ಬೀದರ: ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮಾಚರಣೆ

ಸಂಕ್ರಾಂತಿ ದಿನದಂದು ಮಾತ್ರ ಎಳ್ಳು-ಬೆಲ್ಲ, ಹಣ್ಣು ಸೇವಿಸಿ ಹಬ್ಬವನ್ನು ಸ್ವಾಗತಿಸುವುದು ಸಾಮಾನ್ಯವಾಗಿತ್ತು.

Team Udayavani, Jan 15, 2021, 4:50 PM IST

ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮಾಚರಣೆ

ಬೀದರ: ಹೆಮ್ಮಾರಿ ಕೊರೊನಾ ಸೋಂಕು, ಪ್ರಕೃತಿ ವಿಕೋಪದ ನಡುವೆಯೂ ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಸುಗ್ಗಿಯ ಹಬ್ಬ ಮಕರ
ಸಂಕ್ರಾಂತಿಯನ್ನು ಸಡಗರ ಮತ್ತು ಸಂಭ್ರಮದೊಂದಿಗೆ ಆಚರಿಸಲಾಯಿತು. ಪ್ರತಿ ಹಬ್ಬ ತನ್ನದೆಯಾದ ಸಂಪ್ರದಾಯ ಮತ್ತು ವೈಶಿಷ್ಟತೆಗಳಿದ್ದು, ಅದರಲ್ಲಿ ಸಂಕ್ರಾಂತಿ ಎಲ್ಲ ಹಬ್ಬಕ್ಕಿಂತ ವಿಶೇಷ. ಹೆಣ್ಣು ಮಕ್ಕಳಿಗೆ ಸಂಭ್ರಮದ ಆಚರಣೆ ಒಂದೆಡೆಯಾದರೆ, ಗಂಡು ಮಕ್ಕಳು ಗಾಳಿಪಟ ಹಾರಿಸಿ ಸಂತಸ ಪಟ್ಟರು.

ಹಿಂದಿನ ಎರಡ್ಮೂರು ವರ್ಷ ಪ್ರಕೃತಿ ವಿಕೋಪದಿಂದ ಹಬ್ಬ ಸಂಭ್ರಮವನ್ನು ಮರೆಸಿತ್ತು. ಆದರೆ, ಈ ಬಾರಿ ಉತ್ತಮ ಮಳೆ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಪ್ರತಿಯೊಬ್ಬರ ಮನೆಯಲ್ಲಿ ಸುರ್ಯೋದಯವಾಗುತ್ತಿದ್ದಂತೆ ಸಂಭ್ರಮ ಆರಂಭವಾಗಿತ್ತು. ಹಬ್ಬಕ್ಕಾಗಿ ತಾಯಿ ಮಕ್ಕಳಿಗೆ ಚಿಗುಳು ಮತ್ತು ಎಣ್ಣೆ ನೀರು ಹಾಕಿ ಪುಣ್ಯ ಸ್ನಾನ ಮಾಡಿಸಿದರು. ಮನೆ ಮುಂದೆ ರಂಗೋಲಿ ಕಂಗೊಳಿಸುತ್ತಿತ್ತು. ನಿತ್ಯ ಚಹಾ ಅಥವಾ ಕಾಫಿಯಿಂದ ಆರಂಭವಾಗುವ ದಿನ ಸಂಕ್ರಾಂತಿ ದಿನದಂದು ಮಾತ್ರ ಎಳ್ಳು-ಬೆಲ್ಲ, ಹಣ್ಣು ಸೇವಿಸಿ ಹಬ್ಬವನ್ನು ಸ್ವಾಗತಿಸುವುದು ಸಾಮಾನ್ಯವಾಗಿತ್ತು.

ನಂತರ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಹೊಸ ಬಟ್ಟೆಗಳನ್ನ ತೊಟ್ಟು ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುವುದು ಮತ್ತು ಸಂಜೆ ಹೊತ್ತಿಗೆ ಸಂಬಂಧಿಕರು ಮತ್ತು ಗೆಳೆಯರ ಮನೆಗಳಿಗೆ ತೆರಳಿ ಎಳ್ಳು ಬೀರಿ ಶುಭಾಷಯ ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ಹಬ್ಬದ ನಿಮಿತ್ತ ಎಳ್ಳು ಬೀರುವುದರ ಜೊತೆಗೆ ಪ್ರತಿ ಮನೆಯಲ್ಲಿ ಮುತ್ತೈದೆಯವರಿಗೆ ಉಡುಗೊರೆ ನೀಡುವ ಕಾರ್ಯಕ್ರಮಗಳು ಸಹ ಜರುಗಿದವು.

ಹಬ್ಬದ ನಿಮಿತ್ತ ಮನೆಗಳಲ್ಲಿ ವಿಶೇಷ ಭಕ್ಷ್ಯ ಸಿದ್ಧಪಡಿಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ವಿಶೇಷ ಬೇಳೆ ಹೊಳಿಗೆ, ಕಾಯಿ ಹೋಳಿಗೆ, ಪಾಯಸ, ಕೊಡಬೇಳೆ ಮತ್ತು ಕರಜಿಕಾಯಿ ಸೇರಿದಂತೆ ಅನೇಕ ಸಿಹಿ ಪದಾರ್ಥಗಳನ್ನು ಮನೆಯ ಸದಸ್ಯರು ಸೇರಿ ಊಟದ ಸವಿಯನ್ನು ಸವಿಸಿದರು. ಗ್ರಾಮೀಣ ಭಾಗದಲ್ಲಿ ಈ ಹಬ್ಬವನ್ನು ಇನ್ನಷ್ಟು ವಿಶೇಷವಾಗಿ ಆಚರಿಸಲಾಯಿತು. ನಗರದ ಕೆಲವೆಡೆ ರಂಗೋಲಿ ಸ್ಪರ್ಧೆಗಳನ್ನು ನಡೆಸಲಾಯಿತು. ಮಹಿಳೆಯರು ಬಗೆಬಗೆಯ ಚಿತ್ತಾರಗಳನ್ನು ಅರಳಿಸಿದರು.

ಜಿಲ್ಲೆಯಲ್ಲಿ ವಿವಿಧೆಡೆಗಳಲ್ಲಿ ಎಳ್ಳು-ಬೆಲ್ಲ ವಿನಿಮಯದ ಮೂಲಕ ಸಂಕ್ರಾಂತಿ ಹಬ್ಬ ಆಚರಿಸಿದರೆ ಹುಮನಾಬಾದ ಮತ್ತು ಇತರೆಡೆ ಬಣ್ಣ ಬಣ್ಣದ ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಲಾಯಿತು. ಬಾನಂಗಣದಲ್ಲಿ ಗಾಳಿಪಟ-ಪತಂಗಗಳ ನಯನ ಮನೋಹರ ಚಿತ್ತಾರ ಆಕರ್ಷಿಸಿತು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.