ಕಸಾಪದಿಂದ ಡಾ| ಹಳಕಟ್ಟಿ ಜಯಂತಿ ಆಚರಿಸಲಿ

ವಚನ ಶಾಸ್ತ್ರ ಸಾರ ಬೃಹತ್‌ ಗ್ರಂಥಗಳು ಸಾಹಿತ್ಯ ಕ್ಷೇತ್ರದ ಮೂರು ಅಮೂಲ್ಯ ರತ್ನಗಳಾಗಿವೆ

Team Udayavani, May 19, 2022, 5:33 PM IST

ಕಸಾಪದಿಂದ ಡಾ| ಹಳಕಟ್ಟಿ ಜಯಂತಿ ಆಚರಿಸಲಿ

ಬೀದರ: ಡಾ| ಫ.ಗು ಹಳಕಟ್ಟಿಯವರು ಸರಳ ಜೀವನ ಉದಾತ ಚಿಂತನೆ ಮತ್ತು ಅದ್ಭುತ ಕಾರ್ಯಗಳ ತ್ರಿವೇಣಿ ಸಂಗಮವಾಗಿದ್ದರು. ಭೂಗತವಾಗಿದ್ದ ವಚನ ಸಾಹಿತ್ಯವನ್ನು ಅಗೆದು-ತೆಗೆದು ಕನ್ನಡ ಸಾಹಿತ್ಯ ಲೋಕಕ್ಕೆ ಅಷ್ಟೇ ಅಲ್ಲ ವಿಶ್ವ ಅಧ್ಯಾತ್ಮ ಸಾಹಿತ್ಯ ಲೋಕಕ್ಕೆ ವಿಶೇಷ ಕೊಡುಗೆ ನೀಡಿದ ಮಹಾಪುರುಷ ಡಾ| ಹಳಕಟ್ಟಿಯವರ ಜಯಂತ್ಯುತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್‌ನಿಂದ ಪ್ರತಿ ವರ್ಷವೂ ಆಚರಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ಕೈಗಾರಿಕಾ
ಇಲಾಖೆ ಉಪನಿರ್ದೇಶಕ ರಮೇಶ ಮಠಪತಿ ಹೇಳಿದರು.

ಬಸವ ಜಯಂತಿ ನಿಮಿತ್ತ ಬಸವಕಲ್ಯಾಣ ತಾಲೂಕಿನ ಗೋರ್ಟಾ(ಬಿ) ಗ್ರಾಮದಲ್ಲಿ ಜರುಗುತ್ತಿರುವ ಬಸವೋತ್ಸವ ಕಾರ್ಯಕ್ರಮದಲ್ಲಿ ಹಳಕಟ್ಟಿಯವರ ಜೀವನ ಸಂದೇಶ ಕುರಿತು ಮಾತನಾಡಿದ ಅವರು, ಹಳಕಟ್ಟಿಯವರು ಮನಸ್ಸು ಮಾಡಿದರೆ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡಬಹುದಿತ್ತು. ಆದರೆ, ವಚನ ಸಾಹಿತ್ಯ ಪ್ರಕಟಣೆಗಾಗಿ ತಮ್ಮ ಮನೆಯನ್ನೆ ಮಾರಿ ಹಿತಚಿಂತಕ ಮುದ್ರಣಾಲಯ ಸ್ಥಾಪಿಸಿದರು.

ಬಡತನ ಅಪ್ಪಿಕೊಂಡು ನೋವುಗಳನ್ನು ನುಂಗಿಕೊಂಡು ಕನ್ನಡ ಮತ್ತು ವಚನ ಸಾಹಿತ್ಯಕ್ಕಾಗಿ ಹಗಲಿರುಳು ದುಡಿದರು. ಬಸವನ ಹುಳುವಾಗಿ ಬೆಳ್ಳಿದಾರಿ ಕೊರೆದು ಬೆಳಕು ನೀಡಿದರು. ವಚನ ಶಾಸ್ತ್ರ ಸಾರ ಬೃಹತ್‌ ಗ್ರಂಥಗಳು ಸಾಹಿತ್ಯ ಕ್ಷೇತ್ರದ ಮೂರು ಅಮೂಲ್ಯ ರತ್ನಗಳಾಗಿವೆ ಎಂದರು.

ಅಂದು ಮರಾಠಿ ಭಾಷಿಕರ ಮುಂಬೈ ಪ್ರಾಂತ್ಯದಲ್ಲಿದ್ದ ಬಿಜಾಪುರದಲ್ಲಿ ಹತ್ತು ಕನ್ನಡ ಶಾಲೆಗಳನ್ನು ಆರಂಭಿಸಿದರು. ಬಿ.ಎಲ್‌.ಡಿ.ಇ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಗೈದರು. ಅವರು ಸಹಕಾರ ಕ್ಷೇತ್ರ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಅಪೂರ್ವ ಕಾರ್ಯಗೈದು ಗೋಳಗುಮ್ಮಟ್ಟಕ್ಕಿಂತಲೂ ಎತ್ತರವಾಗಿ ಬೆಳೆದ ವಚನ ಗುಮ್ಮಟವೆಂದು ಹೆಸರಾದರೆಂದು ಮಾರ್ಮಿಕವಾಗಿ ನುಡಿದರು.

ಬೀದರನ ಅಕ್ಕ ಅನ್ನಪೂರ್ಣತಾಯಿ ಅವರು ಸಮ್ಮುಖ ಮತ್ತು ಹುಲಸೂರಿನ ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರಭುದೇವರು ಮತ್ತು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿದರು. ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಚಂದ್ರಕಾಂತ ಕಣಜೆ ಅಧ್ಯಕ್ಷತೆ ವಹಿಸಿದ್ದರು. ವಿಠಲ ರೆಡ್ಡಿ, ಪೊಲೀಸ್‌ ಪಾಟೀಲ ಕರಕನಳ್ಳಿ, ಗಂಗಾಧರ ಪಾಟೀಲ ಕರಕನಳ್ಳಿ, ಚನ್ನಬಸವ ಹಂಗರಗಿ, ಸಚಿದಾನಂದ ಮಠಪತಿ ಉಪಸ್ಥಿತರಿದ್ದರು. ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ತಾಲೂಕು ಅಧ್ಯಕ್ಷರಾದ ಎಂ.ಎಸ್‌ ಮನೋಹರ, ಸಿದ್ದಲಿಂಗ ಚಿಂಚೋಳಿ, ಶಾಂತಲಿಂಗ ಮಠಪತಿ, ನಾಗರಾಜ ಹಾವಣ್ಣ, ರಮೇಶ ಸಲಗರ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.