ಜನರನ್ನು ಸಾಯಿಸುತ್ತಿರುವ ಸರ್ಕಾರ : ಖಂಡ್ರೆ ಕಿಡಿ


Team Udayavani, Apr 26, 2021, 9:11 PM IST

ಕಹತಗ

ಭಾಲ್ಕಿ : ಬೀದರ ಜಿಲ್ಲೆಯಲ್ಲಿ ಆಡಳಿತ ಸಂಪೂರ್ಣ ಸತ್ತು ಹೋಗಿದ್ದು, ಮುಗ್ದ ಕೊರೊನಾ ರೋಗಿಗಳು ನರಳಾಡಿ ಸಾಯುತ್ತಿದ್ದರೂ ಸ್ಪಂದಿಸದ ಸ್ಥಿತಿ ಬಂದಿರುವುದು ನಿಜಕ್ಕೂ ದುರ್ದೈವ. ಸರ್ಕಾರ ಸಂವೇದನೆಯನ್ನೇ ಕಳೆದುಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಕಿಡಿ ಕಾರಿದರು.

ನೀರಸವಾಗಿ ನಡೆದ ಕೆಡಿಪಿ ಸಭೆ ಬಗ್ಗೆ ಆಕ್ರೋಶ ಹೊರಹಾಕಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಕಾಟಾಚಾರಕ್ಕೆ ನಡೆಸಿದಂತಿದೆ. ಜಿಲ್ಲೆಯಲ್ಲಿ ಕಳೆದ 2 ವಾರಗಳಿಂದ ಸರಾಸರಿ ಎಷ್ಟು ಪ್ರಕರಣ ಹೆಚ್ಚಳವಾಗಿದೆ. ದೈನಿಕ ಪ್ರಕರಣಗಳ ಸಂಖ್ಯೆ ಯಾವ ಪ್ರಮಾಣದಲ್ಲಿ ಹಚ್ಚಳವಾಗುತ್ತಿದೆ.

ಮರಣ ದರ ಎಷ್ಟು ಏರಿದೆ. ಈ ಸರಾಸರಿಯಂತೆ ಮುಂದಿನ ದಿನಗಳಲ್ಲಿ ಯಾವ ಪ್ರಮಾಣದಲ್ಲಿ ಪ್ರಕರಣ ಹೆಚ್ಚುತ್ತದೆ. ಅದಕ್ಕೆ ಕೈಗೊಳ್ಳಬೇಕಾದ ಕ್ರಮಗಳೇನು? ಎಂಬ ಯಾವ ವಿಚಾರವನ್ನೂ ಚರ್ಚಿಸದೇ, ಅನಾವಶ್ಯಕ ವಿಚಾರಗಳ ಬಗ್ಗೆ ಮಾತನಾಡಿ, ಕಾಲಹರಣ ಮಾಡಿ ಸಭೆ ಬರಖಾಸ್ತು ಮಾಡಿದ್ದು ನಿಜಕ್ಕೂ ಆಡಳಿತದ ನಿಷ್ಕ್ರಿàಯತೆಯನ್ನು ಮತ್ತು ಬೇಜವಾಬ್ದಾರಿತನ ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ರಾಜಕೀಯ ಮಾಡುವ ಸಮಯವಲ್ಲ. ಎಲ್ಲರೂ ಒಗ್ಗೂಡಿ ಕೊರೊನಾವನ್ನು ಮಣಿಸಬೇಕಾದ ಸಮಯ. ಆದರೆ ಸರ್ಕಾರದ ಕಾರ್ಯವೈಖರಿ ಎಲ್ಲರೂ ಆಕ್ರೋಶಗೊಳ್ಳುವಂತೆ ಮಾಡುತ್ತಿದೆ. ಹಣ ಇಧ್ದೋರಿಗೆ ಮಾತ್ರ ಚಿಕಿತ್ಸೆ ಸಿಗುತ್ತಿದೆ. ಬಡವರು ಬೀದಿ ಹೆಣವಾಗುತ್ತಿದ್ದಾರೆ.

ಈಗ ಬಹುತೇಕ ಬೀದರ ಜಿಲ್ಲೆಯಲ್ಲಿ ನಿತ್ಯ 10 ರಿಂದ 15 ಮಂದಿ ಸಾವಿಗೀಡಾಗುತ್ತಿದ್ದಾರೆ. ರೆಮ್‌ ಡೆಸಿವಿಯರ್‌ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಅಗತ್ಯ ಇರುವ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಲಭಿಸುತ್ತಿಲ್ಲ. ಹೀಗಾಗಿ ಆಕ್ಸಿಜನ್‌, ಹಾಸಿಗೆ, ವೆಂಟಿಲೇಟರ್‌ ಮತ್ತು ಔಷಧ ಚಿಕಿತ್ಸೆ ಸಿಗದೆ ರೋಗಿಗಳು ಸಾವಿಗೀಡಾಗುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸರ್ಕಾರದ ಗಮನ ಸೆಳೆದರೂ ಕ್ರಮ ಕೈಗೊಳ್ಳದಿರುವುದು ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯೇ ಇಲ್ಲವೇ ಎಂಬ ಅನುಮಾನ ಹುಟ್ಟಿಸಿದೆ. ತಕ್ಷಣವೇ ಸರ್ಕಾರ ಕಾರ್ಯೋನ್ಮುಖವಾಗಿ ಜಿಲ್ಲೆಯಲ್ಲಿ ಅಕ್ಸಿಜನ್‌ ಹಾಸಿಗೆ ಹೆಚ್ಚಿಸಿ, ಅಕ್ಸಿಜನ್‌ ಕೊರತೆ ನೀಗಿಸದಿದ್ದರೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕೋವಿಡ್‌ ಚಿಕಿತ್ಸಾ ಕೆಂದ್ರ ತೆರೆಯದಿದ್ದರೆ ನಿತ್ಯ 40ರಿಂದ 50 ಜನ ಸಾವಿಗೀಡಾಗುವ ಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೂಡಲೇ ಸರ್ಕಾರ ಬಡ ಕೊರೊನಾ ರೋಗಿಗಳ ಜೀವ ರಕ್ಷಣೆಗೆ ಮುಂದಾಗಬೇಕು. ಅಗತ್ಯ ಔಷಧ್ಯ, ಹಾಸಿಗೆ, ಆಕ್ಸಿಜನ್‌, ರೆಮ್‌ಡೆಸಿವಿಯರ್‌ ಇತ್ಯಾದಿ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಈ ಎಲ್ಲಾ ರೋಗಿಗಳ ಸಾವಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.