ಭಯೋತ್ಪಾದನೆ ಮಹಾ ಪಿಡುಗು ತೊಲಗಿಸಿ
Team Udayavani, May 22, 2018, 11:48 AM IST
ಕಲಬುರಗಿ: ಭಾರತ ಸೇರಿದಂತೆ ವಿಶ್ವದಲ್ಲಿ ಪ್ರತಿದಿನ ನೂರಾರು ಅಮಾಯಕರ ಸಾವಿಗೆ ಕಾರಣವಾಗಿ ಜಗತ್ತನ್ನೇ ತಲ್ಲಣಗೊಳಿಸಿ ಅಶಾಂತಿ ಸೃಷ್ಟಿಗೆ ಕಾರಣೀಕರ್ತವಾದ ಭಯೋತ್ಪಾದನೆ ಒಂದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ಇದನ್ನು ಬೇರು ಸಹಿತ ಸರ್ವನಾಶ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ. ಪಾಟೀಲ ಹೇಳಿದರು.
ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ನಗರದ ನ್ಯೂ ರಾಘವೇಂದ್ರ ಕಾಲೋನಿ ಮುತ್ತಾ ಟ್ಯೂಟೋರಿಯಲ್ಸ್ನಲ್ಲಿ ಹಮ್ಮಿಕೊಂಡಿದ್ದ ಭಯೋತ್ಪಾದನಾ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ
ಬೋಧಿಸಿ ಅವರು ಮಾತನಾಡಿದರು.
ಬಳಗದ ಗೌರವಾಧ್ಯಕ್ಷ ಶಾಂತಪ್ಪ ನರೋಣಾ ಮಾತನಾಡಿ, ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ದೇಶದಲ್ಲಿ ಕೆಲ ದುಷ್ಟ ಶಕ್ತಿಗಳು ಸಮಾಜದಲ್ಲಿ ಅರಾಜಕತೆ ವಾತಾವರಣ ಸೃಷ್ಟಿಸುವ ಕಾರ್ಯಮಾಡುತ್ತಿವೆ. ಅದನ್ನು ನಾವೆಲ್ಲರೂ
ಒಕ್ಕೋರಲಿನಿಂದ ಖಂಡಿಸುವ ಮೂಲಕ, ಇದರ ನಾಶಕ್ಕೆ ಶ್ರಮಿಸಬೇಕು ಎಂದು ಹೇಳಿದರು.
ಸಂಸ್ಥೆ ಮುಖ್ಯಸ್ಥ ಶಿವಕುಮಾರ ಮುತ್ತಾ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಲ್ಪ ಕಲಾವಿದ ಚಂದ್ರಶೇಖರ ವೈ. ಶಿಲ್ಪಿ,
ಶಿಕ್ಷಕರಾದ ಸಿದ್ದಾರೂಢ ನರಬೋಳಿ, ಜಗದೀಶ ರೆಡ್ಡಿ, ಆನಂದ ಮಾಳಾ, ನಾಗರಾಜ ಪಂಚಾಳ, ನಟರಾಜ ರಾಜಾಹುಲಿ, ಸಂತೋಷ ಮುತ್ತಾ, ಲಕ್ಷ್ಮೀಮುತ್ತಾ, ಅಂಬಿಕಾ ಮಡ್ಡಿ ಹಾಗೂ ಸಂಸ್ಥೆ ಸಿಬ್ಬಂದಿ, ವಿದ್ಯಾರ್ಥಿಗಳು, ಬಡಾವಣೆ ನಾಗರಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ