ಬೀದರ: ಜಿಲ್ಲೆಯಲ್ಲಿ ನಿಲ್ಲದ ವರುಣನಾರ್ಭಟ

24 ಗಂಟೆಯಲ್ಲಿ 31 ಮಿಮಿ ಮಳೆ; ಒಡೆದ ಕೆರೆಗೆ ಹುಲಸೂರು ತತ್ತರ

Team Udayavani, Sep 17, 2020, 9:05 PM IST

ಬೀದರ: ಜಿಲ್ಲೆಯಲ್ಲಿ ನಿಲ್ಲದ ವರುಣನಾರ್ಭಟ

ಬೀದರ/ಹುಲಸೂರು: ಸತತತ ಮೂರು ದಿನಗಳಿಂದ ಆರ್ಭಟಿಸುತ್ತಿರುವ ಮಳೆಗೆ ಗಡಿ ಜಿಲ್ಲೆ ಬೀದರ ತತ್ತರಿಸಿದೆ. ಬುಧವಾರ ರಾತ್ರಿಯಿಂದ ಗುರುವಾರ ರಾತ್ರಿವರೆಗೆ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ತಾಲೂಕುಗಳು ನಲುಗಿ ಹೋಗಿವೆ. ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಸಾವಿರಾರು ಹೇಕ್ಟರ್ ಪ್ರದೇಶದ ಬೆಳೆಗಳು ನೀರು ಪಾಲಾಗಿದ್ದರೆ, ಅನೇಕ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತವಾಗಿವೆ. ಮನೆಗಳು ಭಾಗಶ: ಕುಸಿದು ಜನರ ಬದುಕನ್ನು ಅತಂತ್ರಗೊಳಿಸಿದೆ.

ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಗುರುವಾರ ಬೆಳಿಗ್ಗೆವರೆಗೆ 31 ಮಿಮಿನಷ್ಟು (ವಾಡಿಗೆ ಮಳೆ 6 ಮಿಮಿ) ಮಳೆ ಬಿದ್ದಿದೆ. ಹುಲಸೂರು ತಾಲೂಕಿನಲ್ಲಿ ಅತಿ ಹೆಚ್ಚು 50 ಮಿಮಿ ಮಳೆ ಬಿದ್ದರೆ, ಕಮಲನಗರದಲ್ಲಿ 10 ಮಿಮಿ ಮಳೆಯಾಗಿದೆ. ಬೀದರ 47 ಮಿಮಿ, ಬಸವಕಲ್ಯಾಣ 35 ಮಿಮಿ, ಚಿಟಗುಪ್ಪ 32 ಮಿಮಿ, ಔರಾದ ತಾಲೂಕಿನಲ್ಲಿ 14 ಮಿಮಿ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಜನೆವರಿಯಿಂದ ಈವರೆಗೆ 65೦ ಮಿಮಿ ವಾಡಿಕೆ ಮಳೆಗಿಂತ 797 ಮಿಮೀ ಮಳೆ ಬಂದಿದೆ.

ತಾಲೂಕು ಕೇಂದ್ರ ಹುಲಸೂರ ಸಮೀಪದ ಕಾಮಶೆಟ್ಟಿ ಕೆರೆ ಒಡೆದು ಸುತ್ತಲಿನ ಜಮೀನು ಮಾತ್ರವಲ್ಲ, ಪಟ್ಟಣದ ಕೆಲ ಪ್ರದೇಶ ಜಲಾವೃತಗೊಂಡಿದ್ದು, ಸಾಕಷ್ಟು ಪ್ರಮಾಣದಲ್ಲಿ ಕೈಗೆ ಬಂದಿದ್ದ ಬೆಳೆ ಮಣ್ಣು ಪಾಲಾಗಿದೆ. ಪಟ್ಟಣದ ಹತ್ತಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಳಿಸಿದೆ. ಕಳೆದ ಬೆಸಿಗೆಯಲ್ಲಿ ಕೆರೆಯ ಹೂಳು ತೆಗೆದಿದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹ ಆಗಿತ್ತು. ಕಮಲನಗರ- ಔರಾದ ಸಂಪರ್ಕ ರಸ್ತೆ ಸೇರಿ ತಾಲೂಕಿನ ಹಕ್ಯಾಳ-ರಂಡ್ಯಾಳ್, ಖೇಡ್-ಸಂಗಮ್, ಬಳತ್- ಕುಶನೂರ, ಕಮಲನಗರ- ರಾಂಪುರ್, ಬೆಳಕುಣಿ- ಡೊಣಗಾಂವ್ ಸೇತೆವೆಗಳು ಮುಳುಗಿ, ಸುತ್ತಲಿನ ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

ಬೀದರ, ಭಾಲ್ಕಿ ಮತ್ತು ಬಸವಕಲ್ಯಾಣ ತಾಲೂಕಿನಲ್ಲಿ ಭಾರಿ ಮಳೆ ಸುರಿದಿದ್ದು, ಜಮೀನುಗಳಿಗೆ ನೀರು ಜಲಾವೃತಗೊಂಡು ರಾಶಿಗೆ ಬಂದಿದ್ದ ಉದ್ದು, ಹೆಸರು ಬೆಳೆ ಹಾನಿಯಾಗಿದೆ. ಸೋಯಾ ಮತ್ತು ಕಬ್ಬು ಸಹ ನೆಲಸಮಗೊಂಡಿದ್ದು, ರೈತರನ್ನು ಕಣ್ಣೀರಲ್ಲಿ ಕೈತಳೆಯುವಂತೆ ಮಾಡಿದೆ. ಜಿಲ್ಲೆಯ ಅನೇಕ ಕೆರೆಗಳು ಅಪಾಯದ ಮಟ್ಟ ಮೀರಿ ತುಂಬಿರುವುದರಿಂದ ಸುತ್ತಲಿನ ಜಮೀನುಗಳಿಗೆ ನೀರು ಆವರಿಸಿ, ಬೆಳೆಗಳಿಗೆ ಧಕ್ಕೆ ತಂದಿದೆ. ಬೀದರ ತಾಲೂಕಿನ ಮನ್ನಳ್ಳಿ ಬಳಿ ದೊಡ್ಡ ಕೆರೆ ತುಂಬಿ ತುಳುಕಿ ರಸ್ತೆಗೆ ಇಳಿದಿದ್ದು ಸಂಚಾರಕ್ಕೆ ತೊಡಕಾಗಿದೆ. ಹುಮನಾಬಾದ ಮತ್ತು ಹುಲಸೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸತತ ಮಳೆಯಿಂದ ಮನೆಗಳು ಶಿಥತಲಗೊಂಡು ಭಾಗಶ: ಕುಸಿದಿವೆ. ಮಾಂಜ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನಲೆ ನದಿ ಪಾತ್ರದ ಜಮೀನುಗಳಲ್ಲೂ ನೀರು ಸಂಗ್ರಹವಾಗಿ ಬೆಳೆಗಳು ಸುಟ್ಟು ಹೋಗಿದ್ದು, ಗ್ರಾಮಸ್ಥರಲ್ಲಿ ಈಗ ನೆರೆ ಆತಂಕ ಶುರುವಾಗಿದೆ.

ಮಳೆ ಅಬ್ಬರದಿಂದ ಬೀದರ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಗುರುವಾರ ಮಧ್ಯಾಹ್ನ ಎರಡು ಗಂಟೆಗಳ ಕಾಲ ಮಳೆ ಆರ್ಭಟದಿಂದ ತಗ್ಗು ಪ್ರದೇಶದ ಅಂಗಡಿ ಮುಗ್ಗಟ್ಟು, ಮನೆಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಸಿತ್ತು. ಅವೈಜ್ಞಾನಿಕ ಚರಂಡಿಗಳು, ಹೂಳು ತೆಗೆಯದೇ ನಿರ್ಲಕ್ಷಸಿರುವುದರಿಂದ ನೀರು ಸರಾಗವಾಗಿ ಸಾಗಲು ಸಾಧ್ಯವಾಗದೇ ನೀರು ರಸ್ತೆಯಲ್ಲೇ ಜಲಾವೃತಗೊಂಡಿತ್ತು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.