ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಯಾತನೆ


Team Udayavani, Sep 4, 2018, 2:04 PM IST

bid-1.jpg

ಬೀದರ: ಹುಮನಾಬಾದ ತಾಲೂಕಿನ ಘಾಟಬೋರಳ ಗ್ರಾಮದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಬೆಳಗ್ಗೆ 5 ಗಂಟೆಗೆ ಏಳುವ ವಿದ್ಯಾರ್ಥಿಗಳು ಶೌಚಾಲಯ ಹಾಗೂ ಸ್ನಾನಕ್ಕೆ ಸರತಿ ಸಾಲು ಹಚ್ಚುವ ಸ್ಥಿತಿಯಿದ್ದು, ಪ್ರತಿನಿತ್ಯ ಮಕ್ಕಳ ಹಕ್ಕುಗಳಿಗೆ ಧಕ್ಕೆ ತರಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿ ವರೆಗೆ 235 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ವಸತಿ ಸಹಿತ ಶಾಲೆ ಇದ್ದಾಗಿದ್ದು, ಪ್ರತಿನಿತ್ಯ ಶಾಲೆಯ ಮಕ್ಕಳು ಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದೆ. ವಸತಿ ನಿಲಯದಲ್ಲಿ ಯಾವುದೇ ಸೌಕರ್ಯಗಳು ಇಲ್ಲದಿರುವುದರಿಂದ ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಉಳಿದುಕೊಂಡಿದ್ದಾರೆ. ಬೆಳಗ್ಗೆ ಪ್ರತಿನಿತ್ಯ ಐದು ಗಂಟೆಗೆ ಏಳುವ ವಿದ್ಯಾರ್ಥಿನಿಯರು ಮೊದಲಿಗೆ ಶೌಚಾಲಯಕ್ಕೆ ತೆರಳಲು ಅರ್ಧಗಂಟೆ ಸಾಲಿನಲ್ಲಿ ನಿಲ್ಲಬೇಕು. ನಂತರ ಸ್ನಾನ ಮಾಡಲು ಕೂಡ ಅರ್ಧ ಗಂಟೆ ಸಾಲು, ಸ್ನಾನಕ್ಕೆ ವಿದ್ಯಾರ್ಥಿಗಳೇ ನೆಲ ಮಹಡಿಯಿಂದ ಎರಡನೇ
ಮಹಡಿಗೆ ನೀರು ತೆಗೆದುಕೊಂಡು ಹೊಗಬೇಕು.

ಅಲ್ಲದೇ ಬಟ್ಟೆ ತೊಳೆಯಲೂ ಸರತಿ ಸಾಲಿನಲ್ಲಿ ನಿಲ್ಲಬೇಕು. ನೆಲದಮೇಲೆ ಮಲಗುವ, ಶಾಲೆಯಲ್ಲಿ ಕೂಡ ನೆಲದ ಮೇಲೆ ಕುಳಿತು ಪಾಠ ಕೇಳುವ ವಿದ್ಯಾರ್ಥಿಗಳು ಸದ್ಯ ಓದುವುದೇ ಬೇಡ ಎಂಬ ಸ್ಥಿತಿಗೆ ಬಂದಿದ್ದಾರೆ. 

ಒಟ್ಟಾರೆ ಮಕ್ಕಳ ಅನುಸಾರ ಯಾವುದೇ ಮೂಲ ಸೌಕರ್ಯಗಳು ವಸತಿ ಶಾಲೆಯಲ್ಲಿ ಇಲ್ಲ ಎಂಬುದು ವಿದ್ಯಾರ್ಥಿನಿಯರ ಆರೋಪವಾಗಿದ್ದು, ಪಾಲಕರು ಕೂಡ ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ಯುವ ಆಲೋಚನೆಯಲ್ಲಿದ್ದಾರೆ.

ಯಾಕೆ ಸಮಸ್ಯೆ: ಹಳ್ಳಿಖೇಡ(ಕೆ) ಗ್ರಾಮದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಗಣದಲ್ಲಿಯೇ ಕೆಲ ವರ್ಷಗಳಿಂದ ಈ ಶಾಲೆಕೂಡ ನಡೆಯುತ್ತಿತ್ತು. ಅಲ್ಲಿ ಎಲ್ಲ ಮೂಲ ಸೌಕರ್ಯಗಳು ಮತ್ತು ಸುಸಜ್ಜಿತ ವಾತಾವರಣ ಇತ್ತು ಎಂಬುದು ವಿದ್ಯಾರ್ಥಿಗಳ ಮಾತು. ಆದರೆ, ಶಾಲೆಯ ಪ್ರಾಚಾರ್ಯ ಮೂಲ ಸೌಕರ್ಯಗಳ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವ ಕುರಿತು ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಪ್ರಾಚಾರ್ಯರ ಬೇಡಿಕೆ ಅನುಸಾರ ಮೇಲಾಧಿಕಾರಿಗಳು ಪತ್ರ ಬರೆದು ಮೂಲಭೂತ ಸೌಲಭ್ಯ ಪರಿಶೀಲಿಸಿ, ಬಾಡಿಗೆ ಕಟ್ಟಡದಲ್ಲಿ ಶಾಲೆ ನಡೆಸಲು ಸೂಚಿಸಿದ್ದಾರೆ. ಆದರೆ, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೇ ಸರ್ಕಾರದ ಹಣ ಲೂಟಿಗೆ ಅಧಿಕಾರಿಗಳು ಸಂಚು ಹಾಕಿದ್ದಾರೆ ಎಂಬುದು ನೂರಾರು ಪಾಲಕರ ಆರೋಪ.

ಪ್ರತಿಭಟನೆ: ಪ್ರತಿನಿತ್ಯ ಮಕ್ಕಳ ಗೋಳು ಕೇಳಿದ ಪಾಲಕರು ಆಕ್ರೋಶಗೊಂಡು ಸೋಮವಾರ ಶಾಲೆ ಹಾಗೂ ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮೀಸಿದ ಪ್ರೊಬೇಷನರಿ ಸಹಾಯಕ ಆಯುಕ್ತ ಡಾ| ನಾಗರಾಜ ಹಾಗೂ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮಸಾಗರ ದಾಂಡೇಕರ್‌ ಅವರಿಗೆ ಪಾಲಕರು ಘೇರಾವ್‌ ಹಾಕಿ ಸಮಸ್ಯೆ ಬಗ್ಗೆಹರಿಸುವಂತೆ ಒತ್ತಾಯಿಸಿದರು. 

ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುತ್ತಿದರೂ ಯಾಕೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ಮಕ್ಕಳು ಇಂತಹ ಶಾಲೆಯಲ್ಲಿ ಓದಿದ್ದರೆ ಮಕ್ಕಳ
ಕಷ್ಟ ಏನು ಎಂಬುದು ಅರಿವಾಗುತ್ತದೆ ಎಂದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

ಪಾಲಕರ ಗೋಳು: ಹಳ್ಳಿಖೇಡ(ಕೆ) ಮೊರಾರ್ಜಿ ಶಾಲೆಯಲ್ಲಿ ಎಲ್ಲ ವ್ಯವಸ್ಥೆ ಇತ್ತು. ಕೆಲವೊಂದು ಸಮಸ್ಯೆಗಳು ಇದ್ದವು. ಆದರೆ ಅವುಗಳನ್ನು ಅಲ್ಲಿಯೇ ಬಗೆಹರಿಸಿಕೊಳ್ಳಬೇಕಿತ್ತು. ಸರ್ಕಾರದ ಅನುದಾನ ಪಡೆದು ಇತರೆ ಕಟ್ಟಡ ನಿರ್ಮಿಸಿ ಮಕ್ಕಳಿಗೆ ಸೌಲಭ್ಯ ನೀಡಬೇಕಿತ್ತು. ಆದರೆ, ಅಧಿ ಕಾರಿಗಳು ಉದ್ದೇಶಪೂರ್ವಕ ಖಾಸಗಿ ಕಟ್ಟಡದ ಮಾಲೀಕರಿಗೆ ಲಾಭ ಮಾಡುವ ನಿಟ್ಟಿನಲ್ಲಿ ಶಾಲೆ ಸ್ಥಳಾಂತರ ಮಾಡಿದ್ದಾರೆ.

ಕಾರಣ ಮಕ್ಕಳು ಯಾತನೆ ಅನುಭವಿಸುತ್ತಿದ್ದಾರೆ. ಮಕ್ಕಳಿಗೆ ಕುಡಿವ ನೀರು ಸರಿ ಇಲ್ಲದ ಕಾರಣ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ. ಆರೋಗ್ಯ ತಪಾಸಣೆಗೆ ವೈದ್ಯರು ಅಥವಾ ದಾದಿ ಕೂಡ ಇಲ್ಲ. ಹೆಣ್ಣುಮಕ್ಕಳು ಇರುವ ವಸತಿ ನಿಲಯದಲ್ಲಿ ಯಾರೂ ವಾರ್ಡ್‌ನ್‌ ಇಲ್ಲ. ಸಿಸಿ ಕ್ಯಾಮರಾ ವ್ಯವಸ್ಥೆ ಇಲ್ಲ. ವಸತಿ ನಿಲಯಕ್ಕೆ ಸುತ್ತುಗೋಡೆ ಇಲ್ಲ. ವಿದ್ಯಾರ್ಥಿಗಳ ಅನುಸಾರು ಶೌಚಾಲಯಗಳ ವ್ಯವಸ್ಥೆ ಇಲ್ಲ. ಕೋಣೆಗಳು ಇಲ್ಲ.

ಯಾವ ಕಾನೂನು ಆಧಾರದಲ್ಲಿ ಇಂತಹ ಕಟ್ಟಡದಲ್ಲಿ ಮಕ್ಕಳ ವಸತಿಗೆ ಪರವಾನಗಿ ನೀಡಲಾಗಿದೆ? ಒಂದು ಹಾಲ್‌ನಲ್ಲಿ ನೂರು ಮಕ್ಕಳು ಹೇಗೆ ವಾಸ ಇರಲು ಸಾಧ್ಯ? ಕಟ್ಟಡ ಪರಿಶೀಲನೆ ನಡೆಸಿದ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮಕ್ಕಳ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವ ಮೂಲಕ ಹಳೆ ಕಟ್ಟಡದಲ್ಲೇ ಶಾಲೆ ಮುಂದುವರಿಸಬೇಕು ಎಂದು ಮಕ್ಕಳ ಪಾಲಕರಾದ ಗೌತಮ ಸೆಡೋಳ, ಅನೀತಾ ಮುತ್ತಂಗಿ, ಸಂಗೀತಾ ನಿರ್ಣಾ, ಲಕ್ಷ್ಮಣರಾವ್‌ ಒತ್ತಾಯಿಸಿದ್ದಾರೆ.

ಖಾಸಗಿ ಕಟ್ಟಡದಲ್ಲಿ ಮಕ್ಕಳ ಅನುಸಾರ ಮೂಲ ಸೌಲಭ್ಯಗಳು ಇಲ್ಲ. ಈ ಕುರಿತು ಪರಿಶೀಲಿಸಿದ್ದು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ವರದಿ ಸಲ್ಲಿಸುತ್ತೇನೆ. ಹಳೆ ಕಟ್ಟಡಕ್ಕೆ ವಸತಿ ಶಾಲೆ ವರ್ಗಾಯಿಸುವಂತೆ ಬೇಡಿಕೆಯಾಗಿದ್ದು, ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. 
 ಪ್ರೇಮಸಾಗರ ದಾಂಡೇಕರ್‌, ಸಮಾಜ ಕಲಾಣ ಅಧಿಕಾರಿ

ಹಳ್ಳಿಖೇಡ(ಕೆ) ಗ್ರಾಮದಿಂದ ಘಾಟಬೋರಳ್ಳ ಗ್ರಾಮಕ್ಕೆ ವರ್ಗಾವಣೆಗೊಂಡ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಅನೇಕ ಸಮಸ್ಯೆಗಳು ಇರುವ ಬಗ್ಗೆ ನಮ್ಮ ಅಧಿಕಾರಿಗಳ ಗಮನಕ್ಕೆ ಬಂದಿದೆ. ಕುಡಿವ ನೀರು ಸಮಸ್ಯೆಯಿಂದ 10 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಆಗಿರುವ ಕುರಿತು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.

ಶೌಚಾಲಯ, ಬಟ್ಟೆ ತೊಳೆಯುವುದು, ಓದಲು ಪ್ರತ್ಯೇಕ ಕೋಣೆ ಸಮಸ್ಯೆ ಇದೆ. ಒಂದೇ ಹಾಲ್‌ನಲ್ಲಿ ನೂರು ಮಕ್ಕಳು
ವಾಸಿಸುತ್ತಿರುವ ಬಗ್ಗೆ ಕೂಡ ತಿಳಿದುಬಂದಿದೆ. ಈ ಕುರಿತು ಜಿಲ್ಲಾ ಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು.
 ಶರಣಬಸಪ್ಪ ಕೊಟ್ಟಪಗೊಳ , ಸಹಾಯಕ ಆಯುಕ್ತರು ಬಸವಕಲ್ಯಾಣ 

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.