ಆಯುರ್ವೇದದಲ್ಲಿ ವಿಶ್ವಕ್ಕೆ ಗುರು ಭಾರತ: ಡಾ| ಮಹೇಶ್ವರಯ್ಯ


Team Udayavani, May 29, 2018, 1:30 PM IST

gul-3.jpg

ಬೀದರ: ಆಯುರ್ವೇದವು ಪ್ರಾಚೀನ ಕಾಲದಿಂದಲೂ ಬೆಳೆದು ಬಂದ ಔಷಧ ಪದ್ಧತಿಯಾಗಿದ್ದು, ಈ ವಿಚಾರದಲ್ಲಿ ಭಾರತವು ಜಗತ್ತಿಗೆ ಗುರುವಾಗಿದೆ ಎಂದು ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಪತಿ ಡಾ| ಎಚ್‌.ಎಂ. ಮಹೇಶ್ವರಯ್ಯ ಹೇಳಿದರು.

ನಗರದ ಗಣಪತರಾವ್‌ ಹಲವಾಯಿ ಆಡಿಟೋರಿಯಮ್‌ನಲ್ಲಿ ಸೋಮವಾರ ಎನ್‌. ಕೆ. ಜಾಬಶೆಟ್ಟಿ ಆಯುರ್ವೇದಿಕ್‌ ಮೇಡಿಕಲ್‌ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ಶ್ರೀ ಸಿದ್ದಾರೂಢ ಚಾರಿಟೇಬಲ್‌ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದವು ಜಾನಪದ ಜೀವನದಿಂದ ಕೂಡಿದ್ದಾಗಿದೆ. ಜನಪದ ವೈದ್ಯ ಪದ್ಧತಿಯಿಂದ ಹುಟ್ಟಿಕೊಂಡ ಈ ಆಯುರ್ವೇದ ಪದ್ಧತಿಯು ಬರುಬರುತ್ತ ಸುಧಾರಣೆಗೊಳಪಟ್ಟು ಅದು ಅತ್ಯಂತ ಶಕ್ತಿಶಾಲಿ ಔಷಧ ಪದ್ಧತಿಯಾಗಿ ಬೆಳೆದು ನಿಂತಿದೆ. ಚೀನಾದಂತಹ ಅಭಿವೃದ್ಧಿಪರ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಸಹ ಆಯುರ್ವೇದ ತನ್ನ ವಿಸ್ತಾರ ಹೆಚ್ಚಿಸಿಕೊಂಡಿದ್ದು, ವಿದೇಶಗಳಲ್ಲಿ ಸೇವೆ ಮಾಡಲು ನಮ್ಮ ಆಯುರ್ವೇದ ವೈದ್ಯರಿಗೆ ಇಂದು ವಿಫುಲ ಅವಕಾಶಗಳಿವೆ ಎಂದರು. 

ಜ್ಞಾನ ಸಂಪಾದನೆಗಾಗಿ ಮಾತ್ರ ನಿಮ್ಮ ಸರ್ಟಿಫಿಕೇಟ್‌ ಕಾರ್ಯ ಮಾಡಬೇಕು ಹೊರತು ಸ್ವಾರ್ಥದ ಗಳಿಕೆಗಲ್ಲ. ಇದನ್ನು ಮನಗಂಡು ನಾವು ಮುನ್ನಡೆದರೆ ಸಮಾಜ ನಿಮ್ಮನ್ನು ಗೌರವದಿಂದ ಪೂಜಿಸುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಕಾರ್ಯದರ್ಶಿ ಡಾ| ಚನ್ನಬಸಪ್ಪ ಹಾಲಹಳ್ಳಿ ಮಾತನಾಡಿ, ಆಯುರ್ವೇದ ಔಷಧ ಮನುಷ್ಯನನ್ನು ಸದೃಢವಾಗಿ ಮತ್ತು ಧೀರ್ಘಾಯುಷಿಯಾಗಿ ಬಾಳುವಂತೆ ಮಾಡುತ್ತದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಟಗೊಳಿಸಲು ಕಾರಣವಾಗಿದ್ದು, ಇದಕ್ಕೆ ಅಂಟಿಕೊಂಡಿರುವ ಯೋಗ ಹಾಗೂ ಪ್ರಾಣಾಯಾಮಗಳು ಮನುಷ್ಯನನ್ನು ನಿರೋಗಿಯಾಗಿ ಹಾಗೂ ಆತ್ಮಸ್ಥೈರ್ಯದಿಂದ ಬದುಕಲು ಪ್ರೇರೇಪಿಸುತ್ತವೆ. ಇಡೀ ಕರ್ನಾಟಕದಲ್ಲಿ ಶಿಕ್ಷಣ ಹಾಗೂ ಪ್ರಯೋಗ ಶಾಲೆಯಲ್ಲಿ ನಮ್ಮ ಕಾಲೇಜು ಮೂರನೇ ಸ್ಥಾನದಲ್ಲಿರುವುದು ನಮಗೆ ಸಂತಸದ ಸಂಗತಿ ಎಂದರು.

ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ|ವಿ.ಎಸ್‌. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 14 ಜನ ಪದವಿ ಹಾಗೂ 6 ಜನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಸಂಸ್ಥೆಯ ಜಂಟಿ ಕಾರ್ಯದರ್ಶಿ ಬಿ.ಜಿ. ಶಟಕಾರ, ಖಜಾಂಚಿ ಬಸವರಾಜ ಜಾಬಶೆಟ್ಟಿ, ಸದಸ್ಯರಾದ ಪ್ರಭುಶಟ್ಟಿ ಮುದ್ದಾ, ಶಿವಶರಣಪ್ಪ ಸಾವಳಗಿ, ಶರಣಪ್ಪ ತಿರ್ಲಾಪುರೆ, ಉದಯಭಾನು ಹಲವಾಯಿ, ಮಡಿವಾಳಪ್ಪ ಗಂಗಶಟ್ಟಿ ವೇದಿಕೆಯಲ್ಲಿದ್ದರು. ಪ್ರಾಚಾರ್ಯ ಡಾ| ನಾಗರಾಜ ಮೂಲಿಮನಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ| ಶೈಲಜಾ ಜಿಂಕಾ ಹಾಗೂ ಡಾ| ಕೋಮಲ ಪವಾರ ನಿರೂಪಿಸಿದರು. ಡಾ| ಚಂದ್ರಕಾಂತ ಹಳ್ಳಿ ವಂದಿಸಿದರು.

ಡಾ| ಚನ್ನಬಸವಣ್ಣ ಹಾಗೂ ಡಾ| ಧೂಳಪ್ಪ, ಡಾ| ಜಗನ್ನಾಥ ಹೆಬ್ಟಾಳೆ, ಡಾ| ಉಮಾಕಾಂತ ಪಾಟೀಲ, ರಾಜೆಂದ್ರ ಜೊನ್ನಿಕೇರಿ, ರಮೇಶ ಮಠಪತಿ, ಹಾವಗಿರಾವ್‌ ಮೈಲಾಪುರೆ, ಡಾ| ವಿಜಯಕುಮಾರ ಬಿರಾದಾರ, ಡಾ| ಬ್ರಹ್ಮಾನಂದ
ಸ್ವಾಮಿ, ಡಾ| ಪ್ರವಿಣ ಸಿಂಪಿ ಹಾಗೂ ನೂರಾರು ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.