ಕೋವಿಡ್ ವಾರಿಯರ್ಸ್ ಗೆ ಗೌರವ ನೀಡಿ
Team Udayavani, May 21, 2020, 2:40 PM IST
ಸಾಂದರ್ಭಿಕ ಚಿತ್ರ
ಗೊರೇಬಾಳ: ಕೋವಿಡ್-19 ನಿಯಂತ್ರಣದಲ್ಲಿ ಪೊಲೀಸ್, ಆರೋಗ್ಯ, ಕಂದಾಯ, ನಗರಸಭೆ, ಗ್ರಾಪಂ ಹಾಗೂ ಇತರ ಇಲಾಖೆಗಳ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರನ್ನು ಗೌರವಿಸಬೇಕಾಗಿದೆ ಎಂದು ಜಿಪಂ ಸದಸ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಹೇಳಿದರು.
ಬಾದರ್ಲಿ ಮತ್ತು ರಾಗಲಪರ್ವಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವೈದ್ಯರು, ಕಿರಿಯ ಆರೋಗ್ಯ ಸಹಾಯಕಿಯರಿಗೆ ಸನ್ಮಾನ ಹಾಗೂ ಆಶಾ ಕಾರ್ಯಕರ್ತರಿಗೆ ಬಿಜೆಪಿಯಿಂದ ಕಿಟ್ ವಿತರಿಸಿ ಅವರು ಮಾತನಾಡಿದರು. ಕೋವಿಡ್ ವಾರಿಯರ್ಗೆ ಸನ್ಮಾನ ಹಾಗೂ ಸಹಾಯ ಸಹಕಾರ ನೀಡಬೇಕು ಎನ್ನುವುದು ಪಕ್ಷದ ಆದೇಶವಾಗಿದೆ. ಈ ಹಿನ್ನೆಲೆಯಲ್ಲಿ ಸಿಂಧನೂರು ನಗರ ಹಾಗೂ ಎಲ್ಲ ಜಿಪಂ ವ್ಯಾಪ್ತಿಯಲ್ಲಿ ತಾವು ಮಾಡುತ್ತಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಡಾ| ತರುಣಕುಮಾರ, ಅಜಯಕುಮಾರ ಪವಾರ, ಡಾ| ವಿಶ್ವನಾಥ ಜಾಧವ, ಮುಖಂಡರಾದ ದೇವೇಂದ್ರಗೌಡ ಯಾಪಲಪರ್ವಿ, ಶರಣೇಗೌಡ ಪೋಲಿಸ್ಪಾಟೀಲ, ಜಡಿಯಪ್ಪ ವಕೀಲ, ಮಲ್ಲಿಕಾರ್ಜುನ ಜೀನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ