ಶಿಕ್ಷಕರ ತ್ಯಾಗದಿಂದ ಶ್ರೇಷ್ಠ ಸಮಾಜ


Team Udayavani, May 27, 2018, 1:25 PM IST

gul-4.jpg

ಬೀದರ: ಉತ್ತಮ ಗುರುವಿನಿಂದ ವಿದ್ಯಾರ್ಥಿಯಾದವನು ನೈಜ ಸಮಾಜ ಜೀವಿಯಾಗಿ ಹೊರ ಹೊಮ್ಮಲು ಸಾಧ್ಯ. ಈ
ನಿಟ್ಟಿನಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವಿನ ಸಂಬಂಧ ಕಪ್ಪೆ ಚಿಪ್ಪಿನಂತಿರಲಿ ಎಂದು ಸೃಜನಾತ್ಮಕ ಬೋಧನಾ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಜೋತ್ಸ್ನಾ ಅಯ್ಯಂಗಾರ್‌ ಹೇಳಿದರು.

ನಗರದ ಜನಸೇವಾ ಶಾಲೆಯಲ್ಲಿ ಸೃಜನಾತ್ಮಕ ಬೋಧನಾ ಸಂಸ್ಥೆ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ
ಶಿಕ್ಷಕರಿಗಾಗಿ ಆಯೋಜಿಸಿರುವ ಮೂರು ದಿನಗಳ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,
ಶಿಕ್ಷಕ ನಿಜ ಶಿಲ್ಪಕಾರನು ಹೌದು. ಆತನ ಪ್ರಾಮಾಣಿಕ ಹಾಗೂ ಪಾರದರ್ಶಕ ತ್ಯಾಗದಿಂದ ಶ್ರೇಷ್ಠ ಸಮಾಜ
ರಚನೆ ಸಾಧ್ಯವಾಗಿದ್ದು, ವಿದ್ಯಾರ್ಥಿಗಳೇ ಶಿಕ್ಷಕನ ಪ್ರಧಾನ ಸಂಪತ್ತಾಗಬೇಕೆಂದು ಕರೆ ಕೊಟ್ಟರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕೃತಿ, ಪರಂಪರೆ, ಆಚಾರ, ವಿಚಾರ, ಭಾವನಾತ್ಮಕ ಗುಣ, ನೈತಿಕ
ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವ ಗುರುವಾಗಬೇಕು. ಹೀಗಾದಾಗ ಮಾತ್ರ ವಿದ್ಯಾರ್ಥಿಗಳು ಬರೀ ಅಂಕ ಗಳಿಸುವ ಯಂತ್ರಗಳಾಗದೆ, ಸಮಾಜದ ನೈಜ ಆಸ್ತಿಯಾಗಬಲ್ಲರು ಎಂದು ಹೇಳಿದರು.

ಇಂದು ಮಕ್ಕಳಲ್ಲಿ ಸಾಮಾನ್ಯ ಜ್ಞಾನದ ಕೊರತೆ ತೀರ ಕಂಡು ಬರುತ್ತಿದೆ. ಶಿಕ್ಷಣದ ಜೊತೆ ಜೊತೆಗೆ ಮಾನವೀಯ
ಮೌಲ್ಯ ಹಾಗೂ ಅಧ್ಯಾತ್ಮದ ತಿರುಳು ವಿದ್ಯಾರ್ಥಿಗಳಲ್ಲಿ ಉತ್ತಿ ಬಿತ್ತಿದಾಗ ಮಾದರಿ ಜೀವನ ಕಂಡುಕೊಂಡು ಜಗತ್ತಿಗೆ ತನ್ನದೆ ಆದ ವೈಶಿಷ್ಟ್ಯ ನೀಡಬಲ್ಲರು ಎಂದರು.

ಡಿಡಿಪಿಐ ಇನಾಯತ್‌ ಅಲಿ ಶಿಂಧೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಮೊಬೈಲ್‌ ದುನಿಯಾದಲ್ಲಿ
ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯನ್ನು ಗಾಳಿಗೆ ತೂರಿದ್ದಾರೆ. ದೈಹಿಕ ಹಾಗೂ ಮಾನಸಿಕವಾಗಿ ದುರ್ಬಲರಾಗಿ
ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಯಂತಹ ಕ್ಲಿಷ್ಟಕರವಾದ ದಾರಿ ಕಂಡುಕೊಳ್ಳುತ್ತಿರುವ ಯುವಜನತೆಗೆ ಶಿಕ್ಷಕರಾದವರು
ತಾಯಿಯ ರೂಪದಲ್ಲಿ ವಾತ್ಸಲ್ಯ ಕರುಣಿಸಿ, ಸ್ವತ್ಛ ಹಾಗೂ ಸುಂದರ ಯುವಕರನ್ನು ಸಮಾಜಕ್ಕೆ ಧಾರೆ ಎರೆಯಲು
ಕಂಕಣ ಬದ್ದರಾಗಬೇಕು ಎಂದರು. 

ಜ್ಞಾನ ಕಾರಂಜಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಬಸವರಾಜ ಭರಶೆಟ್ಟಿ ಮಾತನಾಡಿ, ನುರಿತ ಶಿಕ್ಷಕರಿಂದ ಪ್ರಬುದ್ಧ
ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಅಲ್ಲಿ ಜ್ಞಾನದ ಗಂಗೆ ನೆಲೆಸಬಲ್ಲಳು. ಅಂತಹ ವಾತಾವರಣದಲ್ಲಿ ಮಕ್ಕಳು
ಸಾಮಾಜಿಕ ಕಳಕಳಿಯುಳ್ಳುವರಾಗಿ ದೇಶಕ್ಕೆ ನೈಜ ಕೊಡುಗೆ ನೀಡಬಲ್ಲರು ಎಂದು ಅಭಿಪ್ರಾಯಪಟ್ಟರು.

ಶಾಲೆಯ ಆಡಳಿತ ಮಂಡಳಿ ಸದಸ್ಯ ಬಿ.ಎಸ್‌. ಕುದುರೆ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ
ಜಲಾದೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಮಲ್ಲಮ್ಮ ಚಾಮರೆಡ್ಡಿ ನಿರೂಪಿಸಿದರು. ಅಧ್ಯಕ್ಷ ಬಸವರಾಜ ಸ್ವಾಮಿ
ವಂದಿಸಿದರು. ಸುಧಾಕರ ದೇಶಪಾಂಡೆ, ಶಿವಶಂಕರ ತರನಳ್ಳಿ, ಯಶವಂತರಾವ್‌ ಬಿರಾದಾರ, ರವಿ ಶಂಭು ಸೇರಿದಂತೆ
ಜಿಲ್ಲೆಯ ಸುಮಾರು 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 48 ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.