ನಗರದಲ್ಲಿ‌ ಗುರು ನಾನಕ್ ಜಯಂತಿ ಸಂಭ್ರಮ: ದೇಶ- ವಿದೇಶದ ಸಿಖ್ಖರು ಭಾಗಿ


Team Udayavani, Nov 8, 2022, 7:12 PM IST

ನಗರದಲ್ಲಿ‌ ಗುರು ನಾನಕ್ ಜಯಂತಿ ಸಂಭ್ರಮ: ದೇಶ- ವಿದೇಶದ ಸಿಖ್ಖರು ಭಾಗಿ

ಬೀದರ್: ಸಿಖ್ಖ್ ಬಾಂಧವರ ಆರಾಧ್ಯ ದೇವ ಗುರು ನಾನಕ್‌ಜೀ ದೇವ್ ಮಹಾರಾಜರ 553 ನೇ ಜನ್ಮ ದಿನ್ಮೋತ್ಸವ ನಿಮಿತ್ತ ನಗರದಲ್ಲಿ ಮಂಗಳವಾರ ಸಾಯಂಕಾಲ ಗುರು ಗ್ರಂಥಗಳ ಭವ್ಯ ಮೆರವಣಿಗೆ ನಡೆಯಿತು. ಈ ಅಭೂತಪೂರ್ವ ಕ್ಷಣಕ್ಕೆ ದೇಶ- ವಿದೇಶದಿಂದ ಆಗಮಿಸಿದ ಸಾವಿರಾರು ಸಿಖ್ ಧರ್ಮೀಯರು ಸಾಕ್ಷಿಯಾದರು.

ಜಯಂತಿ ಹಿನ್ನಲೆಯಲ್ಲಿ ನಗರದ ಗುರುದ್ವಾರ ಪರಿಸರದಲ್ಲಿ ಸಂಭ್ರಮ, ಸಡಗರ ಮನೆ ಮಾಡಿತ್ತು. ಕಳೆದೆರಡು ವರ್ಷ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಿದ್ದ ಸಿಖ್ಖ ಬಾಂಧವರು ಈ ಬಾರಿ ಅದ್ದೂರಿಯಾಗಿ ಆಚರಿಸಿದರು. ನಗರದ ಐತಿಹಾಸಿಕ ಗುರುದ್ವಾರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಸಾವಿರಾರು ಭಕ್ತರಿಗಾಗಿ ಲಂಗರ್‌ನಲ್ಲಿ ಊಟ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಗುರುನಾನಕರ ಮಂದಿರದಲ್ಲಿ ದಿನವೀಡಿ ಧಾರ್ಮಿಕ ಕೈಂಕರ್ಯಗಳು, ಗ್ರಂಥ ಪಠಣ, ಕಥೆ- ಕೀರ್ತನೆಗಳು ಶ್ರದ್ಧಾ, ಭಕ್ತಿಯಿಂದ ನೆರವೇರಿದವರು. ಸಾಯಂಕಾಲ 4 ಗಂಟೆಗೆ ಆರಂಭವಾದ ಮೆರವಣಿಗೆಯೂ ಸಂಜೆ 7 ರವರೆಗೆ ಸಾಗಿತು. ವಿಶೇಷ ಅಲಂಕೃತ ವಾಹನದಲ್ಲಿ ಗುರುನಾನಕರ ಭಾವಚಿತ್ರ ವಾಹನ ಕಣ್ಮನ ಸೆಳೆಯಿತು. ಸಿಖ್ ಧರ್ಮಿಯರು ಭಕ್ತಿ- ಭಾವದೊಂದಿಗೆ ಭಾಗಿಯಾಗಿ ಹಾಡಿ, ಕುಣಿದು ಸಂಭ್ರಮಿಸಿದರಲ್ಲದೇ ಧಾರ್ಮಿಕ ಗ್ರಂಥ ಪಠಣ ಸಹ ನಡೆಸಿದರು.

ಆಕರ್ಷಿಸಿದ ಕಲೆಗಳ ಪ್ರದರ್ಶನ:

ಒಂದೆಡೆ ಬಾನಂಗಳದಲ್ಲಿ ಪಟಾಕಿಗಳ ಬೆಳಕಿನ ಚಿತ್ತಾರ ಮೂಡಿಸಿದರೆ ಮತ್ತೊಂದೆಡೆ ಪಾರಂಪರಿಕ ಕಲೆ ಪ್ರದರ್ಶನಗಳು ಮೈ ಜುಮ್ಮೆನಿಸಿದವು. ನೀಲಿ ಮತ್ತು ಹಳದಿ ದ್ವಜ (ನಿಶಾನೆ ಸಾಹೇಬ್) ಮತ್ತು ಸಿಖ್ಖರ ‘ಬೊಲೆ ಸೋನಿಹಾಲ್, ಸಶ್ರೀಯಾ ಅಕಾಲ್’ ಜಯ ಘೋಷಗಳು ಮೊಳಗಿದವು. ಅಲಂಕೃತ ಕುದರೆಗಳ ಮೇಲೆ ಸಿಖ್ ಧರ್ಮೀಯರು ಪಾರಂಪರಿಕ ತಲವಾರ್ ಮತ್ತು ಚಕ್ರ ತಿರುಗಿಸುವುದು, ಕೈಯಲ್ಲಿ ತಲವಾರ್ ಹಿಡಿದು ಓಡುವುದು ನೋಡುಗರನ್ನು ತನ್ನತ್ತ ಸೆಳೆಯಿತು. ಬಾಲಕ ಮತ್ತು ಬಾಲಕಿಯರು ಸಹ ತಲವಾರ್ ತಿರಿಸಿ ಸೈ ಎನಿಸಿಕೊಂಡರು. ಸುಮಾರು ಮೂರು ಕಿ.ಮೀ. ಉದ್ದದವರೆಗೆ ಮೆರವಣಿಗೆ ಸಾಗುವಾಗ ರಸ್ತೆಯ ಇಕ್ಕೆಡೆಗಳಲ್ಲಿ ನಗರದ ಜನ ವೈಭವವನ್ನು ಕಣ್ತುಂಬಿಕೊಂಡರು.

ಐತಿಹಾಸಿಕ ಗುರುದ್ವಾರದಿಂದ ಆರಂಭವಾದ ಮೆರವಣಿಗೆಯೂ ಮಡಿವಾಳ ವೃತ್ತ, ಕರಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮೂಲಕ ಸಾಗಿ ನಂತರ ನೆಹರು ಕ್ರೀಡಾಂಗಣ ಮೂಲಕ ಪುನಃ ಗುರುನಾನಕ ದೇವಸ್ಥಾನಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಖ್ ಬಾಂಧವರಿಗಾಗಿ ವಿವಿಧ ಸಂಘ- ಸಂಸ್ಥೆಗಳಿಂದ ರಸ್ತೆಯುದ್ದಕ್ಕೂ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದು ವಿಶೇಷವಾಗಿತ್ತು.

ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಗ್, ಪ್ರಮುಖರಾದ ಜ್ಞಾನಿ ದರ್ಬಾರ್‌ಸಿಂಗ್, ಮನಪ್ರೀತ್‌ಸಿಂಗ್ ಬಂಟಿ, ಪುನೀತ್ ಸಿಂಗ್, ಪವಿತ್ ಸಿಂಗ್ ಸೇರಿದಂತೆ ಬೆಂಗಳೂರು, ನಾಂದೇಡ, ಉದಗೀರ, ಲಾತೂರ, ಪುಣೆ, ಹೈದ್ರಾಬಾದ್ ಸೇರಿದಂತೆ ವಿವಿಧಡೆಯಿಂದ ಸಿಖ್ಖ್ ಬಾಂಧವರು ಭಾಗವಹಿಸಿದ್ದರು.‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.