8 ಕೋಟಿ ಮಹಿಳೆಯರಿಗೆ ಗ್ಯಾಸ್
Team Udayavani, Jan 3, 2022, 1:11 PM IST
ಬಸವಕಲ್ಯಾಣ: ದೇಶದ ಬಡ ಕುಟುಂಬಗಳ ಮಹಿಳೆಯರಿಗೆ ಉಜ್ವಲ್ ಯೋಜನೆಯಲ್ಲಿ ಉಚಿತವಾಗಿ ಅಡುಗೆ ಅನಿಲ ವಿತರಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಕಲ್ಯಾಣ ಮಂಟಪದಲ್ಲಿ ಕಾಳೇಕರ್ ಗ್ಯಾಸ್ ಏಜೆನ್ಸಿ ವತಿಯಿಂದ ಹಮ್ಮಿಕೊಂಡ ಉಜ್ವಲ್ ಯೋಜನೆ ಉಚಿತ ಅಡುಗೆ ಅನಿಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರ ಬಗ್ಗೆ ಕಾಳಜಿ ಇರಲಿಲ್ಲ. ಆದರೆ ಮೋದಿ ಅವರು 8 ಕೋಟಿ ಮಹಿಳೆಯರಿಗೆ ಈ ಯೋಜನೆಯಲ್ಲಿ ಅಡುಗೆ ಅನಿಲ ವಿತರಿಸಿದರು. ಹೀಗಾಗಿ ತಾಲೂಕಿನ 25 ಸಾವಿರ ಮಹಿಳೆಯರಿಗೆ ಅನಿಲ ದೊರೆತಿದೆ. ಆದರೂ ಇನ್ನೂ ಬಡ ಕುಟುಂಬದವರು ಉಳಿದಿದ್ದರಿಂದ ಮತ್ತೆ ಉಚಿತ ಅನಿಲ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಾಸಕ ಶರಣು ಸಲಗರ ಮಾತನಾಡಿ, ಜಾತಿ ಮತ ನೋಡದೆ, ಬಡವರಿಗೆ, ದಲಿತರಿಗೆ ಹಿಂದುಳಿದವರ ಮಹಿಳೆಯರಿಗೆ ಸಹಾಯ ಆಗಲಿ ಎಂಬ ಸುದುದ್ದೇಶದಿಂದ ಪ್ರಧಾನಿ ಮೋದಿ ಉಜ್ವಲ ಯೋಜನೆಯಲ್ಲಿ ಉಚಿತ ಅಡುಗೆ ಅನಿಲ ನೀಡುತ್ತಿದ್ದಾರೆ ಎಂದರು.
ಮಾಜಿ ಶಾಸಕ ಎಂ.ಜಿ. ಮುಳೆ, ತಹಶೀಲ್ದಾರ್ ಸಾವಿತ್ರಿ ಸಲಗರ, ರವಿ ಗಾಯಕವಾಡ, ಅನಿಲ ಭೂಸಾರೆ, ಸಂಜೀವ ಕಾಳೇಕರ್, ಮಲ್ಲೇಶ ಕಾಳೆಕರ್, ದೀಪಕ ಗಾಯಕವಾಡ, ಅಶೋಕ ವಕಾರೆ, ಅರವಿಂದ ಮುತ್ತೆ, ರವಿ ಕೊಳಕುರ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ