ಎಚ್‌1ಎನ್‌1: ಬೀದರನಲ್ಲಿ ಕಟ್ಟೆಚ್ಚರ


Team Udayavani, Oct 5, 2018, 10:59 AM IST

bid-1.jpg

ಬೀದರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಮಾರಂಣಾಂತಿಕ ಕಾಯಿಲೆ ಎಚ್‌1ಎನ್‌1 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರನಲ್ಲಿ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಕಟ್ಟೆಚ್ಚರದಿಂದ ಇರಲು ಘೋಷಿಸಿದ್ದಾರೆ.

ಭಾಲ್ಕಿ ತಾಲೂಕಿನ ಹಲ್ಸಿ ತೂಗಾಂವ್‌ ಹಾಗೂ ಪಾಂಡ್ರಿ ಗ್ರಾಮದ ಇಬ್ಬರು ಮಹಾರಾಷ್ಟ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಮೃತಪಟ್ಟಿದ್ದು, ಈ ಇಬ್ಬರಿಗೂ ಎಚ್‌1ಎನ್‌1 ರೋಗ ತಗುಲಿದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹಾಗೇ, ಜಿಲ್ಲೆಯ ಬಹುತೇಕ ಜನರು ಪ್ರತಿನಿತ್ಯ ನೆರೆಯ ಮಹಾರಾಷ್ಟ್ರಕ್ಕೆ ತೆರಳುತ್ತಾರೆ. ಅಲ್ಲಿನ ಜನರು ಇಲ್ಲಿಗೆ ಬರುವುದು ಸಾಮಾನ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಸದ್ಯ ಎಚ್‌1ಎನ್‌1 ಶಂಕೆ ವ್ಯಕ್ತವಾಗಿರುವ ಮೃತರ ಎರಡೂ ಕುಟುಂಬದಲ್ಲಿ ಯಾರಿಗೂ ಅನಾರೋಗ್ಯ ಇಲ್ಲ ಎಂಬುವುದನ್ನು ಆರೋಗ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಲ್ಲದೆ, ಗ್ರಾಮಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಮೃತ ಕುಟುಂಬಸ್ಥರ ಗಂಟಲು ಸ್ರಾವದ ಮಾದರಿ ಪಡೆದು ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಿದೆ. ಅಲ್ಲದೆ, ಎರಡು ಗ್ರಾಮಗಳಲ್ಲಿ ಆರೋಗ್ಯ ಹಾಗೂ ಆಶಾ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಜ್ವರ ಸೇರಿದಂತೆ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸುವ ಕಾರ್ಯ ಆರಂಭಿಸಿದ್ದಾರೆ. ಈವರೆಗೆ ಹತ್ತಕ್ಕೂ ಅಧಿಕ ಜನರಿಗೆ ಸಾಮಾನ್ಯ ಜ್ವರ ಇರುವುದನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶಂಕೆ ಪ್ರಕರಣ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಆ ಎರಡು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದನ್ನು ಗಮನಿಸುತ್ತಿರುವ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಎಚ್‌1ಎನ್‌1 ವೈರಸ್‌ ಬಂದರೆ ಮರಣ ಖಚಿತವೇ ಎಂಬ ಬಗ್ಗೆ ಜನರಲ್ಲಿ ಆತಂಕ ಶುರುವಾಗಿವೆ.

ಸದ್ಯ ಭಾಲ್ಕಿ ತಾಲೂಕಿನ ಆ ಎರಡು ಗ್ರಾಮಗಳಲ್ಲಿ ಅಧಿಕಾರಿಗಳ ತಂಡ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಸುತ್ತಲಿನ ಅನೇಕ ಗ್ರಾಮಗಳ ಜನರು ಕೂಡ ಭಯದಲ್ಲಿದ್ದಾರೆ. ಹಾಗಾಗಿ, ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಜನರಲ್ಲಿನ ತಪ್ಪು ಕಲ್ಪನೆಗಳು, ವಿವಿಧ ವದಂತಿಗಳನ್ನು ಕೊನೆಗಾಣಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳು ತಕ್ಷಣ ಚಿಕಿತ್ಸೆ ಪಡೆದರೆ ಯಾವುದೇ ಸಮಸ್ಯೆ  ಉಲ್ಬಣಗೊಳ್ಳುವುದಿಲ್ಲ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಅಲ್ಲದೆ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕೂಡ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿದೆ.

ಪ್ರತಿನಿತ್ಯ ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಸಾವಿರಾರು ಜನರು ಬರುತ್ತಾರೆ. ಎಚ್‌1ಎನ್‌1 ಸಾಂಕ್ರಾಮಿಕ  ರೋಗವಾಗಿದ್ದು, ಒಬ್ಬರಿಂದ ಇನ್ನೊಬ್ಬರಿಗೆ ಬಹುಬೇಗ ಹರಡುತ್ತದೆ. ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಬಸ್‌, ರೈಲ್ವೆ ಪ್ರಯಾಣಿಕರು ಹೆಚ್ಚು ಮುಂಜಾಗ್ರತೆ ವಹಿಸುವುದು ಮುಖ್ಯ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.

ಬೀದರ ಜಿಲ್ಲೆಯಲ್ಲಿ ಸದ್ಯ ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗಿಲ್ಲ. ನೆರೆ ರಾಜ್ಯದಲ್ಲಿ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಜರಿದ್ದು, ರೋಗಿಗಳ ಚಿಕಿತ್ಸೆಗೆ ಮುಂದಾಗಬೇಕು. ಔಷಧಗಳ ಕೊರತೆ ಆಗದಂತೆ, ಜಿಲ್ಲೆಯ ಎಲ್ಲ ಶಾಲೆ, ಅಂಗನವಾಡಿ ಹಾಗೂ ಎಲ್ಲೆಡೆಯೂ ರೋಗದ ಮುನ್ನೆಚರಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಕೂಡ ತಿಳಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಸಹಾಯವಾಣಿ ತೆರೆದು ಪ್ರಕಣಗಳ ಪತ್ತೆಗೆ ಸೂಚಿಸಿದ್ದು, ಪ್ರಕರಣಗಳು ಪತ್ತೆಯಾದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿನ ವಿಶೇಷ ಘಟಕದಲ್ಲಿ ಚಿಕಿತ್ಸೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
 ಡಾ| ಎಚ್‌.ಆರ್‌. ಮಹಾದೇವ, ಜಿಲ್ಲಾಧಿಕಾರಿಗಳು

„ದುಯೋಧನ ಹೂಗಾರ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.