ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿ: ವಿಶ್ವನಾಥ
Team Udayavani, Sep 1, 2022, 9:03 PM IST
ಕವಿತಾಳ: ಗ್ರಾಹಕರೊಂದಿಗೆ ಸೌಜನ್ಯದ ವರ್ತನೆ ಮತ್ತು ಅವರ ಸಮಸ್ಯೆಗೆ ಸ್ಪಂದಿಸುವ ಮನೋಭಾವ ಸಿಬ್ಬಂದಿ ಬೆಳೆಸಿಕೊಳ್ಳಬೇಕು. ಆರ್ಥಿಕ ವ್ಯವಹಾರದ ಜತೆಗೆ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಬೇಕು ಎಂದು ಕವಿತಾಳ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ ಹೇಳಿದರು.
ಸಂಘದ 21ನೇ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಸಿಬ್ಬಂದಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಶಿಸ್ತು, ಸಮಯ ಪ್ರಜ್ಞೆ ಮತ್ತು ಉತ್ತಮ ನಡವಳಿಕೆ ಸಂಘದ ಏಳ್ಗೆಗೆ ಕಾರಣವಾಗುತ್ತದೆ. ಪರಿಸರ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಪರಿಸರ ಕಾಪಾಡದಿದ್ದರೆ ಎದುರಾಗಬಹುದಾದ ಆಪತ್ತುಗಳ ಗಮನಲ್ಲಿಟ್ಟುಕೊಂಡು ಸಹಕಾರ ಸಂಘದ ಲಾಭಾಂಶದಲ್ಲಿ ಶೇ.1ರಷ್ಟು ಸಸಿ ನೆಡಲು ಮತ್ತು ಪರಿಸರ ಕಾಪಾಡಲು ಬಳಸುವ ಉದ್ದೇಶ ಹೊಂದಲಾಗಿದೆ ಎಂದರು.
ಅಡಮಾನ ಸಾಲದಿಂದ ರೈತರಿಗೆ ಹೆಚ್ಚಿನ ಲಾಭವಾಗಿದ್ದು, ಭತ್ತದ ದರ ಏರಿಕೆಯಿಂದ ರೈತರು ಹೆಚ್ಚಿನ ಲಾಭ ಪಡೆದಿದ್ದಾರೆ. ಹೀಗಾಗಿ ಸಂಘ ಪರೋಕ್ಷವಾಗಿ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಆರ್ಬಿಐ ನಿರ್ದೇಶನದಂತೆ ಠೇವಣಿದಾರರಿಗೆ ಯಾವುದೇ ಕ್ಷಣದಲ್ಲೂ ಹಣ ಮರು ಪಾವತಿಗೆ ತೊಂದರೆಯಾಗದಂತೆ ಮರು ಪಾವತಿ ಮಾಡಲು ಸಂಘ ವ್ಯವಸ್ಥೆ ಹೊಂದಿದೆ. ಉತ್ತಮ ಅಂಕ ಪಡೆದ ಮಕ್ಕಳಿಗೆ ಪುರಸ್ಕಾರ, ಸಾಮಾಜಿಕ ಕಾರ್ಯಗಳಲ್ಲಿ ಸಂಘ ತೊಡಗಿಸಿಕೊಂಡಿದೆ. 6 ಲಕ್ಷ ಬಂಡವಾಳದೊದಿಗೆ ಆರಂಭವಾದ ಸಂಘ ಪ್ರಸ್ತುತ ವರ್ಷ 1.2 ಕೋಟಿ ನಿವ್ವಳ ಲಾಭ ಪಡೆದಿದೆ. ಶೇರುದಾರರಿಗೆ ಶೇ.15 ಡಿವಿಡೆಂಡ್ ನೀಡಲಾಗುತ್ತಿದೆ ಎಂದರು.
ಈ ವೇಳೆ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಇಟಗಿ, ನಿರ್ದೇಶಕರಾದ ಪ್ರದೀಪಕುಮಾರ್, ಸೂರ್ಯಕಾಂತಗೌಡ ಗೂಗೆಬಾಳ, ಸಿಇಒ ಶ್ರೀನಿವಾಸ ಕುಲಕರ್ಣಿ, ವ್ಯವಸ್ಥಾಪಕ ಶಿವನಗೌಡ ವಟಗಲ್, ಬಸವರಾಜ, ರಮೇಶ, ಹನುಮೇಶ ಬಸಾಪುರ, ಸಿದ್ರಾಮೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್