ಗಡಿ ಜಿಲ್ಲೆಯೊಂದಿಗಿತ್ತು ಉತ್ತಮ ಬಾಂಧವ್ಯ


Team Udayavani, Nov 13, 2018, 1:03 PM IST

vij-1.jpg

ಬೀದರ: ಕೇಂದ್ರ ಸಚಿವ ಅನಂತಕುಮಾರ್‌ ರಾಜ್ಯ ಕಂಡ ಅಪರೂಪದ ನಾಯಕ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ ನಾಯಕರಲ್ಲಿ ಇವರು ಕೂಡ ಒಬ್ಬರಾಗಿದ್ದು, ಗಡಿ ಜಿಲ್ಲೆ ಬೀದರನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

1980ರಿಂದ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಅನಂತಕುಮಾರ್‌ ಕೂಡ ನಿರಂತರ ಸಾಥ್‌ ನೀಡಿ ಪಕ್ಷ ಬೆಳೆಸುವ ಕೆಲಸ ಮಾಡಿದ್ದಾರೆ. ಈ ಭಾಗದಲ್ಲಿ ಸೈಕಲ್‌ ಹಿಡಿದುಕೊಂಡು ಊರೂರು ಸುತ್ತಿ ಪಕ್ಷ ಸಂಘಟಿಸಿದ ಅವರು, ನೂರಕ್ಕು ಅಧಿಕ ಬಾರಿ ಈ ಭಾಗಕ್ಕೆ ಭೇಟಿ ನೀಡಿದ್ದಾರೆ.

ಹುಮನಾಬಾದ ಮಾಜಿ ಶಾಸಕ ಸುಭಾಷ ಕಲ್ಲೂರ್‌ ಅವರೊಂದಿಗೆ ಉತ್ತಮ ಸಂಪರ್ಕವಿತ್ತು. ಜಿಲ್ಲೆಯಲ್ಲಿ ಅತೀ ಹೆಚ್ಚು ಬಾರಿ ಹುಮನಾಬಾದ ತಾಲೂಕಿಗೆ ಅನಂತಕುಮಾರ್‌ ಅವರು ಭೇಟಿ ನೀಡಿದ್ದಾರೆ. ಅಲ್ಲದೆ, ಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನ ನಡೆದ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಿ ಭಾಷಣ ಮಾಡಿದ್ದರು.

ವಿಧಾನ ಸಭೆ ಚುನಾವಣೆ ಸಂದರ್ಭಲ್ಲಿ ಜಿಲ್ಲೆಯ ಪೈಕಿ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಚುನಾವಣೆ ಪ್ರಚಾರ ಮಾಡಿರುವುದನ್ನು ಸನ್ಮರಿಸಬಹುದಾಗಿದೆ. 

ಈ ಭಾಗದ ಅನೇಕ ವಿಧಾನ ಸಭೆ ಹಾಗೂ ಲೋಕ ಸಭೆ ಚುನಾವಣೆಯಲ್ಲಿ ಅನಂತಕುಮಾರ್‌ ಅವರು ಪ್ರಚಾರ ಮಾಡಿದ್ದಾರೆ. ಕೆಲಸ ಮಾಡಲಾಗದ ರಾಜಕಾರಣಿಗಳು ಜನಪ್ರತಿನಿಧಿಗಳಾಗಲು ನಾಲಾಯಕರು ಎಂಬ ಹರಿತವಾದ ಮಾತುಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಒಂದು ಕಡೆ ಸೇರಿಸಿ ಪಕ್ಷ ಸಂಘಟನೆಯ ಸಲಹೆಗಳನ್ನು ನೀಡಿ ಪಕ್ಷ ಬೆಳೆಸುವ ಕಾರ್ಯವನ್ನು ಮಾಡಿದ್ದಾರೆ. 

ಸಿಪೆಟ್‌ ಸಂಸ್ಥೆ ಮಂಜೂರು: ಇದೇ ವರ್ಷದ ಫೆಬ್ರವರಿ 20ರಂದು ಭಾಲ್ಕಿ ಪಟ್ಟಣದಲ್ಲಿ ಹೆದ್ದಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ನಿತಿನ್‌ ಗಡ್ಕರಿ ಅವರೊಂದಿಗೆ ಆಗಮಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್‌ ಜಿಲ್ಲೆಯಲ್ಲಿ ಕೇಂದ್ರಿಯ ಪ್ಲಾಸ್ಟಿಕ್‌ ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್‌) ಆರಂಭಿಸುವುದಾಗಿ ಘೋಷಣೆ ಮಾಡಿದ್ದರು. ನೂರು ಎಕರೆ ಭೂಮಿಯ ಪೈಕಿ ಕೇವಲ ಹತ್ತು ಎಕರೆ ಭೂಮಿ ರಾಜ್ಯ ಸರ್ಕಾರ ನೀಡಿದರೆ ಪ್ರಸಕ್ತ ವರ್ಷವೇ ಸಂಸ್ಥೆ ಪ್ರಾರಂಭಿಸುವ ಭರವಸೆ
ನೀಡಿದ್ದರು. ಇಲ್ಲಿ ತರಬೇತಿ ಪಡೆದವರು ವಿದೇಶದಲ್ಲೂ ಕೆಲ ಮಾಡಬಹುದಾದ ಯೋಜನೆ ಅವರದಾಗಿತ್ತು. ಈ ಭಾಗದ ಯುವಕರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಈ ಸಂಸ್ಥೆ ಬೀದರ ಜಿಲ್ಲೆಯಲ್ಲಿ ಪ್ರಾರಂಭಿಸುವ ಕುರಿತು ಅಂದು ಅವರ ಭಾಷಣದಲ್ಲಿ ಹೇಳಿದ್ದರು.

ಕೇಂದ್ರ ಸಚಿವ ಅನಂತಕುಮಾರ್‌ ಅವರು ನನ್ನನ್ನು ತಮ್ಮನಂತೆ ಗುರುತಿಸಿದರು. ನಾನು ಮೊದಲನೇ ಸಲ ಸಂಸತ್ತಿಗೆ ಪ್ರವೇಶಿಸಿದ ಸಂದರ್ಭದಲ್ಲಿ ಸಂಸತ್ತಿನ ಪ್ರತಿ ಸಚಿವಾಲಯದ ಸಚಿವರಿಗೆ ಪರಿಚಯ ಮಾಡಿಸಿ, ಇವನು ನನ್ನ ತಮ್ಮ ಎಂದು ಪರಿಚಯ ಮಾಡಿಸಿದ್ದರು. ಅನೇಕ ಯೋಜನೆಗಳ ಕುರಿತು ಚರ್ಚೆಗಳನ್ನು ನಡೆಸಿದ ಸಂದರ್ಭಲ್ಲಿ ಅನಂತಕುಮಾರ ಅವರು ಉತ್ತಮ ಸ್ಪಂದನೆ ನೀಡುತ್ತಿದ್ದರು. ಗಡಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ರೀತಿಯ ಸಹಕಾರವನ್ನು ಅವರು ನೀಡಿದ್ದಾರೆ. ಬೀದರ ಜಿಲ್ಲೆಯ ಬಗ್ಗೆ ಅವರು ಹೆಚ್ಚು ಪ್ರೀತಿ ಹೊಂದಿದ್ದರು. ಕಾರಣ ಇಲ್ಲಿಯೇ ಸಿಪೆಟ್‌ ಸಂಸ್ಥೆ ಸ್ಥಾಪಿಸುವ ಕುರಿತು ಘೋಷಣೆ ಮಾಡಿದ್ದರು. ಇಂದು ಅವರ ನಿಧನದಿಂದ ಬಿಜೆಪಿಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
 ಭಗವಂತ ಖೂಬಾ, ಸಂಸದರು, ಬೀದರ

ಕೇಂದ್ರ ಸಚಿವ ಅನಂತಕುಮಾರ್‌ ನಿಧನ ಸುದ್ದಿ ನೋವುಂಟು ಮಾಡಿದೆ. ಬೆಂಗಳೂರು ದಕ್ಷಿಣದಿಂದ ಸತತವಾಗಿ ಲೋಕಸಭೆಗೆ ಆಯ್ಕೆ ಆಗುತ್ತಿರುವ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಹಠಾತ್‌ ನಿಧನದಿಂದ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ದೇವಿ ತುಳಜಾ ಭವಾನಿ ದುಃಖ ಭರಿಸುವ ಶಕ್ತಿ ನೀಡಲಿ.
 ಬಂಡೆಪ್ಪ ಖಾಶೆಂಪೂರ, ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವರು

ಕೇಂದ್ರ ಸಚಿವ ಅನಂತಕುಮಾರ್‌ ಸರಳ, ಸಜ್ಜನಿಕೆಯ ವ್ಯಕ್ತಿ. ಬೀದರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರೊಂದಿಗೆ ಸಾಥ್‌ ನೀಡುತ್ತಿದ್ದರು. ಜಿಲ್ಲೆಯಲ್ಲಿ ಅತೀ ಹೆಚ್ಚು ಹುಮನಾಬಾದ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಅನೇಕ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಪಕ್ಷ ಸಂಘಟಿಸುವ ಕಾರ್ಯಕ್ಕೆ ಅವರ ಕೊಡುಗೆ ಇದೆ. ಎಲ್ಲ ರೀತಿಯ ಸಮಸ್ಯೆಗಳಿಗೆ ಸರಳವಾಗಿ ಪರಿಹಾರ ಕಂಡುಕೊಳ್ಳುವ ವ್ಯಕ್ತಿತ್ವ ಅವರದಾಗಿತ್ತು. 
 ಸುಭಾಷ ಕಲ್ಲೂರ್‌, ಮಾಜಿ ಶಾಸಕರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.