ಹೈಮಾಸ್ಟ್ ದೀಪಕ್ಕೆ ಅನುದಾನ: ಶಾಸಕ ರಹೀಂ
ಶಾಲಾ ಮಕ್ಕಳಿಗೆ ಅನುಕೂಲವಾಗುವ ಹಾಗೆ ಕೂಡ ನರ್ಸರಿಯಲ್ಲಿ ಸಸಿಗಳನ್ನು ಬೆಳೆಸಲಾಗಿದೆ
Team Udayavani, Feb 11, 2021, 5:16 PM IST
ಬೀದರ: ಶಹಾಪುರ ಗೇಟ್ ಹತ್ತಿರದಲ್ಲಿನ ಹಳ್ಳದಕೇರಿ 88 ಟೀ ಪಾರ್ಕ್ನಲ್ಲಿ ಹೈಮಾಸ್ಟ್ ದೀಪ ಅಳವಡಿಕೆಗೆ ಶಾಸಕರ ನಿಧಿ ಯಿಂದ ಅನುದಾನ ನೀಡುವುದಾಗಿ
ಶಾಸಕ ರಹೀಂ ಖಾನ್ ತಿಳಿಸಿದರು. ಹಳ್ಳದಕೇರಿಯ ಪಾರ್ಕ್ಗೆ ಶಾಸಕ ರಹೀಮ್ ಖಾನ್ ಭೇಟಿ ನೀಡಿ ಅ ಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲಿದ್ದ ಔಷಧಿ ಸಸಿಗಳ ಉಪಯೋಗದ ಮತ್ತು ಕುಡಿಯುವ ನೀರಿನ ಸೌಕರ್ಯದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಟೀ ಪಾರ್ಕ್ 25 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿದ್ದು, ಬೆಳಗ್ಗೆ ಸಾರ್ವಜನಿಕರು ವಾಕ್ ಮಾಡಬಹುದು. ಚಿಕ್ಕಮಕ್ಕಳಿಗೆ ಆಟವಾಡಲು ಅನುಕೂಲವಿದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ದೇವದೇವ ಗಾರ್ಡನ್ಗೆ ಭೇಟಿ: ಇದಕ್ಕೂ ಮೊದಲು ಶಾಸಕರು ದೇವದೇವ ವನದಲ್ಲಿರುವ ಗಾರ್ಡನ್ಗೆ ಭೇಟಿ ನೀಡಿದರು. ಈ ಗಾರ್ಡನ್ ಮೊದಲಿಗಿಂತಲೂ ಈಗ ತುಂಬಾ ಪ್ರಗತಿಯಾಗಿದೆ. ನೋಡಲು ಸುಮಧುರವಾಗಿದೆ. ಅತ್ಯುತ್ತಮ ಪರಿಸರ ಇಲ್ಲಿದೆ. ಇಲ್ಲಿಗೆ ಕೂಡ ಸಾರ್ವಜನಿಕರು ಭೇಟಿ ಕೊಡಬೇಕು ಎಂದು ತಿಳಿಸಿದರು.
ಶಹಾಪುರ ಗೇಟ್ ಹತ್ತಿರದ ನರ್ಸರಿಗೆ ಕೂಡ ಶಾಸಕರು ಭೇಟಿ ನೀಡಿದರು. ರೈತರಿಗೆ ಶ್ರೀಗಂಧ, ಹೆಬ್ಬೆವು, ಕರಿಬೇವು ಮತ್ತು ಲಿಂಬೆ ಇತರೆ ಜಾತಿಯ ಗಿಡಗಳನ್ನು ರೈತರಿಗಾಗಿ ಬೆಳೆಸಲಾಗಿದೆ. ಶಾಲಾ ಮಕ್ಕಳಿಗೆ ಅನುಕೂಲವಾಗುವ ಹಾಗೆ ಕೂಡ ನರ್ಸರಿಯಲ್ಲಿ ಸಸಿಗಳನ್ನು ಬೆಳೆಸಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ಪ್ರವೀಣಕುಮಾರ ಮೋರೆ ಅವರು ಶಾಸಕರಿಗೆ ಮಾಹಿತಿ ನೀಡಿದರು.
ಇಲ್ಲಿನ ನರ್ಸರಿಯಿಂದ ಸಾರ್ವಜನಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ತಿಳಿಸಬೇಕು ಎಂದು ಶಾಸಕರು ಅ ಧಿಕಾರಿಗಳಿಗೆ ಸೂಚಿಸಿದರು. ಕೃಷಿ ಪ್ರೋತ್ಸಾಹ
ಯೋಜನೆಯಡಿ ರೈತರಿಗೆ ಇರುವ ಸೌಕರ್ಯಗಳ ಬಗ್ಗೆ ಕೂಡ ತಿಳಿಸಲು ಶಾಸಕರು ಸಲಹೆ ಮಾಡಿದರು.
ಹೊಸ ಬಡಾವಣೆಗಳಲ್ಲಿ ಸಸಿ ನೆಡಿ: ಬೀದರ ನಗರದ ಹೊಸ ಬಡಾವಣೆಗಳಲ್ಲಿ ಕಡ್ಡಾಯ ಸಸಿಗಳನ್ನು ನೆಡಬೇಕು. ಜನರಿಗೆ ನೆರಳು ಆಗುವಂತಹ ಹೂ ಹಣ್ಣಿನ ಗಿಡಗಳನ್ನು ನೆಡಲು ಒತ್ತು ಕೊಡಬೇಕು ಎಂದು ಶಾಸಕರು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ಸದಾನಂದ ಮತ್ತು ಅರಣ್ಯ ಇಲಾಖೆಯ ಇನ್ನೀತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ