ಅನುದಾನಕ್ಕೆ ಮಾತು ತಪ್ಪಿದ ಸರ್ಕಾರ


Team Udayavani, Dec 23, 2018, 1:08 PM IST

bid-1.jpg

ಬೀದರ: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ 20 ಕೋಟಿ ಸಾಲದ ಹಣ ಕೊಡಿಸುವ ಭರವಸೆ ನೀಡಿದ ಸರ್ಕಾರ ಇದೀಗ ಒಂದು ಕೋಟಿ ಮಾತ್ರ ಅನುದಾನ ಬಿಡುಗಡೆ ಮಾಡಿದ್ದು, ಸರ್ಕಾರ ಕೊಟ್ಟ ಮಾತು ತಪ್ಪಿತೇ ಎಂಬ ಅನುಮಾನ ರೈತರನ್ನು
ಕಾಡುತ್ತಿದೆ.

ಕಾರ್ಖಾನೆಗೆ 20 ಕೋಟಿ ಅನುದಾನದ ಪೈಕಿ ಕೇವಲ ಒಂದು ಕೋಟಿ ಅನುದಾನ ನೀಡುವ ನಿರೀಕ್ಷೆ ಇದೆ ಎಂದು ಡಿ.18ರಂದು ಉದಯವಾಣಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಅದರಂತೆ ಇದೀಗ ಕಾರ್ಖಾನೆಗೆ ಕೇವಲ ಒಂದು ಕೋಟಿ ಮಾತ್ರ ಅನುದಾನ ಬಿಡುಗಡೆಯಾಗಿದ್ದು, ಕಾರ್ಖಾನೆ
ಸುಸೂತ್ರವಾಗಿ ನಡೆಯುವುದು ಬಹುತೇಕ ಅನುಮಾನ ಎನ್ನಲಾಗಿದೆ. 

ಜಿಲ್ಲೆಯ ರೈತರ ಜೀವನಾಡಿ ಎಂದೇ ಕರೆಯಲಾಗುವ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಆರ್ಥಿಕ ಸಂಕಷ್ಟದಿಂದ ಬಾಗಿಲು ಮುಚ್ಚಲಾಗಿತ್ತು. ಜಿಲ್ಲೆಗೆ ಸಹಕಾರ ಇಲಾಖೆ ಸಚಿವರು ಇರುವ ಕಾರಣ ಎಲ್ಲ ಕಾರ್ಖಾನೆಗಳಿಗೆ ಮುನ್ನ ಬಿಎಸ್‌ಎಸ್‌ಕೆ ಪ್ರಾರಂಭಗೊಳ್ಳುತ್ತದೆ ಎಂದು ರೈತರು ನೀರಿಕ್ಷಿಸಿದ್ದರು. ಕಾರ್ಖಾನೆಗೆ 20 ಕೋಟಿ ಅನುದಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಇಬ್ಬರು ಸಚಿವರು ಕೂಡ ನೀಡಿದ್ದರು.
 
ಸದ್ಯ ಜಿಲ್ಲೆಯ ಎಲ್ಲ ಕಾರ್ಖಾನೆಗಳು ಕಬ್ಬು ನುರಿಸಲು ಪ್ರಾರಂಭಿಸಿ ತಿಂಗಳು ಕಳೆದಿವೆ. ಆದರೆ, ಬಿಎಸ್‌ಎಸ್‌ಕೆಗೆ 20 ಕೋಟಿ ಸಾಲದ ಹಣ ಬಂದಿಲ್ಲ. ಬದಲಾಗಿ ಕಾರ್ಖಾನೆ ಪ್ರಾರಂಭಕ್ಕೆ ಒಂದು ಕೋಟಿ ಅನುದಾನ ನೀಡಿ ಕೈ ತೊಳೆದುಕೊಳ್ಳುತ್ತಾ ಸರ್ಕಾರ ಎಂಬ ಅನುಮಾನಗಳು ರೈತರನ್ನು ಕಾಡುತ್ತಿದೆ. ಸದ್ಯ ಗ್ರಾಮೀಣ ಭಾಗದ ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಬೆಲೆ ಎಷ್ಟಾದರೂ ನೀಡಲಿ, ಮೊದಲು ಹೊಲದಲ್ಲಿನ ಕಬ್ಬು ಸಾಗಿಸಿ ಎಂದು ಕಾರ್ಖಾನೆಗಳ ಕಡೆಗೆ ರೈತರು ಮುಖ ಮಾಡಿದ್ದಾರೆ.
 
ಮುಂದಿನ ಬಾಗಿಲಿನಿಂದ ಆಡಳಿತ ಮಂಡಳಿಗೆ ಮನೆಗೆ ಕಳುಹಿಸಲಾಗಿತ್ತು. ಇದೀಗ ಕಾರ್ಖಾನೆಗೆ 20 ಕೋಟಿ ಅನುದಾನ ಬರುತ್ತಿದೆ ಎಂದು ಹಿಂದಿನ ಬಾಗಿಲಿನಿಂದ ಮತ್ತೆ ಕಾರ್ಖಾನೆಗೆ ಬಂದಿದ್ದಾರೆ. ಸರ್ಕಾರ ಯಾವ ಆಧಾರದಲ್ಲಿ ಒಂದು ಕೋಟಿ ಅನುದಾನ ನೀಡಿದೆ ಎಂಬುದು ಗೊತ್ತಾಗಿಲ್ಲ. 20 ಕೋಟಿ ಒಂದೇ ಬಾರಿಗೆ ಅನುದಾನ ನೀಡಿದರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ನಡೆಯುತ್ತಿತ್ತು. ಒಂದು ಕೋಟಿಯಲ್ಲಿ ಕಾರ್ಖಾನೆಯ ಒಂದು ಸಣ್ಣಪುಟ್ಟ ಕೆಲಸಗಳನ್ನು ಕೂಡ ಮಾಡಲು ಸಾಧ್ಯವಿಲ್ಲ. ಸಹಕಾರ ಸಚಿವರು ಜಿಲ್ಲೆಗೆ ಮುಖ್ಯಮಂತ್ರಿಗಳಿದ್ದಂತೆ. ಅಲ್ಲದೆ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತರು ಆಗಿದ್ದಾರೆ. ಜಿಲ್ಲೆಯ ಎಲ್ಲ ರಾಜಕಾರಣಿಗಳು ಆತ್ಮಾವಲೋಕ ಮಾಡಿಕೊಳ್ಳಬೇಕು. ಅವರು ಮನಸ್ಸು ಮಾಡಿದರೆ ಕಾರ್ಖಾನೆ
ಪ್ರಾರಂಭಗೊಂಡು ಕಬ್ಬು ನುರಿಸುವ ಕಾರ್ಯ ಆರಂಭವಾಗುತ್ತಿತ್ತು.

ಚುನಾಯಿತ ರಾಜಕಾರಣಿಗಳು ಕಾರ್ಖಾನೆ ಮುಚ್ಚುವ ಹುನ್ನಾರು ಮಾಡುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳಗಾರರ ಸಮಸ್ಯೆ ಗೊತ್ತಿದೆ. ಆದರೂ ಬಿಎಸ್‌ ಎಸ್‌ಕೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ರೈತರ ನೋವಿಗೆ ರಾಜಕಾರಣಿಗಳೆ ಕಾರಣರಾಗಿದ್ದಾರೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.
 
ಕಳೆದ ಸಾಲಿನಲ್ಲಿ ಕೂಡ ಸರ್ಕಾರ ಕಾರ್ಖಾನೆ ಮುಚ್ಚಿದ ಮೇಲೆ ಸಾಲದ ಹಣ ಬಿಡುಗಡೆ ಮಾಡಿತ್ತು. ಇದೀಗ ಅದೇ ಸ್ಥಿತಿ ಎದುರಾಗುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದ್ದು, ಒಂದು ಕೋಟಿ ವೆಚ್ಚದಲ್ಲಿ ಕಾರ್ಖಾನೆಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಕಷ್ಟ ಎಂದು ಕಾರ್ಖಾನೆ ಸಿಬ್ಬಂದಿ ತಿಳಿಸಿದ್ದಾರೆ. ಬಾಕಿ ಸಂಬಳ ಪಾವತಿ ಮಾಡುವಂತೆ ಕೂಡ ಸಿಬ್ಬಂದಿ ಅಧಿಕಾರಿಗಳಿಗೆ ಕೇಳುತ್ತಿದ್ದಾರೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹಾಗೂ ಸಚಿವ ರಾಜಶೇಖರ ಪಾಟೀಲ ಅವರನ್ನು ಕೂಡ ಭೇಟಿ ಮಾಡಿ ಹಲವು ಬಾರಿ ಕಾರ್ಮಿಕ ಮುಖಂಡರು ಸಂಬಳ ನೀಡುವಂತೆ, ಕಾರ್ಖಾನೆ ಪ್ರಾರಂಭಿಸುವಂತೆ ಮನವಿ ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಪ್ರಸಕ್ತ ವರ್ಷ ಕಾರ್ಖಾನೆ ಶುರು ಮಾಡಲು ಸರ್ಕಾರ 20 ಕೋಟಿ ಅನುದಾನ ಒದಗಿಸುವುದಾಗಿ ಒಪ್ಪಿಗೆ ಸೂಚಿಸಿದೆ. ಇದೀಗ ಡಿ.21ರಂದು ಕಾರ್ಖಾನೆಗೆ 1 ಕೋಟಿ ಅನುದಾನ ಜಮಾ ಆಗಿದೆ. ಕಾರ್ಖಾನೆ ಪ್ರಾರಂಭಿಸುವ ಕೆಲಸಗಳು ನಡೆಯುತ್ತಿದ್ದು, ಸೂಕ್ತವಾಗಿ ಹಣ ಖರ್ಚು ಮಾಡಿದಂತೆ ಇನ್ನುಳಿದ ಹಣ ಕೂಡ ಕಾರ್ಖಾನೆ ಖಾತೆಗೆ ಜಮಾಗೊಳ್ಳುತ್ತದೆ. ಕೂಡಲೇ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ.
 ಕಲ್ಲಪ್ಪ , ಬಿಎಸ್‌ಎಸ್‌ಕೆ ಪ್ರಭಾರಿ ವ್ಯವಸ್ಥಾಪಕ ನಿರ್ದೇಶಕ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.