂಬುದು ರೈತರ ಅಳಲು.

ಲಿಂಗಾಯತ ಸಮಾಜದಿಂದ ಹೋರಾಟ: ಪಟ್ಟಣದ ತರಕಾರಿ ವ್ಯಾಪಾರಿಗಳು ಹಲವು ದಶಕಗಳಿಂದ ರೈತರ ಶೋಷಣೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳುವ ತನಕ ಹಾಗೂ ತಪ್ಪಿತಸ್ಥರನ್ನು ಅಧಿಕಾರಿಗಳು ದಂಡಿಸುವ ತನಕ ರೈತರ ಪರವಾಗಿ ಲಿಂಗಾಯತ ಸಮಾಜದಿಂದ ಹೋರಾಟ ಮಾಡಲಾಗುತ್ತದೆ. ಅಧಿಕಾರಿಗಳು ಕೂಡಲೆ ಜಾಗೃತರಾಗಬೇಕು. ಇಲ್ಲವಾದಲ್ಲಿ ತಮ್ಮ ಕುರ್ಚಿ ಬಿಟ್ಟು ಹೋಗಲಿ ಎಂದು ಲಿಂಗಾಯತ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

•ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.