ಆಲಗೂಡ ಗ್ರಾಮದ ಬಳಿ ಹೆಬ್ಟಾವು ಪ್ರತ್ಯಕ್ಷ
Team Udayavani, Aug 19, 2017, 12:54 PM IST
ಬಸವಕಲ್ಯಾಣ: ಕೃಷಿ ಚಟುವಟಿಕೆಯಲ್ಲಿ ತೊಡಗಿದ ವೇಳೆ ಹೆಬ್ಟಾವು ಪ್ರತ್ಯಕ್ಷವಾದ ಘಟನೆ ತಾಲೂಕಿನ ಆಲಗೂಡ ಗ್ರಾಮದ ವ್ಯಾಪ್ತಿಯ ಜಮೀನಿನಲ್ಲಿ ನಡೆದಿದೆ. ಗ್ರಾಮದ ವಿಠ್ಠಲ ಪೂಜಾರಿ ಎನ್ನುವರ ಜಮೀನಿನಲ್ಲಿ ಪ್ರತ್ಯಕ್ಷವಾದ ಹೆಬ್ಟಾವು ಸುಮಾರು 10 ಅಡಿ ಉದ್ದ ವಿದ್ದು, 40 ಕೆಜಿ ತೂಕ ಹೊಂದಿದೆ. ಆಲಗೂಡ ಗ್ರಾಮದ ವಿಠಲ ಪೂಜಾರಿ ಅವರ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಹಂದ್ರಾಳ ಗ್ರಾಮದ ಅಂಬಾದಾಸ ಮೆಕಾಲೆ ಅವರಿಗೆ ಹಾವು ಕಾಣಿಸಿದೆ. ಹೊಲದಲ್ಲಿ ಹುಲ್ಲು ಮೇಯುತ್ತಿದ್ದ ಆಕಳು ಕರು ಇರುವ ಕಡೆಗೆ ಹಾವು ಬರುತ್ತಿರುವುದನ್ನು ಗಮನಿಸಿದ ಅಂಬಾದಾಸ, ಅಕ್ಕಪಕ್ಕದ ಹೊಲಗಳಲ್ಲಿರುವ ರೈತರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಅದನ್ನು ಅರಣ್ಯ ಇಲಾಖೆಯವರಿಗೆ ಒಪ್ಪಿಸಲಾಗಿದೆ ಎಂದು ವಿಠಲ ಪೂಜಾರಿ ತಿಳಿಸಿದ್ದಾರೆ. ಸುದ್ದಿ ತಿಳಿದ ಮಂಠಾಳ ಠಾಣೆ ಪಿಎಸ್ಐ ಅಮೂಲ ಕಾಳೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾವನ್ನು ಅರಣ್ಯ ಪ್ರದೇಶದ ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ ಎಂದು ಆರ್ಎಫ್ಒ ಅಲಿಯೋದ್ದಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ