ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚಲು ಯಾರು ಸಿಗಲ್ಲ: ಕಾರಜೋಳ ಟೀಕೆ
Team Udayavani, Oct 18, 2022, 5:54 PM IST
ಬೀದರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಕಾಂಗ್ರೆಸ್ ಜೋಡೋ’ ಯಾತ್ರೆ ಕೇವಲ ನಾಟಕ, ಹೊಸ ಗಿಮಿಕ್ ಅಷ್ಟೇ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.
ಔರಾದನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಏನು ಸಾಧನೆ ಈಗ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ. ಜನ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಜೋಡೋ ಯಾತ್ರೆಯನ್ನು ಹರಿದು ಹಂಚಿ ಹೋಗಿರುವ ಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಲ್ಲಿ ಮಾಡಿದರೆ ಸರಿಯಾಗುತ್ತಿತ್ತು. 2024ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚಲು ಸಹ ಯಾರು ಸಿಗುವುದಿಲ್ಲ ಎಂದು ಭವಿಷ್ಯ ನುಡಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್