ಸುವರ್ಣ ಮಹೋತ್ಸವ: 11 ದಿನ ಸಾಂಸ್ಕೃತಿಕ ವೈಭವ


Team Udayavani, Sep 24, 2018, 12:25 PM IST

bid-2.jpg

ಹುಮನಾಬಾದ: ಸಾರ್ವಜನಿಕ ಗಣೇಶ ಉತ್ಸವ ಆಚರಣೆ ತಿಳಿದುಕೊಂಡಷ್ಟು ಸರಳವಲ್ಲ. ಆದರೆ ಹಳೆ ಅಡತ್‌ ಬಜಾರ ಗಣೇಶ ಉತ್ಸವ ಸಮಿತಿ 49ವರ್ಷ ಅತ್ಯಂತ ಯಶಸ್ವಿಯಾಗಿ ಆಚರಿಸಿ, ಈ ಬಾರಿ ಸುವರ್ಣಮಹೋತ್ಸವ ಆಚರಿಸಿದೆ ಎಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಆರ್‌. ಗಾದಾ ಹೇಳಿದರು.

ಪಟ್ಟಣದ ಹಳೆ ಅಡತ್‌ ಬಜಾರ ಗಣೇಶ ಉತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಸುವರ್ಣ ಮಹೋತ್ಸವ ಪ್ರಯುಕ್ತ 11 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ, ಬೌದ್ಧಿಕ ಬೆಳವಣಿಗೆಗೆ ಪೂರಕ ಕಾರ್ಯಕ್ರಮ ನಡೆಸಲಾಗಿದ್ದು, ಈ ರೀತಿ ಹಿಂದೆಂದೂ ನಡೆದಿಲ್ಲ. ಭವಿಷ್ಯದಲ್ಲೂ ನಡೆಯುವುದು ಕಷ್ಟಸಾಧ್ಯ ಎಂದರು. 

ಮಾಜಿ ಶಾಸಕ ಸುಭಾಷ ಕಲ್ಲೂರ ಮಾತನಾಡಿ, ಹಣ ಗಳಿಕೆಯೊಂದೇ ಬದುಕಿನ ಮೂಲ ಉದ್ದೇಶ ಎಂದು ಭಾವಿಸಿರುವ ಪ್ರಸ್ತುತ ದಿನಮಾನದಲ್ಲಿ ಸ್ವಕಾರ್ಯದ ಜೊತೆಗೆ ಸ್ವಾಮಿ ಕಾರ್ಯ ಎಂಬಂತೆ, ವ್ಯವಹಾರದೊಂದಿಗೆ ಭಾರತೀಯ ಪರಂಪರೆ ಉಳಿಸಿಕೊಂಡು ಬರುತ್ತಿರುವ ಗಣೇಶ ಸಮಿತಿ ಪದಾಧಿಕಾರಿಗಳ ಕಾರ್ಯ ಪ್ರಶಂಸನೀಯ. 23
ಸದಸ್ಯರು ನೂರಾರು ಒತ್ತಡಗಳ ಮಧ್ಯದಲ್ಲೂ ಅತ್ಯಂತ ಭಕ್ತಿಭಾವದಿಂದ 11 ದಿನಗಳನ್ನು ಇದಕ್ಕಾಗಿ ಮೀಸಲಿಟ್ಟಿದ್ದು ತ್ಯಾಗವೇ ಸರಿ ಎಂದರು.

ಕರ್ನಾಟಕ ಆರ್ಯ ಪ್ರತಿನಿಧಿ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷ ಸುಭಾಷ ಅಷ್ಠಿಕರ್‌ ಮಾತನಾಡಿ, ಹಳೆ ಅಡತ್‌ ಬಜಾರ ಗಣೇಶ ಸಮಿತಿ ಪದಾಧಿಕಾರಿಗಳು 11ದಿನಗಳ ಕಾಲ ಕಾಟಾಚಾರದ ಗಣೇಶೋತ್ಸವ ಆಚರಿಸದೇ ವೈವಿಧ್ಯಮಯ
ಕಾರ್ಯಕ್ರಮ ಹಮ್ಮಿಕೊಂಡು ಕಲಾಸಕ್ತರಿಗೆ ರಸದೌತಣ ಉಣಬಡಿಸುವ ಮಹತ್ವದ ಕಾರ್ಯ ಮಾಡಿದ್ದಾರೆ ಎಂದು ಬಣ್ಣಿಸಿದರು.

ಬಿಜೆಪಿ ಮುಖಂಡ ಬಸವರಾಜ ಆರ್ಯ, ಪುರಸಭೆ ಮುಖ್ಯಾಧಿಕಾರಿ ಅಶೋಕ ಚನ್ನಕೋಟೆ, ಹಳೆ ಅಡತ್‌ ಗಣೇಶ ಸಮಿತಿ ಉಪಾಧ್ಯಕ್ಷ ಚಂದ್ರಕಾಂತ ಶಂಕರಶಟ್ಟಿ, ಸಮಿತಿ ಪ್ರಧಾನ ಕಾರ್ಯದರ್ಶಿ ದತ್ತಕುಮಾರ ಚಿದ್ರಿ, ಸಹ ಕಾರ್ಯದರ್ಶಿ ನಾಗಭೂಷಣ ವಿಭೂತಿ, ಕೋಶಾಧ್ಯಕ್ಷ ಪ್ರೇಮಕುಮಾರ ಜಾಜಿ ವೇದಿಕೆಯಲ್ಲಿದ್ದರು. ರಾಜಶ್ರೀ ಜಾಜಿ, ಮಹಾನಂದಾ ಮಾಡಗಿ ಪ್ರಾರ್ಥಿಸಿದರು. ಸುಭಾಷ ಭಗೋಜಿ ಸ್ವಾಗತಿಸಿದರು. ಸಾರಿಕಾ ಗಂಗಾ ನಿರೂಪಿಸಿದರು.
ಅಶೋಕ ಡಿ.ಜಾಜಿ ವಂದಿಸಿದರು.

ಇದಕ್ಕೂ ಮುನ್ನ ಸಮಿತಿ ಮಹಿಳಾ ಪದಾಧಿಕಾರಿಗಳಾದ ಲಕ್ಷ್ಮೀ ಡಿ.ಚಿದ್ರಿ, ರೇಖಾ ಆರ್‌.ಸಜ್ಜನಶಟ್ಟಿ, ರೇಣುಕಾ ಎಸ್‌.ಭಗೋಜಿ, ವೀಣಾ ಎನ್‌.ಉದಗೀರೆ ಮೊದಲಾದವರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೂ
ಮುನ್ನ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಉತ್ಸವ ಯಶಸ್ವಿಗೆ ಕಾರಣಾದ ಪತ್ರಕರ್ತರು, ಪೊಲೀಸ್‌, ಪುರಸಭೆ, ಜೆಸ್ಕಾಂ ಮತ್ತಿತರ ಇಲಾಖೆ ಪ್ರತನಿಧಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.