ಗಡಿಭಾಗದ ಜಾನಪದ ಕಲಾವಿದರ ಬೆಳೆಸಿ


Team Udayavani, Feb 23, 2022, 12:53 PM IST

17border

ಬಸವಕಲ್ಯಾಣ: ಸಾಮಾಜಿಕ ಬದುಕಿನಲ್ಲಿ ಜಾನಪದ ಕಲೆಗೆ ಬಹಳಷ್ಟು ಗೌರವ ಸಿಗುತ್ತಿದೆ. ಆದರೆ ಅರಳಬೇಕಾದ ಗ್ರಾಮೀಣ ಭಾಗದ ಜಾನಪದ ಕಲಾವಿದರಿಗೆ ಕಾಣದಂತೆ ಮಾಯವಾಗುತ್ತಿದ್ದಾರೆ, ಅಂಥವರನ್ನು ಗುರುತಿಸಿ ಬೆಳೆಸುವ ಕಾರ್ಯ ನಡೆಸಬೇಕಾಗಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕಲ್ಯಾಣರಾವ್‌ ಮದರಗಾಂಬಕರ್‌ ಹೇಳಿದರು.

ಧಾಮುರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ವಿಶ್ವಶಾಂತಿ ಫೌಂಡೇಶನ್‌ ಮತ್ತು ಕಲ್ಚರಲ್‌ ವೆಲ್ಫೇರ್‌ ಡೆವಲಪ್‌ಮೆಂಟ್‌ ಸಂಸ್ಥೆ ಆಶ್ರಯದಲ್ಲಿ ನಡೆದ ಜಾನಪದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಡಿ ಭಾಗದಲ್ಲಿ ಕನ್ನಡ ಎಂದರೆ ಮರಾಠಿ ಭಾಷೆಯಲ್ಲಿ ಮಾತನಾಡುವುದು ಹೆಚ್ಚು ಕಾಣುವಂತಾಗಿದೆ. ಹೀಗಾಗಿ ಕನ್ನಡದಲ್ಲಿ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ. ಅದಕ್ಕೆ ಎಲ್ಲ ಭಾಷೆಗಳಿಗೆ ಗೌರವ ಕೊಡುವ ಜೊತೆಗೆ ಕನ್ನಡಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ವಿಶ್ವಶಾಂತಿ ಮತ್ತು ಕಲ್ಚರಲ್‌ ವೆಲ್ಫೇರ್‌ ಸಂಸ್ಥೆ ಅಧ್ಯಕ್ಷ ಜೈಪಾಲ ಬೋರಾಳೆ ಪ್ರಾಸ್ತಾವಿಕ ಮಾತನಾಡಿ, ಜಾನಪದ ಗಡಿನಾಡು ಉತ್ಸವ ಆಚರಿಸುವುದರಿಂದ ಜನರಿಗೆ ಕನ್ನಡದ ಬಗ್ಗೆ ಜಾಗೃತಿ ಅಲ್ಲದೇ ಅರಿವು ಮೂಡಿಸಲು ಸಹಕಾರಿಯಾಗುತ್ತದೆ. ಜತೆಗೆ ಕನ್ನಡದ ಸ್ವಾಭಿಮಾನ ಹೆಚ್ಚುತ್ತದೆ. ಹೀಗಾಗಿ ಜಾನಪದ ಗಡಿನಾಡು ಉತ್ಸವ ಆಚರಿಸಲಾಗುತ್ತಿದೆ. ಇಂತಹ ಉತ್ಸವಗಳಲ್ಲಿ ಹೆಚ್ಚಿನ ಕಲಾವಿದರು ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ನಂತರ ಕೈಲಾಸ ಬಾವಿಕಟ್ಟಿ, ಪ್ರಭು ಕಾಂಬಳೆ, ಮದರ ಥೆರೆಸಾ ಭಜನಾ ಮಂಡಳಿ ಮಹಿಳೆಯರು ಕಲಾವಿದರು ಕಲೆ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ರೇಖಾ ಜಾಧವ, ಉಪಾಧ್ಯಕ್ಷ ಸಂಜು ಜಾಧವ, ಎಪಿಎಂಸಿ ಸದಸ್ಯ ಸಂತೋಷ ಜಾಧವ, ಎಸ್‌ಡಿಎಂಸಿ ಅಧ್ಯಕ್ಷ ಶಿವಾಜಿ ಜಾಧವ, ಉಪಾಧ್ಯಕ್ಷ ಮೀನಾ ಮೂಳೆ, ಶ್ರೀಮಂತ ಪಾಟೀಲ್‌, ಮುಖ್ಯಗುರು ಗಿರಿಧರ ಧಾನುರೆ, ದಶರಥ ಜಾಧವ, ರಾಹುಲ್‌ ಕಲ್ಲುರೆ, ಕುಲದೀಪ ಕಾಂಬಳೆ, ಬಸವರಾಜ ಕಾಳೆ, ಶಶೀಲ್‌ ಪ್ರಜಾರಿ, ಧನಜಾಜಿ ಉದಬಲೆ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.