ಸಸ್ತಾಪುರ ಗ್ರಾಪಂಗೆ ಗಾಂಧಿ  ಪುರಸ್ಕಾರ


Team Udayavani, Oct 1, 2018, 12:18 PM IST

bid-2.jpg

ಬಸವಕಲ್ಯಾಣ: 2017-18ನೇ ಸಾಲಿನ ರಾಜ್ಯ ಮಟ್ಟದ ಗಾಂಧಿ ಪುರಸ್ಕಾರಕ್ಕೆ ತಾಲೂಕಿನ ಸಸ್ತಾಪುರ ಗ್ರಾಪಂ ಆಯ್ಕೆಯಾಗಿದೆ. ಸಸ್ತಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಮಿರ್ಜಾಪುರ, ಅತಲಾಪುರ ಸೇರಿದಂತೆ ಅಂದಾಜು 8 ಸಾವಿರ ಜನ ವಾಸಿಸುವ ಗ್ರಾಮ ಇದಾಗಿದೆ. ಸರಕಾರದ ಅನುದಾನ ಸಮರ್ಪಕವಾಗಿ ಗ್ರಾಮದ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. 

ಗ್ರಾಮದಲ್ಲಿ ಒಟ್ಟು 900 ಮನೆಗಳಿವೆ. ಎಸ್‌ಸಿ, ಎಸ್‌ಟಿ ಮತ್ತು ಸಾಮಾನ್ಯ ವರ್ಗಗಳಿಗೆ ಸರಕಾರ ಆದೇಶದಂತೆ ಶೌಚಾಲಯ ಕಟ್ಟಿಕೊಳ್ಳಲು ಅನುದಾನ ನೀಡಿ ಗ್ರಾಮ ಬಹಿರ್ದೆಸೆ ಮುಕ್ತ ಘೋಷಣೆಗೆ ಸಿದ್ಧಗೊಂಡಿದೆ.  2017-18ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅಂದಾಜು 70 ಲಕ್ಷ ರೂ. ಖರ್ಚಿನಲ್ಲಿ ಮಿರ್ಜಾಪುರ ಮತ್ತು ಸಸ್ತಾಪುರದಲ್ಲಿ 20 ಕೃಷಿ ಹೊಂಡ, 4 ಚಿಕ್ಕ ಚೆಕ್‌ಡ್ಯಾಂ ಹಾಗೂ 15 ಚೆಕ್‌ಡ್ಯಾಂಗಳು  ಹೂಳೆತ್ತುವ ಕೆಲಸಗಳು ನಡೆದಿವೆ.

2014ನೇ ಸಾಲಿನಲ್ಲಿ ಕುಡಿಯುವ ನೀರಿಗಾಗಿ, ಉತ್ತಮವಾದ ಚರಂಡಿ ನಿರ್ಮಾಣ, ಮಳೆ ನೀರಿನ ಇಂಗು ಗುಂಡಿ, ನೀರಿನ ಟ್ಯಾಂಕ್‌ ಮತ್ತು ಗ್ರಾಮದ ಅತಿಹೆಚ್ಚು ಅಂಕ ಪಡೆದ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಮುಂದಿನ ಅಭ್ಯಾಸಕ್ಕಾಗಿ ಸಹಾಯಧನ ವಿತರಣೆ ಮಾಡಲಾಗಿದೆ. 

ಗ್ರಾಪಂ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆಗಳಲ್ಲಿ ಶೌಚಾಲಾಯ, ಆಟದ ಮೈದಾನ ಮತ್ತು ಗ್ರಾಮದಲ್ಲಿ ಸಂಗ್ರಹವಾದ ಕಸ ರಸ್ತೆ ಹಾಗೂ ಚರಂಡಿಯಲ್ಲಿ ಹಾಕದಂತೆ ಕ್ರಮ ಕೈಗೊಳ್ಳಲಾಗಿದೆ. ಕಸ ನಿರ್ವಹಣೆಗಾಗಿ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ ಆದರೆ ಸಾಕು. ಮನೆ ಮನೆಗೆ ತೆರಳಿ ಕಸ ಸಂಗ್ರಹ ಮಾಡುವುದೇ ಇವರ ಕಾರ್ಯವಾಗಿದೆ ಎಂದು ಪಿಡಿಒ ಚಂದ್ರಮ ಹಣಮಂತಪ್ಪ ತಿಳಿಸಿದರು.

ರಾಜ್ಯ ಸರಕಾರ ಬೀದರ ಜಿಲ್ಲೆಯಲ್ಲಿ ಆಯ್ಕೆ ಮಾಡಿರುವ 5 ಗ್ರಾಪಂ ಪೈಕಿ ಸಸ್ತಾಪುರ ಗ್ರಾಪಂ ಗಾಂಧಿ ಪುರಸ್ಕಾರಕ್ಕೆ
ಆಯ್ಕೆಯಾಗಿದೆ. 

ಗ್ರಾಪಂ ಮುಂದಿನ ಯೋಜನೆ
ವಿದ್ಯುತ್‌ ಮಾದರಿಯಲ್ಲಿ ಕುಡಿಯುವ ನೀರಿನ ನಳಗಳಿಗೆ ಮೀಟರ್‌ ಅಳವಡಿಸುವ ಯೋಜನೆ. ಸಸ್ತಾಪುರ ಗ್ರಾಪಂಗೆ ಸಂಪೂರ್ಣ ಸೋಲಾರ್‌ ವ್ಯವಸ್ಥೆ ಮಾಡಲಾಗುವುದು. ಕಸ ನಿರ್ವಹಣೆಗಾಗಿ ಸಂಸ್ಕರಣ ಘಟಕ ನಿರ್ಮಾಣ ಮಾಡಿ ಗೊಬ್ಬರ ತಯಾರಿಸಿ ರೈತರಿಗೆ ವಿತರಿಸುವ ಯೋಜನೆ.

ಗ್ರಾಪಂನಲ್ಲಿ ಸೌಕರ್ಯಗಳು: ಕೃಷಿ ಹೊಂಡ, ಇಂಗು ಗುಂಡಿ ಮತ್ತು ಮಿನಿ ಟ್ಯಾಂಕ್‌ ನಿರ್ಮಾಣ. ಮನೆ ಮನೆಗೆ ನೀರಿನ ಸಂಪರ್ಕ. ಸಿಸಿ ರಸ್ತೆ, ಶೌಚಾಲಯ, ಚರಂಡಿ ನಿರ್ಮಾಣ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ. ಶೇ. 85ರಷ್ಟು ಕಂದಾಯ ಸಂಗ್ರಹ 

ಪ್ರಶಸ್ತಿ ಪ್ರದಾನ: ಮಹಾತ್ಮ ಗಾಂಧೀ ಜಿ ಅವರ 150ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದದಲ್ಲಿ ಅ. 2ರಂದು ಮುಖ್ಯಮಂತ್ರಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವರ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ 5 ಲಕ್ಷ ರೂ. ನಗದು ಮತ್ತು ಪ್ರಮಾಣ ಪತ್ರ ಒಳಗೊಂಡಿದೆ. ಗ್ರಾಪಂ ಅಧ್ಯಕ್ಷ ಬ್ರಹ್ಮಾರೆಡ್ಡಿ ಮತ್ತು ಪಿಡಿಒ ಚಂದ್ರಮ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಗ್ರಾಮಸ್ಥರ ಸಹಕಾರ ಮತ್ತು ಗ್ರಾಪಂ ಸರ್ವ ಸದಸ್ಯರ ಪ್ರೋತ್ಸಾಹದಿಂದ ಮತ್ತು ಪಿಡಿಒ ಅಭಿವೃದ್ಧಿ ದೂರದೃಷ್ಟಿ
ಹಿನ್ನೆಲೆಯಲ್ಲಿ ಸಸ್ತಾಪುರ ಗ್ರಾಪಂ ರಾಜ್ಯ ಮಟ್ಟದ ಗಾಂಧಿಪುರಸ್ಕಾರಕ್ಕೆ ಆಯ್ಕೆ ಯಾಗಲು ಸಾಧ್ಯವಾಗಿದೆ. 
ಬ್ರಹ್ಮಾರೆಡ್ಡಿ ಗ್ರಾಪಂ ಅಧ್ಯಕ್ಷ

 ಕಾನೂನು ಚೌಕಟ್ಟಿನಲ್ಲಿ ನಡೆಯುವ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಮತ್ತು ಅವುಗಳನ್ನು ಚಾಚು ತಪ್ಪದೆ ಪಾಲಿಸಿರುವುದಕ್ಕೆ ಗ್ರಾಮ ಬಯಲು ಬಹಿರ್ದೆಸೆ ಮುಕ್ತ ಗ್ರಾಮದ ಜತೆಗೆ, ಗಾಂಧಿ ಪುರಸ್ಕಾರ ಪಡೆಯಲು ಸಾಧ್ಯವಾಗಿದೆ.
 ಚಂದ್ರಮ, ಪಿಡಿಒ ಸಸ್ತಾಪುರ

ಸಸ್ತಾಪುರ ಗ್ರಾಪಂ ಗಾಂಧಿ  ಪುರಸ್ಕಾರಕ್ಕೆ ಆಯ್ಕೆ ಆಗಿರುವುದು ಹೆಮ್ಮೆಯ ಸಂಗತಿ. ಇದರಲ್ಲಿ ಗ್ರಾಮಸ್ಥರ ಹಾಗೂ ಪಂಚಾಯಿತಿ ಸರ್ವ ಸದಸ್ಯರ ಪರಿಶ್ರಮ ಅಡಗಿದೆ. ವಿಶೇಷವಾಗಿ ಎಲ್ಲರೂ ಒಮ್ಮತ ಮನಸ್ಸಿನಿಂದ ಮಾಡಿದಾಗ
ಇಂತಹ ಪುರಸ್ಕಾರ ಪಡೆಯಲು ಸಾಧ್ಯ ಎಂಬುವುದಕ್ಕೆ ಈ ಗ್ರಾಪಂ ಸಾಕ್ಷಿ. 
ಜೈಪ್ರಕಾಶ ಚವ್ಹಾಣ, ತಾಪಂ ಎಡಿ ಬಸವಕಲ್ಯಾಣ

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.