ಕಾರಂಜಾ ಸಂತ್ರಸ್ತರಿಂದ ಸಚಿವ ಖಾಶೆಂಪೂರಗೆ ಘೇರಾವ್
Team Udayavani, Jan 18, 2019, 9:41 AM IST
ಬೀದರ: ಕಾರಂಜಾ ಮುಳುಗಡೆ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಳಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸದಸ್ಯರು ಸಚಿವ ಬಂಡೆಪ್ಪ ಖಾಶೆಂಪೂರ ಅವರಿಗೆ ಘೇರಾವ್ ಹಾಕಿದ ಘಟನೆ ಗುರುವಾರ ನಡೆಯಿತು.
ಬಡವರ ಬಂಧು ಹಾಗೂ ಕಾಯಕ ಯೋಜನೆ ಚಾಲನೆಗೆ ಆಗಮಿಸಿದ ಸಚಿವರಿಗೆ ಘೇರಾವ್ ಹಾಕಿದ ರೈತರು. ಕಾರಂಜಾ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನ್ಯಾಯ ನೀಡುವುದಾಗಿ ಹೇಳಿದ್ದು, ಇಂದಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 15-10-2018ರಂದು ಬೆಂಗಳೂರಿನ ವಿಧಾನ ಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಪರಿಹಾರ ಕೊಡುವುದಾಗಿ ಆಸ್ವಾಸನೆ ನೀಡಿದರು. ಅಲ್ಲದೇ 16-11-2018ರಂದು ಬೀದರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಬಹಿರಂಗ ಸಭೆಯಲ್ಲಿಯೇ ಸೂಕ್ತ ಪರಿಹಾರ ನೀಡುವ ಭರವಸೆ ಕೂಡ ನೀಡಿದರು. ಕೂಡಲೆ ಸರ್ಕಾರ ರೈತರಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಬಂಡೆಪ್ಪ ಖಾಶೆಂಪೂರ ಅವರು, ಕಾರಂಜಾ ಸಂತ್ರಸ್ತರ ಕುರಿತು ಮತ್ತೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ ನ್ಯಾಯ ಒದಗಿಸುವ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.
ನಂತರ ಮಾತನಾಡಿದ ಹೋರಾಟ ಸಮಿತಿ ಮುಖಂಡರು, ಸರ್ಕಾರ ಫೆ.1ರ ವರೆಗೆ ಸೂಕ್ತ ಪರಿಹಾರ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳದಿದ್ದರೆ, ಕಾರಂಜಾ ಜಲಾಶಯದಿಂದ ಹರಿದು ಹೋಗುವ ನೀರಿನ ಪೈಪ್ಗ್ಳು ಒಡೆದು ಹಾಕುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಸರ್ಕಾರ ಸ್ಪಂದಿಸದಿದ್ದರೆ ನಾನು ನಿಮ್ಮ ಹೋರಾಟದಲ್ಲಿ ಭಾಗಿ ಆಗುವುದಾಗಿ ತಿಳಿಸಿದರು.
ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚ್ಚಕನಳ್ಳಿ, ವೀರಭದ್ರಪ್ಪ ಉಪ್ಪಿನ, ರಾಜಕುಮಾರ ಚಿಲ್ಲರ್ಗಿ, ನಾಗಶೆಟ್ಟೆಪ್ಪಾ ಹಚ್ಚಿ, ಅರವಿಂದ ಕುಲಕರ್ಣಿ, ಓಂಕಾರ ಪಾಟೀಲ, ವಿಜಯಕುಮಾರ ಕುಲಕರ್ಣಿ, ವೈಜಿನಾಥ ಮರಕಲ, ರಾಜಪ್ಪ ಕಮಾಲಪೂರ, ಬಸವರಾಜ, ಮಲಶೆಟ್ಟೆಪ್ಪಾ, ಚಂದ್ರಶೇಖರ, ಸೂರ್ಯಕಾಂತ ಸಂಗೋಳಗಿ, ಬಾಬುರಾವ್ ಹಜ್ಜರಗಿ, ಸುಭಾಷ ಬ್ಯಾಲಹಳ್ಳಿ, ಸಂಗ್ರಾಮಪ್ಪಾ ಹಿಂದೊಡ್ಡಿ, ಶಿವಶರಣಪ್ಪ ಔರಾದ, ರಿತಿಕ ಕುಲಕರ್ಣಿ, ಭೀಮರೆಡ್ಡಿ, ವಿಜಯಕುಮಾರ ಬೋರಾಳ, ಮೋಹನರಾವ್, ದಾಮೋದರ, ಕಾಶೀನಾಥ, ಶ್ರೀಕಾಂತ ಹಜ್ಜರಗಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ