ಗಣೇಶನಿಗೆ ಸಂಭ್ರಮದ ವಿದಾಯ
Team Udayavani, Sep 7, 2017, 11:01 AM IST
ಭಾಲ್ಕಿ: ಪಟ್ಟಣದಲ್ಲಿ ಮಂಗಳವಾರ ಸಡಗರ, ಸಂಭ್ರಮದಿಂದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು
ವಿಸರ್ಜಿಸಲಾಯಿತು. ಸುಭಾಷಚಂದ್ರ ಭೋಸ್, ಮಹಾತ್ಮ ಗಾಂಧಿ ವೃತ್ತ, ಗಡಿ ಗಣೇಶ, ಉಪನ್ಯಾಸಕರ ಬಡಾವಣೆ ಸೇರಿದಂತೆ ಸುಮಾರು 33 ಗಣೇಶ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿ ಪೂಜಿಸಲಾಗಿತ್ತು.
ಪ್ರತಿ ವರ್ಷ ಅನಂತ ಚತುರ್ಥಿಯಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಅನಂತ ಚತುದರ್ಶಿ ದಿನದಂದು ವಿಸರ್ಜಿಸಲಾಗುತಿತ್ತು. ಆದರೆ, ಈ ವರ್ಷ ಒಂದು ತಿಥಿ ಹೆಚ್ಚಿಗೆ ಬಂದ ಕಾರಣ 12ನೇ ದಿನಕ್ಕೆ ವಿಸರ್ಜಿಸಲಾಯಿತು.
ಎಲ್ಲ ಗಣೇಶ ಮಂಡಳಿ ಪದಾಧಿಕಾರಿಗಳು ಭಕ್ತಿ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಎಲ್ಲೆಡೆಯ ಗಣೇಶ
ಮೂರ್ತಿ ನೋಡಲು ಜನರು ಮುಗಿಬಿದ್ದಿದ್ದರು. ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ನಡೆಯಬಾರದು ಎಂದು ಪಟ್ಟಣದಲ್ಲಿ ಪೊಲೀಸ್ ಪರೇಡ್ ನಡೆಸಲಾಗಿದ್ದು, ಸುಮಾರು 500 ಜನ ಸಿಬ್ಬಂದಿ ನಿಯೋಜಿಸಲಾಗಿತ್ತು.
ಮುಂಜಾಗೃತಾ ಕ್ರಮದಿಂದಾಗಿ ಗಣೇಶ ವಿಸರ್ಜನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಶಾಂತ ರೀತಿಯಿಂದ ಗಣೇಶ ವಿಸರ್ಜನಾ ಕಾರ್ಯ ನಡೆಯಿತು ಎಂದು ಡಿವೈಎಸ್ಪಿ ವೆಂಕನಗೌಡ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ